AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿಯಿಂದ ಹೊತ್ತಿ ಉರಿಯಿತು ಸ್ಟೇಶನ್​ನಲ್ಲಿ ನಿಂತಿದ್ದ ರೈಲು; ದಟ್ಟ ಹೊಗೆ, ಭಯಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ

9.13 ರ ಹೊತ್ತಿಗೆ ಸ್ವತಂತ್ರ ಸೇನಾನಿ ಎಕ್ಸ್​ಪ್ರೆಸ್​​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ನೋಡನೋಡುತ್ತಿದ್ದಂತೆ ಒಂದೊಂದೇ ಬೋಗಿಗಳು ಹೊತ್ತಿ ಉರಿದವು. ನಂತರ 9.50ರಷ್ಟರಲ್ಲಿ ಬೆಂಕಿ ನಂದಿಸಲಾಯಿತು ಎಂದು ಸಿಪಿಆರ್​ಒ ವೀರೇಂದ್ರ ಕುಮಾರ್ ತಿಳಿಸಿದ್ದಾರೆ.

ಬೆಂಕಿಯಿಂದ ಹೊತ್ತಿ ಉರಿಯಿತು ಸ್ಟೇಶನ್​ನಲ್ಲಿ ನಿಂತಿದ್ದ ರೈಲು; ದಟ್ಟ ಹೊಗೆ, ಭಯಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ
ರೈಲಿನಲ್ಲಿ ಬೆಂಕಿ
TV9 Web
| Edited By: |

Updated on:Feb 19, 2022 | 6:10 PM

Share

ಬಿಹಾರದ ಮಧುಬನಿ ರೈಲ್ವೆ ಸ್ಟೇಶನ್​ನಲ್ಲಿ ನಿಂತಿದ್ದ ಖಾಲಿ ರೈಲಿನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡು (Fire In Train) ಆತಂಕ ಸೃಷ್ಟಿಸಿತ್ತು. ಬೆಳಗ್ಗೆ 9.13ರ ಹೊತ್ತಿಗೆ ಸ್ವತಂತ್ರ ಸೇನಾನಿ  ಸೂಪರ್​ಫಾಸ್ಟ್​ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ರೈಲಿನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಬೆಂಕಿ ಉರಿದು, ದಟ್ಟವಾದ ಹೊಗೆ ಆವರಿಸಿದ್ದ ರೈಲಿನ ವಿಡಿಯೋ ವೈರಲ್ ಆಗಿದೆ. ಅಲ್ಲಿನ ಸಿಬ್ಬಂದಿ ಬಕೆಟ್​ಗಳ ಮೂಲಕ ನೀರು ಹಾಕಿ ಬೆಂಕಿ ನಂದಿಸುವ ಯತ್ನ ಮಾಡಿದ್ದನ್ನು ವಿಡಿಯೋದಲ್ಲಿ ಕಾಣಬಹುದು. ಈ ಸ್ವತಂತ್ರ ಸೇನಾನಿ ಎಕ್ಸ್​ಪ್ರೆಸ್ ಬಿಹಾರದ​ ಜಯನಗರದಿಂದ ದೆಹಲಿಗೆ ಸಂಚರಿಸುವ ರೈಲು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪೂರ್ವ ಕೇಂದ್ರ ರೈಲ್ವೆ ಸಿಪಿಆರ್​ಒ ವೀರೇಂದ್ರ ಕುಮಾರ್​, ಸುಮಾರು 9.13 ರ ಹೊತ್ತಿಗೆ ಸ್ವತಂತ್ರ ಸೇನಾನಿ ಎಕ್ಸ್​ಪ್ರೆಸ್​​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ನೋಡನೋಡುತ್ತಿದ್ದಂತೆ ಒಂದೊಂದೇ ಬೋಗಿಗಳು ಹೊತ್ತಿ ಉರಿದವು. ನಂತರ 9.50ರಷ್ಟರಲ್ಲಿ ಬೆಂಕಿ ನಂದಿಸಲಾಯಿತು. ಅದೃಷ್ಟವಶಾತ್​ ಖಾಲಿ ಇತ್ತು ಹಾಗಾಗಿ ಯಾರದ್ದೂ ಪ್ರಾಣ ಹಾನಿಯಾಗಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಬೆಂಕಿಗೆ ಕಾರಣ ತಿಳಿದುಬಂದಿಲ್ಲ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಶಾಂತ್ ಕಿಶೋರ್​-ನಿತೀಶ್ ಕುಮಾರ್ ಒಟ್ಟಿಗೇ ಡಿನ್ನರ್​; ರಾಷ್ಟ್ರ ರಾಜಕೀಯ ವಲಯದಲ್ಲಿ ಶುರುವಾಯ್ತು ಕುತೂಹಲ, ಚರ್ಚೆ !

Published On - 12:32 pm, Sat, 19 February 22

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು