AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ದುರಂತ; ರಸ್ತೆ ಬದಿಯಲ್ಲಿದ್ದ 30 ಗುಡಿಸಲುಗಳು ಸಂಪೂರ್ಣ ಭಸ್ಮ

ಗ್ಯಾಸ್​ ಸಿಲಿಂಡರ್ ಸ್ಫೋಟವಾಗಿ ಹೊತ್ತಿಕೊಂಡ ಬೆಂಕಿ ವೇಗವಾಗಿ ಒಂದಾದ ಬಳಿಕ ಒಂದು ಗುಡಿಸಲುಗಳಿಗೆ ಹಬ್ಬಿದೆ. ಸದ್ಯ ಈ ದುರ್ಘಟನೆಯಲ್ಲಿ ಆದ ಜೀವ ಹಾನಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ದುರಂತ; ರಸ್ತೆ ಬದಿಯಲ್ಲಿದ್ದ 30 ಗುಡಿಸಲುಗಳು ಸಂಪೂರ್ಣ ಭಸ್ಮ
ಅಗ್ನಿ ದುರಂತ
TV9 Web
| Edited By: |

Updated on: Nov 13, 2021 | 9:09 AM

Share

ಆಂಧ್ರಪ್ರದೇಶದಲ್ಲೊಂದು ಭೀಕರ ಅಗ್ನಿದುರಂತ (Fire Accident) ನಡೆದಿದೆ. ಇಲ್ಲಿನ ವಿಜಯನಗರ ಜಿಲ್ಲೆಯ ಮೆಂಟಡಾ ಮಂಡಲದ ಜಕ್ಕುವಾ ಎಂಬ ಹಳ್ಳಿಯಲ್ಲಿ ನಡೆದ ಬೆಂಕಿ ಅನಾಹುತದಲ್ಲಿ ಬರೋಬ್ಬರಿ 30 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಈ ಗುಡಿಸಲುಗಳು ಕುರಕುಲಾ ರಸ್ತೆಯಲ್ಲಿ ಇದ್ದವಾಗಿದ್ದವು. ಮನೆಯೊಂದರಲ್ಲಿ ನಡೆದ ಅಡುಗೆ ಅನಿಲ ಸ್ಫೋಟವೇ ಈ ದುರಂತಕ್ಕೆ ಕಾರಣ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರೇ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ಗ್ಯಾಸ್​ ಸಿಲಿಂಡರ್ ಸ್ಫೋಟವಾಗಿ ಹೊತ್ತಿಕೊಂಡ ಬೆಂಕಿ ವೇಗವಾಗಿ ಒಂದಾದ ಬಳಿಕ ಒಂದು ಗುಡಿಸಲುಗಳಿಗೆ ಹಬ್ಬಿದೆ. ಸದ್ಯ ಈ ದುರ್ಘಟನೆಯಲ್ಲಿ ಆದ ಜೀವ ಹಾನಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆದರೆ ಆ 30 ಗುಡಿಸಲುಗಳಲ್ಲಿ ವಾಸವಾಗಿದ್ದ ಜನರಿಗೆ ಮನೆ ನಾಶವಾದಂತಾಗಿದೆ. ಅದರಲ್ಲಿದ್ದ ಸಾಮಗ್ರಿಗಳೆಲ್ಲ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಹೀಗೆ ಆಶ್ರಯ ಕಳೆದುಕೊಂಡವರಿಗೆ ಸಮೀಪದ ಶಾಲೆಯಲ್ಲಿ ಉಳಿದುಕೊಳ್ಳುವ, ಆಹಾರ ವ್ಯವಸ್ಥೆ ಮಾಡಲಾಗಿದೆ. ಸದ್ಯ ಸ್ಥಳದಲ್ಲಿ ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಸ್​ ನಿಲ್ದಾಣದಲ್ಲಿ ಪುನೀತ್​ ಫೋಟೋಗೆ ಮುತ್ತಿಟ್ಟು ಕಂಬನಿ ಸುರಿಸಿದ ಅಜ್ಜಿ; ವಿಡಿಯೋ ವೈರಲ್​

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ