AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾದ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ದೆಹಲಿಯ ಆಜಾದ್‌ಪುರ ಮಂಡಿಯಲ್ಲಿ ಬೆಂಕಿ ಅವಘಡ

Azadpur Mandi: ಪ್ರಾಥಮಿಕ ವರದಿಗಳ ಪ್ರಕಾರ, ಮಾರುಕಟ್ಟೆಯಲ್ಲಿನ ಟೊಮೆಟೊ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅತಿದೊಡ್ಡ ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಶೆಡ್‌ ಉರಿಯುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ. 11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಸಾವು ನೋವು ಬಗ್ಗೆ ಈವರೆಗೆ ವರದಿ ಆಗಿಲ್ಲ.

ಏಷ್ಯಾದ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ದೆಹಲಿಯ ಆಜಾದ್‌ಪುರ ಮಂಡಿಯಲ್ಲಿ ಬೆಂಕಿ ಅವಘಡ
ಆಜಾದ್​​ಪುರ್ ಮಂಡಿ
ರಶ್ಮಿ ಕಲ್ಲಕಟ್ಟ
|

Updated on:Sep 29, 2023 | 7:20 PM

Share

ದೆಹಲಿ ಸೆಪ್ಟೆಂಬರ್ 29: ದೆಹಲಿಯ (Delhi) ಆಜಾದ್‌ಪುರ ಮಂಡಿಯಲ್ಲಿ (Azadpur Mandi) ಶುಕ್ರವಾರ ಸಂಜೆ 5:20ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನಿಷ್ಠ 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮಾರುಕಟ್ಟೆಯಲ್ಲಿನ ಟೊಮೆಟೊ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅತಿದೊಡ್ಡ ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಶೆಡ್‌ ಉರಿಯುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ.

11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಸಾವು ನೋವು ಬಗ್ಗೆ ಈವರೆಗೆ ವರದಿ ಆಗಿಲ್ಲ.

ಆಜಾದ್‌ಪುರ ಗೇಟ್ ನಂ. 1 ರ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ನಮಗೆ ಸಿಕ್ಕಿತು. ನಾವು ಅದನ್ನು ಸಂಪೂರ್ಣವಾಗಿ ನಂದಿಸಿದ್ದೇವೆ. ಯಾರಿಗೂ ಗಾಯವಾಗಿಲ್ಲ. ಘಟನಾ ಸ್ಥಳದಲ್ಲಿ 7-8 ವಾಹನಗಳಿವೆ.  ಅಗ್ನಿ ಅವಘಡಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ. ನಮ್ಮ ವಾಹನ ವೇಗವಾಗಿ ಬಂದಿದ್ದು, 15-20 ನಿಮಿಷದಲ್ಲಿ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ಠಾಣಾಧಿಕಾರಿ ಪರಸ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ.

ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ, ಪ್ಲಾಸ್ಟಿಕ್ ಪೆಟ್ಟಿಗೆಗೆ ಮೊದಲು ಬೆಂಕಿ ಹತ್ತಿಕೊಂಡಿತು ಎಂದು ಸ್ಥಳದಲ್ಲಿದ್ದವರು ಹೇಳುತ್ತಾರೆ. ಇದಾದ ಬಳಿಕ ಬೆಂಕಿ  ಆವರಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Fri, 29 September 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ