AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಬೆಂಕಿಯಿಂದ ಹೊತ್ತಿ ಉರಿದ ಮನೆ; 5 ಮಕ್ಕಳು ಸಜೀವ ದಹನ, ಪ್ರತಿ ವಸ್ತುವೂ ಸುಟ್ಟು ಭಸ್ಮ

ನಮಗೆ ಮನೆಗೆ ಬೆಂಕಿ ಹೇಗೆ ಬಿತ್ತು ಎಂಬುದಿನ್ನೂ ಗೊತ್ತಾಗಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ಶುರುವಾಗಿದೆ. ಈ ಕುಟುಂಬದ ಎಲ್ಲರ ಹೇಳಿಕೆಯನ್ನೂ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Bihar: ಬೆಂಕಿಯಿಂದ ಹೊತ್ತಿ ಉರಿದ ಮನೆ; 5 ಮಕ್ಕಳು ಸಜೀವ ದಹನ, ಪ್ರತಿ ವಸ್ತುವೂ ಸುಟ್ಟು ಭಸ್ಮ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Dec 29, 2021 | 11:23 AM

Share

ಮನೆಗೆ ಬಿಂಕಿಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್​ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮ ರಾಜೌನ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬೆಂಕಿ ಹೊತ್ತಿದ್ದು ಎಲ್​ಪಿಜಿ ಸಿಲಿಂಡರ್​ ಸ್ಫೋಟದಿಂದ ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ ಪೊಲೀಸರು ಅದನ್ನು ಇನ್ನೂ ದೃಢಪಡಿಸಿಲ್ಲ. ಬೆಂಕಿಗೆ ನಿಜವಾದ ಕಾರಣವೇನು ಎಂದು ನಮಗೆ ಗೊತ್ತಾಗಿಲ್ಲ. ಈ ಸ್ಥಳದಲ್ಲಿ ಒಂದು ಸುಟ್ಟು ಕರಕಲಾಗಿರುವ ಸಿಲಿಂಡರ್​ ಗ್ಯಾಸ್​ ಮತ್ತು ರೆಗ್ಯುಲೇಟರ್​ ಸಿಕ್ಕಿದೆ. ಮನೆಯಲ್ಲಿ ಯಾವುದೇ ವಸ್ತುವೂ ಉಳಿದಿಲ್ಲ. ಎಲ್ಲವೂ ಸುಟ್ಟು ಬೂದಿಯಾಗಿದೆ ಎಂದು ಬಂಕಾ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್​ ಕುಮಾರ್ ಗುಪ್ತಾ ತಿಳಿಸಿದ್ದಾರೆ.  

ಅಂಕುಶ್​ ಕುಮಾರ್​ (10), ಶಿವಾನಿ ಕುಮಾರಿ​ (9), ಸೋನಿ ಕುಮಾರಿ (8), ಸೀಮಾ ಕುಮಾರಿ (5) ಮತ್ತು ಅಂಶುಕುಮಾರಿ(10) ಮೃತರು. ಇವರಲ್ಲಿ ಅಂಕುಶ್​, ಶಿವಾನಿ, ಸೋನಿ, ಸೀಮಾ ಒಡಹುಟ್ಟಿದವರಾಗಿದ್ದು, ಅಂಶುಕುಮಾರಿ ಈ ಮಕ್ಕಳ ಸಂಬಂಧಿಯಾಗಿದ್ದಾರೆ. ಮನೆಗೆ ಬೆಂಕಿ ಬಿದ್ದಾಗ ಅವರನ್ನು ರಕ್ಷಿಸಲು ಯತ್ನಿಸಿದ ಅಶೋಕ್​ ಪಸ್ವಾನ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ನಾಲ್ಕು ಮಕ್ಕಳ ತಂದೆಯಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅರವಿಂದ್ ಕುಮಾರ್ ತಿಳಿಸಿದ್ದಾರೆ.  ಸದ್ಯ ಎಲ್ಲರ ದೇಹವನ್ನೂ ಪೋಸ್ಟ್​ ಮಾರ್ಟಮ್​ಗೆ ಕಳಿಸಲಾಗಿದೆ.

ನಮಗೆ ಮನೆಗೆ ಬೆಂಕಿ ಹೇಗೆ ಬಿತ್ತು ಎಂಬುದಿನ್ನೂ ಗೊತ್ತಾಗಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ಶುರುವಾಗಿದೆ. ಈ ಕುಟುಂಬದ ಎಲ್ಲರ ಹೇಳಿಕೆಯನ್ನೂ ದಾಖಲು ಮಾಡಿಕೊಳ್ಳಲಾಗಿದೆ. ಬೆಂಕಿ  ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನು ತಿಳಿಯಲು ವಿಧಿವಿಜ್ಞಾನ ತಜ್ಞರ ಸಹಾಯವನ್ನೂ ಕೋರಿದ್ದೇವೆ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ. ಹಾಗೇ, ಬಂಕಾ ಜಿಲ್ಲೆಯ ಜಿಲ್ಲಾಧಿಕಾರಿ ಶಹರಾಶ್ ಭಗತ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಇದು ಯಾವ ಸಿಗ್ನಲ್ಲೋ ಮಾರಾಯಾ!? 2021ರಲ್ಲಿ ಕ್ರಿಕೆಟ್​ ಮೈದಾನದಲ್ಲಿ ನಡೆದ ವಿಚಿತ್ರ ಘಟನೆಗಳ ರಿವೈಂಡ್​ ಮಾಡೋಣಾ ಬನ್ನೀ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?