AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರತ್ನಗಿರಿಯಲ್ಲಿರುವ ಔಷಧೀಯ ಉತ್ಪನ್ನಗಳ ತಯಾರಿಕಾ ಕಂಪನಿಯಲ್ಲಿ ಭಾರೀ ಬೆಂಕಿ; ದೊಡ್ಡ ಮಟ್ಟದ ಅಪಾಯ ತಪ್ಪಿಸಿದ ಅಗ್ನಿಶಾಮಕ ದಳ

ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಇದರಿಂದ ಉಂಟಾದ ನಷ್ಟ ಎಷ್ಟು ಎಂಬಿತ್ಯಾದಿ ಮಾಹಿತಿಗಳು ಇನ್ನೂ ಸಿಕ್ಕಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ 45 ನಿಮಿಷಗಳ ಕಾರ್ಯಾಚರಣೆ ನಡೆಸಿದ್ದಾರೆ.

ರತ್ನಗಿರಿಯಲ್ಲಿರುವ ಔಷಧೀಯ ಉತ್ಪನ್ನಗಳ ತಯಾರಿಕಾ ಕಂಪನಿಯಲ್ಲಿ ಭಾರೀ ಬೆಂಕಿ; ದೊಡ್ಡ ಮಟ್ಟದ ಅಪಾಯ ತಪ್ಪಿಸಿದ ಅಗ್ನಿಶಾಮಕ ದಳ
ಬೆಂಕಿ ಹೊತ್ತಿಕೊಂಡಿರುವ ಸ್ಥಳದಲ್ಲಿ ಆವರಿಸಿರುವ ದಟ್ಟವಾದ ಹೊಗೆ (ಚಿತ್ರ ಕೃಪೆ-ಎಎನ್​ಐ)
Lakshmi Hegde
|

Updated on:Apr 28, 2021 | 1:50 PM

Share

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿರುವ ಎಂ.ಆರ್​.ಫಾರ್ಮಾ ಪ್ರೈವೇಟ್ ಲಿಮಿಟೆಡ್​ ಔಷಧೀಯ ಉತ್ಪನ್ನಗಳ ತಯಾರಿಕಾ ಕಂಪನಿಯ ಘಟಕದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಾಗಿ ಎಎನ್​ಐ ವರದಿ ಮಾಡಿದೆ. ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ, ಬೆಂಕಿ ನಂದಿಸಿದ್ದಾರೆ.

ಔಷಧಗಳಲ್ಲಿ ಬಳಸುವ ವಿಶೇಷ ರಾಸಾಯನಿಕ ತಯಾರಿಕಾ ಕಂಪನಿ ಇದಾಗಿದೆ. ಬೆಳಗ್ಗೆ 11 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ಸಮಯದಲ್ಲಿ ಎಂಟು ಜನ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನೆಲ್ಲರನ್ನೂ ರಕ್ಷಿಸಲಾಗಿದೆ. ಅದೃಷ್ಟವಶಾತ್​ ಯಾರೂ ಗಾಯಗೊಂಡಿಲ್ಲ ಎಂದು ಮಾಹಿತಿ ಸಿಕ್ಕಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ 45 ನಿಮಿಷಗಳ ಕಾರ್ಯಾಚರಣೆ ನಂತರ ಬೆಂಕಿ ನಂದಿಸಿದ್ದಾರೆ.  ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಇದರಿಂದ ಉಂಟಾದ ನಷ್ಟ ಎಷ್ಟು ಎಂಬಿತ್ಯಾದಿ ಮಾಹಿತಿಗಳು ಇನ್ನೂ ಸಿಕ್ಕಿಲ್ಲ.

ಇಂದು ಬೆಳಗ್ಗೆಯಷ್ಟೇ ಥಾಣೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ ಉಂಟಾಗಿ ನಾಲ್ವರು ರೋಗಿಗಳು ಮೃತಪಟ್ಟ ಘಟನೆ ವರದಿಯಾಗಿದೆ. ಆಸ್ಪತ್ರೆಯ ಐಸಿಯು ರೂಂನಲ್ಲಿ ಬೆಂಕಿ ಹೊತ್ತುಕೊಂಡು, ಮೊದಲ ಮಹಡಿ ಪೂರ್ತಿಯಾಗಿ ಧ್ವಂಸಗೊಂಡಿದೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ; 4 ರೋಗಿಗಳು ಸಾವು, ಉಳಿದವರ ಸ್ಥಳಾಂತರ

ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರ ಭೇಟಿಗೆ ಅವಕಾಶ; ಆಸ್ಪತ್ರೆ ಅವ್ಯವಸ್ಥೆ ಕಂಡು ಬೆಚ್ಚಿಬಿದ್ದ ಜನಪ್ರತಿನಿಧಿಗಳು

ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿ, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ರಾಜವಂಶಸ್ಥ ಯದುವೀರ್

Published On - 1:46 pm, Wed, 28 April 21

Follow Us
Lakshmi Hegde
Lakshmi Hegde
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!