AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್​​​ನಲ್ಲಿ ಭಾರೀ ಬೆಂಕಿ; ಕೆಲಸಗಾರರ ರಕ್ಷಣೆ

ಎಚ್​ಪಿಸಿಎಲ್​ನ ಕಚ್ಚಾ ಶುದ್ಧೀಕರಣ ಘಟಕದ ಪೈಪ್​​ಲೈನ್​ನಲ್ಲಿ ಸ್ಫೋಟವಾಗಿದ್ದೇ ಹೀಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್​​​ನಲ್ಲಿ ಭಾರೀ ಬೆಂಕಿ; ಕೆಲಸಗಾರರ ರಕ್ಷಣೆ
ಎಚ್​​ಪಿಸಿಎಲ್​​ನಲ್ಲಿ ಬೆಂಕಿ
Follow us
Lakshmi Hegde
|

Updated on:May 25, 2021 | 4:58 PM

ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್​ (HPCL)ನಲ್ಲಿ ಇಂದು ಮಧ್ಯಾಹ್ನ ತೀವ್ರವಾದ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲಿದ್ದ ಎಲ್ಲ ಕೆಲಸಗಾರರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಎಚ್​​ಪಿಎಲ್​ ಘಟಕದಲ್ಲಿ ಏನೋ ಸ್ಫೋಟಗೊಂಡ ಶಬ್ದ ಕೇಳಿತು. ಅದರ ಬೆನ್ನಲ್ಲೇ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಸುಮಾರು 6 ಮಂದಿ ಘಟಕದೊಳಗೆ ಕೆಲಸ ಮಾಡುತ್ತಿದ್ದರು. ಅವರನ್ನೆಲ್ಲರನ್ನೂ ಸ್ಥಳಾಂತರ ಮಾಡಲಾಗಿದೆ. ಯಾವುದೇ ಸಾವಿನ, ಗಾಯದ ಪ್ರಕರಣಗಳು ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಹಾಗೇ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಎಚ್​ಪಿಸಿಎಲ್​ನ ಕಚ್ಚಾ ಶುದ್ಧೀಕರಣ ಘಟಕದ ಪೈಪ್​​ಲೈನ್​ನಲ್ಲಿ ಸ್ಫೋಟವಾಗಿದ್ದೇ ಹೀಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಈ ಸಿಡಿಯುವನ್ನು ಮುಚ್ಚಲಾಗಿದೆ.

ಇದನ್ನೂ ಓದಿ: ರಾಮನಗರ ಕ್ಷೇತ್ರಕ್ಕೆ ಆಂಬ್ಯುಲೆನ್ಸ್ ಗಳನ್ನ ಬಿಡಲು ಯೋಚನೆ ಮಾಡಿದ್ದೆ.. ಕೊವಿಡ್ ಅನಿವಾರ್ಯ ಸಂದರ್ಭದಲ್ಲಿ ಕೊಟ್ಟಿದ್ದೇವೆ

Published On - 4:58 pm, Tue, 25 May 21

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ