AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pune Massive Fire: ಪುಣೆಯ ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 18 ಜನರು ಸಜೀವದಹನ

Pune Chemical Factory Fire: ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ತಲುಪಿದ ಕೂಡಲೇ ಸುಮಾರು 8 ಅಗ್ನಿಶಾಮಕ ದಳದ ತಂಡಗಳು ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿಕೊಂಡಿವೆ.

Pune Massive Fire: ಪುಣೆಯ ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 18 ಜನರು ಸಜೀವದಹನ
ಪುಣೆ ಅಗ್ನಿ ಅವಘಡ
TV9 Web
| Edited By: |

Updated on:Jun 07, 2021 | 10:33 PM

Share

ಪುಣೆ: ಖಾಸಗಿ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 18 ಜನ ಸಜೀವದಹನವಾದ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯ ಘೋಟವಾಡ ಫಾಟಾ ಎಂಬಲ್ಲಿ ಇಂದು (ಜೂನ್ 7) ಸಂಜೆ ಸಂಭವಿಸಿದೆ. ಕಾರ್ಖಾನೆಯ ಒಳಗೆ ಇರುವವರನ್ನು ಹುಡುಕುವ ಮತ್ತು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಪುಣೆ ಅಗ್ನಿಶಾಮಕ ದಳದ ಮಾಹಿತಿಯಂತೆ, ಫ್ಯಾಕ್ಟರಿಯ ಒಳಗೆ 37 ಮಂದಿ ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ.

ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ತಲುಪಿದ ಕೂಡಲೇ ಸುಮಾರು 8 ಅಗ್ನಿಶಾಮಕ ದಳದ ತಂಡಗಳು ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿಕೊಂಡಿವೆ. ಅಗ್ನಿಶಾಮಕ ದಳದ ಸಿಬ್ಬಂದಿ 20 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಆದರೂ ಮೊದಲು 12 ಮಂದಿ ಪ್ರಾಣ ಕಳೆದುಕೊಂಡಿದ್ದು ಖಚಿತವಾಗಿತ್ತು. ಬಳಿಕ, 5 ಮಂದಿಯ ಹುಡುಕಾಟ ನಡೆದಿತ್ತು.

ಅಲ್ಲಿಯವರೆಗೆ ಪತ್ತೆಯಾಗದಿರುವ ಕಾರ್ಮಿಕರಿಗಾಗಿ ಹುಡುಕಾಟ ಮತ್ತು ರಕ್ಷಣಾ ಕಾರ್ಯ ಭರದಿಂದ ಮಾಡಲಾಗಿತ್ತು. ಅಗ್ನಿ ಪ್ರಮಾಣ ನಿಯಂತ್ರಣಕ್ಕೆ ಸಿಕ್ಕಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಾಹಿತಿ ನೀಡಿದ್ದರು.

ಸದ್ಯದ ಮಾಹಿತಿ ಪ್ರಕಾರ ಕೆಮಿಕಲ್ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 18 ಮಂದಿ ಬಲಿಯಾಗಿದ್ದಾರೆ. ಉಳಿದ 19 ಮಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ 11,958 ಮಂದಿಗೆ ಕೊರೊನಾ ಸೋಂಕು, 340 ಸಾವು

ಆಸ್ಪತ್ರೆ ಸಿಬ್ಬಂದಿ, ಅಗ್ನಿಶಾಮದ ದಳದ ಸಮಯಪ್ರಜ್ಞೆಯಿಂದ ಮೈಸೂರಿನಲ್ಲಿ 300ಕ್ಕೂ ಹೆಚ್ಚು ರೋಗಿಗಳು ಬಚಾವ್

Published On - 8:23 pm, Mon, 7 June 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ