AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಬೆಂಕಿಯಿಂದ ಹೊತ್ತಿ ಉರಿದ ಮನೆ; 5 ಮಕ್ಕಳು ಸಜೀವ ದಹನ, ಪ್ರತಿ ವಸ್ತುವೂ ಸುಟ್ಟು ಭಸ್ಮ

ನಮಗೆ ಮನೆಗೆ ಬೆಂಕಿ ಹೇಗೆ ಬಿತ್ತು ಎಂಬುದಿನ್ನೂ ಗೊತ್ತಾಗಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ಶುರುವಾಗಿದೆ. ಈ ಕುಟುಂಬದ ಎಲ್ಲರ ಹೇಳಿಕೆಯನ್ನೂ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Bihar: ಬೆಂಕಿಯಿಂದ ಹೊತ್ತಿ ಉರಿದ ಮನೆ; 5 ಮಕ್ಕಳು ಸಜೀವ ದಹನ, ಪ್ರತಿ ವಸ್ತುವೂ ಸುಟ್ಟು ಭಸ್ಮ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 29, 2021 | 11:23 AM

Share

ಮನೆಗೆ ಬಿಂಕಿಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್​ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮ ರಾಜೌನ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬೆಂಕಿ ಹೊತ್ತಿದ್ದು ಎಲ್​ಪಿಜಿ ಸಿಲಿಂಡರ್​ ಸ್ಫೋಟದಿಂದ ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ ಪೊಲೀಸರು ಅದನ್ನು ಇನ್ನೂ ದೃಢಪಡಿಸಿಲ್ಲ. ಬೆಂಕಿಗೆ ನಿಜವಾದ ಕಾರಣವೇನು ಎಂದು ನಮಗೆ ಗೊತ್ತಾಗಿಲ್ಲ. ಈ ಸ್ಥಳದಲ್ಲಿ ಒಂದು ಸುಟ್ಟು ಕರಕಲಾಗಿರುವ ಸಿಲಿಂಡರ್​ ಗ್ಯಾಸ್​ ಮತ್ತು ರೆಗ್ಯುಲೇಟರ್​ ಸಿಕ್ಕಿದೆ. ಮನೆಯಲ್ಲಿ ಯಾವುದೇ ವಸ್ತುವೂ ಉಳಿದಿಲ್ಲ. ಎಲ್ಲವೂ ಸುಟ್ಟು ಬೂದಿಯಾಗಿದೆ ಎಂದು ಬಂಕಾ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್​ ಕುಮಾರ್ ಗುಪ್ತಾ ತಿಳಿಸಿದ್ದಾರೆ.  

ಅಂಕುಶ್​ ಕುಮಾರ್​ (10), ಶಿವಾನಿ ಕುಮಾರಿ​ (9), ಸೋನಿ ಕುಮಾರಿ (8), ಸೀಮಾ ಕುಮಾರಿ (5) ಮತ್ತು ಅಂಶುಕುಮಾರಿ(10) ಮೃತರು. ಇವರಲ್ಲಿ ಅಂಕುಶ್​, ಶಿವಾನಿ, ಸೋನಿ, ಸೀಮಾ ಒಡಹುಟ್ಟಿದವರಾಗಿದ್ದು, ಅಂಶುಕುಮಾರಿ ಈ ಮಕ್ಕಳ ಸಂಬಂಧಿಯಾಗಿದ್ದಾರೆ. ಮನೆಗೆ ಬೆಂಕಿ ಬಿದ್ದಾಗ ಅವರನ್ನು ರಕ್ಷಿಸಲು ಯತ್ನಿಸಿದ ಅಶೋಕ್​ ಪಸ್ವಾನ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ನಾಲ್ಕು ಮಕ್ಕಳ ತಂದೆಯಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅರವಿಂದ್ ಕುಮಾರ್ ತಿಳಿಸಿದ್ದಾರೆ.  ಸದ್ಯ ಎಲ್ಲರ ದೇಹವನ್ನೂ ಪೋಸ್ಟ್​ ಮಾರ್ಟಮ್​ಗೆ ಕಳಿಸಲಾಗಿದೆ.

ನಮಗೆ ಮನೆಗೆ ಬೆಂಕಿ ಹೇಗೆ ಬಿತ್ತು ಎಂಬುದಿನ್ನೂ ಗೊತ್ತಾಗಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ಶುರುವಾಗಿದೆ. ಈ ಕುಟುಂಬದ ಎಲ್ಲರ ಹೇಳಿಕೆಯನ್ನೂ ದಾಖಲು ಮಾಡಿಕೊಳ್ಳಲಾಗಿದೆ. ಬೆಂಕಿ  ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನು ತಿಳಿಯಲು ವಿಧಿವಿಜ್ಞಾನ ತಜ್ಞರ ಸಹಾಯವನ್ನೂ ಕೋರಿದ್ದೇವೆ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ. ಹಾಗೇ, ಬಂಕಾ ಜಿಲ್ಲೆಯ ಜಿಲ್ಲಾಧಿಕಾರಿ ಶಹರಾಶ್ ಭಗತ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಇದು ಯಾವ ಸಿಗ್ನಲ್ಲೋ ಮಾರಾಯಾ!? 2021ರಲ್ಲಿ ಕ್ರಿಕೆಟ್​ ಮೈದಾನದಲ್ಲಿ ನಡೆದ ವಿಚಿತ್ರ ಘಟನೆಗಳ ರಿವೈಂಡ್​ ಮಾಡೋಣಾ ಬನ್ನೀ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು