Sign In

By signing in or creating an account, you agree with Associated Broadcasting Company's Terms & Conditions and Privacy Policy.

ರತ್ನಗಿರಿಯಲ್ಲಿರುವ ಔಷಧೀಯ ಉತ್ಪನ್ನಗಳ ತಯಾರಿಕಾ ಕಂಪನಿಯಲ್ಲಿ ಭಾರೀ ಬೆಂಕಿ; ದೊಡ್ಡ ಮಟ್ಟದ ಅಪಾಯ ತಪ್ಪಿಸಿದ ಅಗ್ನಿಶಾಮಕ ದಳ

ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಇದರಿಂದ ಉಂಟಾದ ನಷ್ಟ ಎಷ್ಟು ಎಂಬಿತ್ಯಾದಿ ಮಾಹಿತಿಗಳು ಇನ್ನೂ ಸಿಕ್ಕಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ 45 ನಿಮಿಷಗಳ ಕಾರ್ಯಾಚರಣೆ ನಡೆಸಿದ್ದಾರೆ.

ರತ್ನಗಿರಿಯಲ್ಲಿರುವ ಔಷಧೀಯ ಉತ್ಪನ್ನಗಳ ತಯಾರಿಕಾ ಕಂಪನಿಯಲ್ಲಿ ಭಾರೀ ಬೆಂಕಿ; ದೊಡ್ಡ ಮಟ್ಟದ ಅಪಾಯ ತಪ್ಪಿಸಿದ ಅಗ್ನಿಶಾಮಕ ದಳ
ಬೆಂಕಿ ಹೊತ್ತಿಕೊಂಡಿರುವ ಸ್ಥಳದಲ್ಲಿ ಆವರಿಸಿರುವ ದಟ್ಟವಾದ ಹೊಗೆ (ಚಿತ್ರ ಕೃಪೆ-ಎಎನ್​ಐ)
Follow us
Lakshmi Hegde
|

Updated on:Apr 28, 2021 | 1:50 PM

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿರುವ ಎಂ.ಆರ್​.ಫಾರ್ಮಾ ಪ್ರೈವೇಟ್ ಲಿಮಿಟೆಡ್​ ಔಷಧೀಯ ಉತ್ಪನ್ನಗಳ ತಯಾರಿಕಾ ಕಂಪನಿಯ ಘಟಕದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಾಗಿ ಎಎನ್​ಐ ವರದಿ ಮಾಡಿದೆ. ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ, ಬೆಂಕಿ ನಂದಿಸಿದ್ದಾರೆ.

ಔಷಧಗಳಲ್ಲಿ ಬಳಸುವ ವಿಶೇಷ ರಾಸಾಯನಿಕ ತಯಾರಿಕಾ ಕಂಪನಿ ಇದಾಗಿದೆ. ಬೆಳಗ್ಗೆ 11 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ಸಮಯದಲ್ಲಿ ಎಂಟು ಜನ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನೆಲ್ಲರನ್ನೂ ರಕ್ಷಿಸಲಾಗಿದೆ. ಅದೃಷ್ಟವಶಾತ್​ ಯಾರೂ ಗಾಯಗೊಂಡಿಲ್ಲ ಎಂದು ಮಾಹಿತಿ ಸಿಕ್ಕಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ 45 ನಿಮಿಷಗಳ ಕಾರ್ಯಾಚರಣೆ ನಂತರ ಬೆಂಕಿ ನಂದಿಸಿದ್ದಾರೆ.  ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಇದರಿಂದ ಉಂಟಾದ ನಷ್ಟ ಎಷ್ಟು ಎಂಬಿತ್ಯಾದಿ ಮಾಹಿತಿಗಳು ಇನ್ನೂ ಸಿಕ್ಕಿಲ್ಲ.

ಇಂದು ಬೆಳಗ್ಗೆಯಷ್ಟೇ ಥಾಣೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ ಉಂಟಾಗಿ ನಾಲ್ವರು ರೋಗಿಗಳು ಮೃತಪಟ್ಟ ಘಟನೆ ವರದಿಯಾಗಿದೆ. ಆಸ್ಪತ್ರೆಯ ಐಸಿಯು ರೂಂನಲ್ಲಿ ಬೆಂಕಿ ಹೊತ್ತುಕೊಂಡು, ಮೊದಲ ಮಹಡಿ ಪೂರ್ತಿಯಾಗಿ ಧ್ವಂಸಗೊಂಡಿದೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ; 4 ರೋಗಿಗಳು ಸಾವು, ಉಳಿದವರ ಸ್ಥಳಾಂತರ

ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರ ಭೇಟಿಗೆ ಅವಕಾಶ; ಆಸ್ಪತ್ರೆ ಅವ್ಯವಸ್ಥೆ ಕಂಡು ಬೆಚ್ಚಿಬಿದ್ದ ಜನಪ್ರತಿನಿಧಿಗಳು

ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿ, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ರಾಜವಂಶಸ್ಥ ಯದುವೀರ್

Published On - 1:46 pm, Wed, 28 April 21

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ