AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಗ್ಲೌಸ್​ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ, 6 ಮಂದಿ ಸಾವು, ಹಲವರಿಗೆ ಗಾಯ

ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿರುವ ಹ್ಯಾಂಡ್ ಗ್ಲೌಸ್ ತಯಾರಿಕಾ ಕಂಪನಿಯೊಂದರಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ: ಗ್ಲೌಸ್​ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ, 6 ಮಂದಿ ಸಾವು, ಹಲವರಿಗೆ ಗಾಯ
ಅಗ್ನಿ ಅವಘಡ
ನಯನಾ ರಾಜೀವ್
|

Updated on: Dec 31, 2023 | 8:03 AM

Share

ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿರುವ ಹ್ಯಾಂಡ್ ಗ್ಲೌಸ್ ತಯಾರಿಕಾ ಕಂಪನಿಯೊಂದರಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಧಿಕಾರಿಗಳ ಪ್ರಕಾರ, ಅಗ್ನಿಶಾಮಕ ಟೆಂಡರ್‌ಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಕಟ್ಟಡದೊಳಗೆ ಸಿಲುಕಿರುವ ವ್ಯಕ್ತಿಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಬೆಳಗಿನ ವೇಳೆಗೆ ಬೆಂಕಿ ಹತೋಟಿಗೆ ಬಂದಿದೆ.

ರಾತ್ರಿ ವೇಳೆ ಕಾರ್ಖಾನೆ ಮುಚ್ಚಿದ್ದು, ಬೆಂಕಿ ಹೊತ್ತಿಕೊಂಡಾಗ ಅವರು ಮಲಗಿದ್ದರು ಎಂದು ಕಾರ್ಮಿಕರು ತಿಳಿಸಿದ್ದಾರೆ. ಈ ವೇಳೆ ಸುಮಾರು 10-15 ಮಂದಿ ಕಟ್ಟಡದೊಳಗೆ ಸಿಲುಕಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Bengaluru Fire Accident: ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಅಗ್ನಿ ಅವಘಡ, ಹೊತ್ತಿ ಉರಿದ ಮೂರು ಅಂತಸ್ತಿನ ಕಟ್ಟಡ

ಅಗ್ನಿಶಾಮಕ ಅಧಿಕಾರಿ ಮೋಹನ್ ಮುಂಗ್ಸೆ ಮಾತನಾಡಿ, ನಮಗೆ 2.15ರ ಸುಮಾರಿಗೆ ಕರೆ ಬಂದಿತ್ತು, 6 ಜನರ ದೇಹವನ್ನು ಹೊರಗೆ ತೆಗೆಯಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಬುಲ್ಲಾ ಶೇಖ್ (65), ಕೌಸರ್ ಶೇಖ್ (26), ಇಕ್ಬಾಲ್ ಶೇಖ್ (26), ಮತ್ತು ಮಗ್ರೂಫ್ ಶೇಖ್ (25) ಎಂದು ಗುರುತಿಸಲಾಗಿದೆ.

ಬೆಂಕಿ ಹೊತ್ತಿಕೊಂಡಾಗ ಕಟ್ಟಡದೊಳಗೆ 10-15 ಜನರಿದ್ದರು. ಕೆಲವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು, ಆದರೆ ಇತರರು ಇನ್ನೂ ಒಳಗೆ ಸಿಲುಕಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ