AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್​​​ನಲ್ಲಿ ಭಾರೀ ಬೆಂಕಿ; ಕೆಲಸಗಾರರ ರಕ್ಷಣೆ

ಎಚ್​ಪಿಸಿಎಲ್​ನ ಕಚ್ಚಾ ಶುದ್ಧೀಕರಣ ಘಟಕದ ಪೈಪ್​​ಲೈನ್​ನಲ್ಲಿ ಸ್ಫೋಟವಾಗಿದ್ದೇ ಹೀಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್​​​ನಲ್ಲಿ ಭಾರೀ ಬೆಂಕಿ; ಕೆಲಸಗಾರರ ರಕ್ಷಣೆ
ಎಚ್​​ಪಿಸಿಎಲ್​​ನಲ್ಲಿ ಬೆಂಕಿ
Lakshmi Hegde
|

Updated on:May 25, 2021 | 4:58 PM

Share

ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಹಿಂದುಸ್ತಾನ್​ ಪೆಟ್ರೋಲಿಯಂ ಕಾರ್ಪೋರೇಶನ್​​ ಲಿಮಿಟೆಡ್​ (HPCL)ನಲ್ಲಿ ಇಂದು ಮಧ್ಯಾಹ್ನ ತೀವ್ರವಾದ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲಿದ್ದ ಎಲ್ಲ ಕೆಲಸಗಾರರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಎಚ್​​ಪಿಎಲ್​ ಘಟಕದಲ್ಲಿ ಏನೋ ಸ್ಫೋಟಗೊಂಡ ಶಬ್ದ ಕೇಳಿತು. ಅದರ ಬೆನ್ನಲ್ಲೇ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಸುಮಾರು 6 ಮಂದಿ ಘಟಕದೊಳಗೆ ಕೆಲಸ ಮಾಡುತ್ತಿದ್ದರು. ಅವರನ್ನೆಲ್ಲರನ್ನೂ ಸ್ಥಳಾಂತರ ಮಾಡಲಾಗಿದೆ. ಯಾವುದೇ ಸಾವಿನ, ಗಾಯದ ಪ್ರಕರಣಗಳು ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಹಾಗೇ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಎಚ್​ಪಿಸಿಎಲ್​ನ ಕಚ್ಚಾ ಶುದ್ಧೀಕರಣ ಘಟಕದ ಪೈಪ್​​ಲೈನ್​ನಲ್ಲಿ ಸ್ಫೋಟವಾಗಿದ್ದೇ ಹೀಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಈ ಸಿಡಿಯುವನ್ನು ಮುಚ್ಚಲಾಗಿದೆ.

ಇದನ್ನೂ ಓದಿ: ರಾಮನಗರ ಕ್ಷೇತ್ರಕ್ಕೆ ಆಂಬ್ಯುಲೆನ್ಸ್ ಗಳನ್ನ ಬಿಡಲು ಯೋಚನೆ ಮಾಡಿದ್ದೆ.. ಕೊವಿಡ್ ಅನಿವಾರ್ಯ ಸಂದರ್ಭದಲ್ಲಿ ಕೊಟ್ಟಿದ್ದೇವೆ

Published On - 4:58 pm, Tue, 25 May 21

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ