AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ; 4 ರೋಗಿಗಳು ಸಾವು, ಉಳಿದವರ ಸ್ಥಳಾಂತರ

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘಟನೆಯ ಬಗ್ಗೆ ವರದಿ ಪಡೆದಿದ್ದು, ಮೃತ ರೋಗಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ; 4 ರೋಗಿಗಳು ಸಾವು, ಉಳಿದವರ ಸ್ಥಳಾಂತರ
ಬೆಂಕಿನಂದಿಸಲು ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ
Lakshmi Hegde
|

Updated on: Apr 28, 2021 | 9:18 AM

Share

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಇಂದು ಮುಂಜಾನೆ ನಡೆದ ಅಗ್ನಿ ದುರಂತದಲ್ಲಿ ನಾಲ್ವರು ರೋಗಿಗಳು ಮೃತಪಟ್ಟಿದ್ದಾಗಿ ವರದಿಯಾಗಿದೆ.

ಥಾಣೆಯ ಮುಂಬ್ರಾದಲ್ಲಿರುವ ಕೌಸಾದ ಪ್ರೈಮ್​ ಕ್ರಿಟಿಕೇರ್​ ಆಸ್ಪತ್ರೆಯಲ್ಲಿ ಮುಂಜಾನೆ 3.40ರಹೊತ್ತಿಗೆ ಬೆಂಕಿ ಕಾಣಿಸಿಕೊಂಡಿತ್ತು. ಈ ಆಸ್ಪತ್ರೆಯಲ್ಲಿ ಯಾವುದೇ ಕೊರೊನಾ ರೋಗಿಗಳು ಇರಲಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿಗೆ ಕರೆ ಮಾಡಲಾಯಿತಾದರೂ ಅವರು ಬರುವಷ್ಟರಲ್ಲಿ ನಾಲ್ವರು ರೋಗಿಗಳ ಜೀವ ಹೋಗಿತ್ತು. ಆ್ಯಂಬುಲೆನ್ಸ್​ಗಳ ಮೂಲಕ ಉಳಿದ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಈ ಆಸ್ಪತ್ರೆಯಲ್ಲಿ ಒಟ್ಟು 20 ಒಳರೋಗಿಗಳು ಇದ್ದರು. ಅವರಲ್ಲಿ ಆರು ಮಂದಿ ಐಸಿಯುನಲ್ಲಿ ಇದ್ದರು. ಸದ್ಯ ಅವರನ್ನೆಲ್ಲ ಬೇರೆಡೆಗೆ ಕರೆದೊಯ್ಯಲಾಗಿದೆ.

ಇನ್ನು ಘಟನೆ ನಡೆದ ಸ್ಥಳಕ್ಕೆ ಸ್ಥಳೀಯ ಶಾಸಕ, ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹಾದ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಆಸ್ಪತ್ರೆಯ ಮೊದಲ ಮಹಡಿಯನ್ನು ಬೆಂಕಿ ಧ್ವಂಸಗೊಳಿಸಿದೆ. ಮೂವರು ರೋಗಿಗಳು ಜೀವಂತ ದಹನವಾಗಿದ್ದಾರೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘಟನೆಯ ಬಗ್ಗೆ ವರದಿ ಪಡೆದಿದ್ದು, ಮೃತ ರೋಗಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. ಹಾಗೇ, ಗಾಯಗೊಂಡವರಿಗೆ ತಲಾ ಒಂದು ಲಕ್ಷ ರೂ.ನೀಡಲಾಗುವುದು ಎಂದಿದ್ದಾರೆ.

ಪಲ್ಗರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಏಪ್ರಿಲ್​ 23ರಂದು ನಡೆದ ಅಗ್ನಿ ದುರಂತದಲ್ಲಿ 15 ರೋಗಿಗಳು ಮೃತಪಟ್ಟಿದ್ದರು.

ಇದನ್ನೂ ಓದಿ:ಮಾಜಿ ಪೊಲೀಸ್ ಆಯುಕ್ತ ಪರಮ್ ಸಿಂಗ್ ವಿರುದ್ಧ ಪ್ರಾಥಮಿಕ ತನಿಖೆ ನಡೆಸಿ, ತಕ್ಷಣ ರಿಪೋರ್ಟ್​ ಕೊಡಿ: ಮಹಾರಾಷ್ಟ್ರ ಸರ್ಕಾರ

ಕಾರಾಗೃಹದಲ್ಲಿನ ಕೈದಿಗಳಿಗೆ ಕೊರೊನಾ ಸೊಂಕು; ಚಿಕ್ಕಬಳ್ಳಾಪುರ ಜೈಲು ಅಧಿಕಾರಿಗಳಲ್ಲಿ ಹೆಚ್ಚಿದ ಆತಂಕ

Fire broke out at private hospital in Maharashtra 4 people Died

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!