AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಬಾರಖಂಬಾ ರಸ್ತೆಯಲ್ಲಿರುವ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ; ಅಗ್ನಿಶಾಮಕ ದಳದ ವಾಹನ ದೌಡು

ಬಾರಖಂಬಾ ರಸ್ತೆಯಲ್ಲಿರುವ ಕಟ್ಟಡದ 9 ನೇ ಮಹಡಿಯಲ್ಲಿ ಶನಿವಾರ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿವೆ. ಸದ್ಯ ಯಾವುದೇ ಸಾವು ನೋವು ವರದಿ ಆಗಿಲ್ಲ

ದೆಹಲಿಯ ಬಾರಖಂಬಾ ರಸ್ತೆಯಲ್ಲಿರುವ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ; ಅಗ್ನಿಶಾಮಕ ದಳದ ವಾಹನ ದೌಡು
ಕಟ್ಟಡದಲ್ಲಿ ಬೆಂಕಿ
Follow us
ರಶ್ಮಿ ಕಲ್ಲಕಟ್ಟ
|

Updated on:Jul 15, 2023 | 7:50 PM

ದೆಹಲಿ ಜುಲೈ 15: ನವದೆಹಲಿಯ (New Delhi) ಬಾರಖಂಬಾ ರಸ್ತೆಯಲ್ಲಿರುವ (Barakhamba Road) ಕಟ್ಟಡದ 9 ನೇ ಮಹಡಿಯಲ್ಲಿ ಶನಿವಾರ ಬೆಂಕಿ (Fire) ಕಾಣಿಸಿಕೊಂಡಿದೆ. ಬೆಂಕಿಯನ್ನು ಹತೋಟಿಗೆ ತರಲು  ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿವೆ. ಹತ್ತು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದೆ ಎಂದು ದೆಹಲಿ ಅಗ್ನಿಶಾಮಕ ಸೇವಾ ಮುಖ್ಯಸ್ಥ ಅತುಲ್ ಗಾರ್ಗ್ ಮಾಹಿತಿ ನೀಡಿದ್ದಾರೆ. ಹಲವು ಕಚೇರಿಗಳನ್ನು ಹೊಂದಿರುವ ಕೇಂದ್ರ ದೆಹಲಿಯ ಪ್ರಮುಖ ಪ್ರದೇಶದ ಕಟ್ಟಡವಾಗಿದೆ ಇದು. ಕನ್ನಾಟ್ ಪ್ಲೇಸ್‌ಗೆ ಸಮೀಪವಿರುವ ಬಾರಖಂಬಾ ರಸ್ತೆಯಲ್ಲಿರುವ ಡಿಸಿಎಂ ಕಟ್ಟಡದ ಒಂಬತ್ತನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದ ದೃಶ್ಯಗಳನ್ನುನನೋಡಿದರೆ ಒಂಬತ್ತನೇ ಮಹಡಿಯಲ್ಲಿನ ಕಿಟಕಿಗಳಿಂದ ಬೆಂಕಿ ಉರಿಯುತ್ತಿರುವುದು ಮೇಲಿನ ಮಹಡಿಯನ್ನು ಹೊಗೆಯಿಂದ ಆವರಿಸಿದ್ದನ್ನು ಕಾಣಬಹುದು.

ಅಧಿಕಾರಿಗಳ ಪ್ರಕಾರ, ಸಂಜೆ 6.20 ಕ್ಕೆ ಬೆಂಕಿಯ ಬಗ್ಗೆ ಅವರಿಗೆ ಮಾಹಿತಿ ಸಿಕ್ಕಿತು. ನಂತರ ಸುಮಾರು 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಫ್ರಾನ್ಸ್ ಭೇಟಿ ನೆನಪಿನಲ್ಲಿ ಉಳಿಯುವಂತದ್ದು; ಬಾಸ್ಟಿಲ್ ಡೇ ಪರೇಡ್‌ನ ವಿಡಿಯೊ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ವೇಳೆಗಾಗಲೇ ಭಾರೀ ಮಳೆ ಸುರಿಯಲಾರಂಭಿಸಿದೆ. ಈ ಮಾರ್ಗದಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ. ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Sat, 15 July 23

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ