AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pune Massive Fire: ಪುಣೆಯ ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 18 ಜನರು ಸಜೀವದಹನ

Pune Chemical Factory Fire: ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ತಲುಪಿದ ಕೂಡಲೇ ಸುಮಾರು 8 ಅಗ್ನಿಶಾಮಕ ದಳದ ತಂಡಗಳು ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿಕೊಂಡಿವೆ.

Pune Massive Fire: ಪುಣೆಯ ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 18 ಜನರು ಸಜೀವದಹನ
ಪುಣೆ ಅಗ್ನಿ ಅವಘಡ
TV9 Web
| Edited By: |

Updated on:Jun 07, 2021 | 10:33 PM

Share

ಪುಣೆ: ಖಾಸಗಿ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 18 ಜನ ಸಜೀವದಹನವಾದ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯ ಘೋಟವಾಡ ಫಾಟಾ ಎಂಬಲ್ಲಿ ಇಂದು (ಜೂನ್ 7) ಸಂಜೆ ಸಂಭವಿಸಿದೆ. ಕಾರ್ಖಾನೆಯ ಒಳಗೆ ಇರುವವರನ್ನು ಹುಡುಕುವ ಮತ್ತು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಪುಣೆ ಅಗ್ನಿಶಾಮಕ ದಳದ ಮಾಹಿತಿಯಂತೆ, ಫ್ಯಾಕ್ಟರಿಯ ಒಳಗೆ 37 ಮಂದಿ ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ.

ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ತಲುಪಿದ ಕೂಡಲೇ ಸುಮಾರು 8 ಅಗ್ನಿಶಾಮಕ ದಳದ ತಂಡಗಳು ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿಕೊಂಡಿವೆ. ಅಗ್ನಿಶಾಮಕ ದಳದ ಸಿಬ್ಬಂದಿ 20 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಆದರೂ ಮೊದಲು 12 ಮಂದಿ ಪ್ರಾಣ ಕಳೆದುಕೊಂಡಿದ್ದು ಖಚಿತವಾಗಿತ್ತು. ಬಳಿಕ, 5 ಮಂದಿಯ ಹುಡುಕಾಟ ನಡೆದಿತ್ತು.

ಅಲ್ಲಿಯವರೆಗೆ ಪತ್ತೆಯಾಗದಿರುವ ಕಾರ್ಮಿಕರಿಗಾಗಿ ಹುಡುಕಾಟ ಮತ್ತು ರಕ್ಷಣಾ ಕಾರ್ಯ ಭರದಿಂದ ಮಾಡಲಾಗಿತ್ತು. ಅಗ್ನಿ ಪ್ರಮಾಣ ನಿಯಂತ್ರಣಕ್ಕೆ ಸಿಕ್ಕಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಾಹಿತಿ ನೀಡಿದ್ದರು.

ಸದ್ಯದ ಮಾಹಿತಿ ಪ್ರಕಾರ ಕೆಮಿಕಲ್ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 18 ಮಂದಿ ಬಲಿಯಾಗಿದ್ದಾರೆ. ಉಳಿದ 19 ಮಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ 11,958 ಮಂದಿಗೆ ಕೊರೊನಾ ಸೋಂಕು, 340 ಸಾವು

ಆಸ್ಪತ್ರೆ ಸಿಬ್ಬಂದಿ, ಅಗ್ನಿಶಾಮದ ದಳದ ಸಮಯಪ್ರಜ್ಞೆಯಿಂದ ಮೈಸೂರಿನಲ್ಲಿ 300ಕ್ಕೂ ಹೆಚ್ಚು ರೋಗಿಗಳು ಬಚಾವ್

Published On - 8:23 pm, Mon, 7 June 21

Follow Us
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK