AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಭರೂಚ್​​ ಕೊವಿಡ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 18 ಜನ ಸೋಂಕಿತರು ದುರ್ಮರಣ

ಆಸ್ಪತ್ರೆಯಲ್ಲಿ ಸುಮಾರು 50 ಜನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಆ ಪೈಕಿ 24 ಜನ ಐಸಿಯುನಲ್ಲಿ ದಾಖಲಾಗಿದ್ದರು. ಏಕಾಏಕಿ ನಸುಕಿನ ವೇಳೆ ಅಗ್ನಿ ಅವಘಡ ಸಂಭವಿಸಿದ ಕಾರಣ ಎಲ್ಲರನ್ನೂ ಉಳಿಸಿಕೊಳ್ಳುವಲ್ಲಿ ಸಿಬ್ಬಂದಿ ವಿಫಲರಾಗಿದ್ದಾರೆ. ಆರಂಭದಲ್ಲಿ 12 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಇದೀಗ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿರುವುದು ತಿಳಿದುಬಂದಿದೆ.

ಗುಜರಾತ್​ನ ಭರೂಚ್​​ ಕೊವಿಡ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 18 ಜನ ಸೋಂಕಿತರು ದುರ್ಮರಣ
ದುರ್ಘಟನೆಯ ದೃಶ್ಯ (ಎಎನ್​ಐ)
Skanda
|

Updated on:May 01, 2021 | 7:45 AM

Share

ಗಾಂಧಿನಗರ: ಗುಜರಾತ್ ರಾಜ್ಯದ ಭರೂಚ್ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 18 ಜನ ದುರ್ಮರಣಕ್ಕೀಡಾಗಿದ್ದಾರೆ. ಇಂದು (ಮೇ.1) ನಸುಕಿನ ವೇಳೆಯಲ್ಲಿ ಸಂಭವಿಸಿದ ಅನಾಹುತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರು ಮೃತಪಟ್ಟಿದ್ದು, ಬದುಕುಳಿದವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಸುಕಿನ ಜಾವ 1 ಗಂಟೆಯ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ದುರಂತಕ್ಕೆ ಶಾರ್ಟ್​ ಸರ್ಕ್ಯೂಟ್ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ಆಸ್ಪತ್ರೆಯಲ್ಲಿ ಸುಮಾರು 50 ಜನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಆ ಪೈಕಿ 24 ಜನ ಐಸಿಯುನಲ್ಲಿ ದಾಖಲಾಗಿದ್ದರು. ಏಕಾಏಕಿ ನಸುಕಿನ ವೇಳೆ ಅಗ್ನಿ ಅವಘಡ ಸಂಭವಿಸಿದ ಕಾರಣ ಎಲ್ಲರನ್ನೂ ಉಳಿಸಿಕೊಳ್ಳುವಲ್ಲಿ ಸಿಬ್ಬಂದಿ ವಿಫಲರಾಗಿದ್ದಾರೆ. ಆರಂಭದಲ್ಲಿ 12 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಇದೀಗ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಕೊವಿಡ್​ ಆಸ್ಪತ್ರೆಯಲ್ಲಿ ಭೀಕರ ಅಗ್ನಿದುರಂತ; 27 ರೋಗಿಗಳು ಸಾವು, 90ಕ್ಕೂ ಹೆಚ್ಚು ಜನರ ರಕ್ಷಣೆ 

ಮುಂಬೈನ ವಿರಾರ್‌ನ ವಿಜಯ ವಲ್ಲಭ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ, 13 ಜನರ ಸಾವು

Published On - 7:34 am, Sat, 1 May 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!