AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಕಾಲ್ತುಳಿತ ದುರಂತದ ಬೆನ್ನಲ್ಲೇ ತಿರುಮಲ ಲಡ್ಡು ಕೌಂಟರ್‌ನಲ್ಲಿ ಬೆಂಕಿ ಅವಘಡ

ತಿರುಪತಿಯಲ್ಲಿ ಕೆಲವು ದಿನಗಳ ಹಿಂದೆ ವೈಕುಂಠ ಏಕಾದಶಿ ಟಿಕೆಟ್ ಕೌಂಟರ್​ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಗಿತ್ತು. ಈ ದುರಂತದಲ್ಲಿ 6 ಜನ ಮೃತಪಟ್ಟಿದ್ದರು ಹಾಗೂ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅದರ ಬೆನ್ನಲ್ಲೇ ತಿರುಪತಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಇಂದು ತಿರುಮಲ ಲಡ್ಡು ಕೌಂಟರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಕ್ತರು ಓಡಿಹೋಗಿ ಅಪಾಯದಿಂದ ಪಾರಾಗಿದ್ದಾರೆ.

ಸುಷ್ಮಾ ಚಕ್ರೆ
|

Updated on:Jan 13, 2025 | 3:42 PM

Share

ತಿರುಮಲ: ತಿರುಪತಿ ವೆಂಕಟೇಶ್ವರ ದೇವಸ್ಥಾನದ ಟಿಕೆಟ್ ಕೌಂಟರ್​ನಲ್ಲಿ ಕಾಲ್ತುಳಿತ ಉಂಟಾಗಿ 6 ಜನ ಮೃತಪಟ್ಟಿದ್ದರು. ಇದಾದ ಬಳಿಕ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ದುರಂತದಲ್ಲಿ ಮೃತಪಟ್ಟಿರುವವರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಇದೀಗ ಇಂದು ತಿರುಮಲ ಲಡ್ಡು ಕೌಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಯಭೀತರಾಗಿ ಭಕ್ತರು ಸ್ಥಳದಿಂದ ಓಡಿಹೋಗಿದ್ದಾರೆ. ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

ತಿರುಮಲದ ವೆಂಕಟೇಶ್ವರ ದೇವಸ್ಥಾನದ ಲಡ್ಡು ವಿತರಣಾ ಕೌಂಟರ್‌ನಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ಆಂಧ್ರಪ್ರದೇಶದ ತಿರುಮಲ ಲಡ್ಡು ಕೌಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದು ವೆಂಕಟೇಶ್ವರ ಸ್ವಾಮಿಯ ಪವಿತ್ರ ಪ್ರಸಾದವನ್ನು ಪಡೆಯುತ್ತಿದ್ದ ಭಕ್ತರಲ್ಲಿ ಭಯ ಹುಟ್ಟಿಸಿದೆ. ಕೌಂಟರ್ ಸಂಖ್ಯೆ 47ರಲ್ಲಿ ಸಂಭವಿಸಿದ ಬೆಂಕಿಯು ಕಂಪ್ಯೂಟರ್ ಸೆಟಪ್‌ಗೆ ಲಿಂಕ್ ಮಾಡಲಾದ ನಿರಂತರ ವಿದ್ಯುತ್ ಸರಬರಾಜು (ಯುಪಿಎಸ್) ವ್ಯವಸ್ಥೆಯಲ್ಲಿನ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ತಿರುಪತಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಟೋಕನ್ ಕೌಂಟರ್‌ನಲ್ಲಿ ಕಾಲ್ತುಳಿತ; ನಾಲ್ವರು ಭಕ್ತರ ಸಾವು

ಬೆಂಕಿ ಹರಡುತ್ತಿದ್ದಂತೆ ಭಕ್ತರು ಭಯಭೀತರಾಗಿ ಸ್ಥಳದಿಂದ ಓಡಿಹೋದರು. ಅದಕ್ಕೆ ಸಿಬ್ಬಂದಿ ತಕ್ಷಣ ಪ್ರತಿಕ್ರಿಯಿಸಿದರು. ಇದು ಅಪಾಯವನ್ನುಂಟುಮಾಡುವ ಮೊದಲು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಜನವರಿ 8ರಂದು ತಿರುಪತಿಯ ವೈಕುಂಠ ದ್ವಾರ ದರ್ಶನ ಟಿಕೆಟ್ ವಿತರಣಾ ಕೇಂದ್ರದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತದ ಕೆಲವೇ ದಿನಗಳ ನಂತರ ಈ ಘಟನೆ ನಡೆದಿದೆ. ಈ ದುರಂತದಲ್ಲಿ 6 ಜನರು ಸಾವನ್ನಪ್ಪಿದ್ದರು ಮತ್ತು ಹಲವಾರು ಜನರು ಗಾಯಗೊಂಡಿದ್ದರು. 10 ದಿನಗಳ ವಿಶೇಷ ದರ್ಶನಕ್ಕಾಗಿ ಟೋಕನ್‌ಗಳಿಗಾಗಿ ಕಾಯುತ್ತಿದ್ದ 4,000ಕ್ಕೂ ಹೆಚ್ಚು ಭಕ್ತರ ಸಮ್ಮುಖದಲ್ಲಿ ಈ ಕಾಲ್ತುಳಿತ ಸಂಭವಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Mon, 13 January 25

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ