AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟ್ರಕ್​​ನಲ್ಲಿ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಎಲೆಕ್ಟ್ರಿಕ್​ ಸ್ಕೂಟರ್​​ಗಳಿಗೆ ಬೆಂಕಿ; ಧಗಧಗನೆ ಹೊತ್ತಿ ಉರಿದ 20 ವಾಹನಗಳು !

ದ್ರಾ ಇವಿ ಕಂಪನಿಯ ವಕ್ತಾರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,  ಸುರಕ್ಷತೆಯೇ ನಮ್ಮ ಆದ್ಯತೆ.  ಬೆಂಕಿಯನ್ನು ನಂದಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು ಎಂದು ಮಾಹಿತಿ ನೀಡಿದ್ದಾರೆ.

Video: ಟ್ರಕ್​​ನಲ್ಲಿ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಎಲೆಕ್ಟ್ರಿಕ್​ ಸ್ಕೂಟರ್​​ಗಳಿಗೆ ಬೆಂಕಿ; ಧಗಧಗನೆ ಹೊತ್ತಿ ಉರಿದ 20 ವಾಹನಗಳು !
ಟ್ರಕ್​ನಲ್ಲಿದ್ದ ಎಲೆಕ್ಟ್ರಿಕ್​ ಸ್ಕೂಟರ್​ಗಳಿಗೆ ಬೆಂಕಿ
TV9 Web
| Edited By: |

Updated on:Apr 12, 2022 | 8:22 PM

Share

ದೆಹಲಿ: ಮಹಾರಾಷ್ಟ್ರದ ನಾಸಿಕ್​​ನಲ್ಲಿ ಟ್ರಕ್​ನಲ್ಲಿ ಸಾಗಿಸಲಾಗುತ್ತಿದ್ದ 20 ಎಲೆಕ್ಟ್ರಿಕ್​ ಸ್ಕೂಟರ್​​ಗಳಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ.  ದೇಶದ ಮುಂಚೂಣಿ ವಿದ್ಯುಚ್ಛಕ್ತಿ ಚಾಲಿತ ವಾಹನ ತಯಾರಕ ಕಂಪನಿಯಾದ ಜಿತೇಂದ್ರಾ ಇವಿ ಕಂಪನಿಗೆ ಸೇರಿದ ಎಲೆಕ್ಟ್ರಿಕ್​ ಸ್ಕೂಟರ್​​ಗಳು ಇವಾಗಿದ್ದು, ನಾಸಿಕ್​ನಿಂದ ಬೆಂಗಳೂರಿಗೆ ತೆಗೆದುಕೊಂಡು ಬರಲಾಗುತ್ತಿತ್ತು. ಟ್ರಕ್​​ನಲ್ಲಿ ಸುಮಾರು 40 ಸ್ಕೂಟರ್​ಗಳಿದ್ದವು. ಅದರಲ್ಲಿ 20 ಸ್ಕೂಟಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಇನ್ನುಳಿದ ಬೈಕ್​ಗಳಿಗೂ ಹಾನಿಯಾಗಿದೆ ಎಂದು ಹೇಳಲಾಗಿದೆ. ಟ್ರಕ್​ ಮೇಲೆ ಇದ್ದಂತೆ ಬೈಕ್​ಗಳು ಹೊತ್ತಿ ಉರಿದ ಭಯಾನಕ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. 

ವಿದ್ಯುತ್​ಚಾಲಿತ ದ್ವಿಚಕ್ರವಾಹನಗಳಿಗೆ ಬೆಂಕಿ ಬಿದ್ದ ಐದನೇ ಘಟನೆ ಇದು. ಕಳೆದ ಮೂರು ವಾರಗಳಲ್ಲಿ ಇಷ್ಟು ಘಟನೆಗಳು ನಡೆದಿವೆ. ಮಾರ್ಚ್​ 26ರಂದು ಪುಣೆಯಲ್ಲಿ ಓಲಾ ಎಸ್​1 ಪ್ರೋ ಎಲೆಕ್ಟ್ರಿಕ್​ ಸ್ಕೂಟರ್​​ವೊಂದರಲ್ಲಿ ಬೆಂಕಿ ಹೊತ್ತಿ ಆ ಬೈಕ್ ಸಂಪೂರ್ಣ ಬೆಂಕಿಗೆ ಆಹುತಿಯಾಯಿತು. ಅದಾದ ಮೇಲೆ ತಮಿಳುನಾಡಿನ ವೆಲ್ಲೋರ್​​ನಲ್ಲಿ ಓಕಿನಾವಾ ಎಲೆಕ್ಟ್ರಿಕ್ ಸ್ಕೂಟರ್​​ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದಾದ ಮೇಲೆ ಮಾರ್ಚ್​ 28ರಂದು ತಮಿಳುನಾಡಿನ ಟ್ರಿಚಿಯಲ್ಲಿ ಇಂಥದ್ದೇ ಒಂದು ಘಟನೆ ನಡೆಯಿತು. ನಾಲ್ಕನೇ ಪ್ರಕರಣ ಮಾರ್ಚ್ 29ರಂದು ಚೆನ್ನೈನಲ್ಲಿ ನಡೆದಿತ್ತು.

ಎಲೆಕ್ಟ್ರಿಕ್ ಸ್ಕೂಟರ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಹಾಗೇ, ಬೆಂಕಿ ಕಾಣಿಸಿಕೊಳ್ಳಲು ಅದರಲ್ಲಿ ಬಳಕೆಯಾಗುವ ಬ್ಯಾಟರಿಗಳೇ ಕಾರಣವಾಗುತ್ತವೆ. ಉತ್ತಮ ಗುಣಮಟ್ಟದ ಬ್ಯಾಟರಿಗಳನ್ನು ಬಳಸಬೇಕು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು ಜಿತೇಂದ್ರಾ ಇವಿ ಕಂಪನಿಯ ವಕ್ತಾರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,  ಸುರಕ್ಷತೆಯೇ ನಮ್ಮ ಆದ್ಯತೆ.  ಬೆಂಕಿಯನ್ನು ನಂದಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಹಾಗೇ, ಬೆಂಕಿ ಬೀಳಲು ಕಾರಣವೇನು ಎಂಬ ಬಗ್ಗೆ ತನಿಖೆ ಶುರು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನ್ಯೂಯಾರ್ಕ್​​ನ ಸಬ್​ವೇ ಸ್ಟೇಶನ್​​ಗಳಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿ; 13 ಮಂದಿಗೆ ಗಾಯ, ಉಗ್ರಕೃತ್ಯವೆಂದ ನೆಟ್ಟಿಗರು

Published On - 8:22 pm, Tue, 12 April 22

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!