Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟ್ರಕ್​​ನಲ್ಲಿ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಎಲೆಕ್ಟ್ರಿಕ್​ ಸ್ಕೂಟರ್​​ಗಳಿಗೆ ಬೆಂಕಿ; ಧಗಧಗನೆ ಹೊತ್ತಿ ಉರಿದ 20 ವಾಹನಗಳು !

ದ್ರಾ ಇವಿ ಕಂಪನಿಯ ವಕ್ತಾರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,  ಸುರಕ್ಷತೆಯೇ ನಮ್ಮ ಆದ್ಯತೆ.  ಬೆಂಕಿಯನ್ನು ನಂದಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು ಎಂದು ಮಾಹಿತಿ ನೀಡಿದ್ದಾರೆ.

Video: ಟ್ರಕ್​​ನಲ್ಲಿ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಎಲೆಕ್ಟ್ರಿಕ್​ ಸ್ಕೂಟರ್​​ಗಳಿಗೆ ಬೆಂಕಿ; ಧಗಧಗನೆ ಹೊತ್ತಿ ಉರಿದ 20 ವಾಹನಗಳು !
ಟ್ರಕ್​ನಲ್ಲಿದ್ದ ಎಲೆಕ್ಟ್ರಿಕ್​ ಸ್ಕೂಟರ್​ಗಳಿಗೆ ಬೆಂಕಿ
Follow us
TV9 Web
| Updated By: Lakshmi Hegde

Updated on:Apr 12, 2022 | 8:22 PM

ದೆಹಲಿ: ಮಹಾರಾಷ್ಟ್ರದ ನಾಸಿಕ್​​ನಲ್ಲಿ ಟ್ರಕ್​ನಲ್ಲಿ ಸಾಗಿಸಲಾಗುತ್ತಿದ್ದ 20 ಎಲೆಕ್ಟ್ರಿಕ್​ ಸ್ಕೂಟರ್​​ಗಳಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ.  ದೇಶದ ಮುಂಚೂಣಿ ವಿದ್ಯುಚ್ಛಕ್ತಿ ಚಾಲಿತ ವಾಹನ ತಯಾರಕ ಕಂಪನಿಯಾದ ಜಿತೇಂದ್ರಾ ಇವಿ ಕಂಪನಿಗೆ ಸೇರಿದ ಎಲೆಕ್ಟ್ರಿಕ್​ ಸ್ಕೂಟರ್​​ಗಳು ಇವಾಗಿದ್ದು, ನಾಸಿಕ್​ನಿಂದ ಬೆಂಗಳೂರಿಗೆ ತೆಗೆದುಕೊಂಡು ಬರಲಾಗುತ್ತಿತ್ತು. ಟ್ರಕ್​​ನಲ್ಲಿ ಸುಮಾರು 40 ಸ್ಕೂಟರ್​ಗಳಿದ್ದವು. ಅದರಲ್ಲಿ 20 ಸ್ಕೂಟಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಇನ್ನುಳಿದ ಬೈಕ್​ಗಳಿಗೂ ಹಾನಿಯಾಗಿದೆ ಎಂದು ಹೇಳಲಾಗಿದೆ. ಟ್ರಕ್​ ಮೇಲೆ ಇದ್ದಂತೆ ಬೈಕ್​ಗಳು ಹೊತ್ತಿ ಉರಿದ ಭಯಾನಕ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. 

ವಿದ್ಯುತ್​ಚಾಲಿತ ದ್ವಿಚಕ್ರವಾಹನಗಳಿಗೆ ಬೆಂಕಿ ಬಿದ್ದ ಐದನೇ ಘಟನೆ ಇದು. ಕಳೆದ ಮೂರು ವಾರಗಳಲ್ಲಿ ಇಷ್ಟು ಘಟನೆಗಳು ನಡೆದಿವೆ. ಮಾರ್ಚ್​ 26ರಂದು ಪುಣೆಯಲ್ಲಿ ಓಲಾ ಎಸ್​1 ಪ್ರೋ ಎಲೆಕ್ಟ್ರಿಕ್​ ಸ್ಕೂಟರ್​​ವೊಂದರಲ್ಲಿ ಬೆಂಕಿ ಹೊತ್ತಿ ಆ ಬೈಕ್ ಸಂಪೂರ್ಣ ಬೆಂಕಿಗೆ ಆಹುತಿಯಾಯಿತು. ಅದಾದ ಮೇಲೆ ತಮಿಳುನಾಡಿನ ವೆಲ್ಲೋರ್​​ನಲ್ಲಿ ಓಕಿನಾವಾ ಎಲೆಕ್ಟ್ರಿಕ್ ಸ್ಕೂಟರ್​​ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದಾದ ಮೇಲೆ ಮಾರ್ಚ್​ 28ರಂದು ತಮಿಳುನಾಡಿನ ಟ್ರಿಚಿಯಲ್ಲಿ ಇಂಥದ್ದೇ ಒಂದು ಘಟನೆ ನಡೆಯಿತು. ನಾಲ್ಕನೇ ಪ್ರಕರಣ ಮಾರ್ಚ್ 29ರಂದು ಚೆನ್ನೈನಲ್ಲಿ ನಡೆದಿತ್ತು.

ಎಲೆಕ್ಟ್ರಿಕ್ ಸ್ಕೂಟರ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಹಾಗೇ, ಬೆಂಕಿ ಕಾಣಿಸಿಕೊಳ್ಳಲು ಅದರಲ್ಲಿ ಬಳಕೆಯಾಗುವ ಬ್ಯಾಟರಿಗಳೇ ಕಾರಣವಾಗುತ್ತವೆ. ಉತ್ತಮ ಗುಣಮಟ್ಟದ ಬ್ಯಾಟರಿಗಳನ್ನು ಬಳಸಬೇಕು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು ಜಿತೇಂದ್ರಾ ಇವಿ ಕಂಪನಿಯ ವಕ್ತಾರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,  ಸುರಕ್ಷತೆಯೇ ನಮ್ಮ ಆದ್ಯತೆ.  ಬೆಂಕಿಯನ್ನು ನಂದಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಹಾಗೇ, ಬೆಂಕಿ ಬೀಳಲು ಕಾರಣವೇನು ಎಂಬ ಬಗ್ಗೆ ತನಿಖೆ ಶುರು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನ್ಯೂಯಾರ್ಕ್​​ನ ಸಬ್​ವೇ ಸ್ಟೇಶನ್​​ಗಳಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿ; 13 ಮಂದಿಗೆ ಗಾಯ, ಉಗ್ರಕೃತ್ಯವೆಂದ ನೆಟ್ಟಿಗರು

Published On - 8:22 pm, Tue, 12 April 22

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ