AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಬೆಂಕಿಯಿಂದ ಹೊತ್ತಿ ಉರಿದ ಮನೆ; 5 ಮಕ್ಕಳು ಸಜೀವ ದಹನ, ಪ್ರತಿ ವಸ್ತುವೂ ಸುಟ್ಟು ಭಸ್ಮ

ನಮಗೆ ಮನೆಗೆ ಬೆಂಕಿ ಹೇಗೆ ಬಿತ್ತು ಎಂಬುದಿನ್ನೂ ಗೊತ್ತಾಗಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ಶುರುವಾಗಿದೆ. ಈ ಕುಟುಂಬದ ಎಲ್ಲರ ಹೇಳಿಕೆಯನ್ನೂ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Bihar: ಬೆಂಕಿಯಿಂದ ಹೊತ್ತಿ ಉರಿದ ಮನೆ; 5 ಮಕ್ಕಳು ಸಜೀವ ದಹನ, ಪ್ರತಿ ವಸ್ತುವೂ ಸುಟ್ಟು ಭಸ್ಮ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 29, 2021 | 11:23 AM

Share

ಮನೆಗೆ ಬಿಂಕಿಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್​ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮ ರಾಜೌನ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬೆಂಕಿ ಹೊತ್ತಿದ್ದು ಎಲ್​ಪಿಜಿ ಸಿಲಿಂಡರ್​ ಸ್ಫೋಟದಿಂದ ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ ಪೊಲೀಸರು ಅದನ್ನು ಇನ್ನೂ ದೃಢಪಡಿಸಿಲ್ಲ. ಬೆಂಕಿಗೆ ನಿಜವಾದ ಕಾರಣವೇನು ಎಂದು ನಮಗೆ ಗೊತ್ತಾಗಿಲ್ಲ. ಈ ಸ್ಥಳದಲ್ಲಿ ಒಂದು ಸುಟ್ಟು ಕರಕಲಾಗಿರುವ ಸಿಲಿಂಡರ್​ ಗ್ಯಾಸ್​ ಮತ್ತು ರೆಗ್ಯುಲೇಟರ್​ ಸಿಕ್ಕಿದೆ. ಮನೆಯಲ್ಲಿ ಯಾವುದೇ ವಸ್ತುವೂ ಉಳಿದಿಲ್ಲ. ಎಲ್ಲವೂ ಸುಟ್ಟು ಬೂದಿಯಾಗಿದೆ ಎಂದು ಬಂಕಾ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್​ ಕುಮಾರ್ ಗುಪ್ತಾ ತಿಳಿಸಿದ್ದಾರೆ.  

ಅಂಕುಶ್​ ಕುಮಾರ್​ (10), ಶಿವಾನಿ ಕುಮಾರಿ​ (9), ಸೋನಿ ಕುಮಾರಿ (8), ಸೀಮಾ ಕುಮಾರಿ (5) ಮತ್ತು ಅಂಶುಕುಮಾರಿ(10) ಮೃತರು. ಇವರಲ್ಲಿ ಅಂಕುಶ್​, ಶಿವಾನಿ, ಸೋನಿ, ಸೀಮಾ ಒಡಹುಟ್ಟಿದವರಾಗಿದ್ದು, ಅಂಶುಕುಮಾರಿ ಈ ಮಕ್ಕಳ ಸಂಬಂಧಿಯಾಗಿದ್ದಾರೆ. ಮನೆಗೆ ಬೆಂಕಿ ಬಿದ್ದಾಗ ಅವರನ್ನು ರಕ್ಷಿಸಲು ಯತ್ನಿಸಿದ ಅಶೋಕ್​ ಪಸ್ವಾನ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ನಾಲ್ಕು ಮಕ್ಕಳ ತಂದೆಯಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅರವಿಂದ್ ಕುಮಾರ್ ತಿಳಿಸಿದ್ದಾರೆ.  ಸದ್ಯ ಎಲ್ಲರ ದೇಹವನ್ನೂ ಪೋಸ್ಟ್​ ಮಾರ್ಟಮ್​ಗೆ ಕಳಿಸಲಾಗಿದೆ.

ನಮಗೆ ಮನೆಗೆ ಬೆಂಕಿ ಹೇಗೆ ಬಿತ್ತು ಎಂಬುದಿನ್ನೂ ಗೊತ್ತಾಗಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ಶುರುವಾಗಿದೆ. ಈ ಕುಟುಂಬದ ಎಲ್ಲರ ಹೇಳಿಕೆಯನ್ನೂ ದಾಖಲು ಮಾಡಿಕೊಳ್ಳಲಾಗಿದೆ. ಬೆಂಕಿ  ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನು ತಿಳಿಯಲು ವಿಧಿವಿಜ್ಞಾನ ತಜ್ಞರ ಸಹಾಯವನ್ನೂ ಕೋರಿದ್ದೇವೆ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ. ಹಾಗೇ, ಬಂಕಾ ಜಿಲ್ಲೆಯ ಜಿಲ್ಲಾಧಿಕಾರಿ ಶಹರಾಶ್ ಭಗತ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಇದು ಯಾವ ಸಿಗ್ನಲ್ಲೋ ಮಾರಾಯಾ!? 2021ರಲ್ಲಿ ಕ್ರಿಕೆಟ್​ ಮೈದಾನದಲ್ಲಿ ನಡೆದ ವಿಚಿತ್ರ ಘಟನೆಗಳ ರಿವೈಂಡ್​ ಮಾಡೋಣಾ ಬನ್ನೀ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?