Video: ಟ್ರಕ್​​ನಲ್ಲಿ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಎಲೆಕ್ಟ್ರಿಕ್​ ಸ್ಕೂಟರ್​​ಗಳಿಗೆ ಬೆಂಕಿ; ಧಗಧಗನೆ ಹೊತ್ತಿ ಉರಿದ 20 ವಾಹನಗಳು !

ದ್ರಾ ಇವಿ ಕಂಪನಿಯ ವಕ್ತಾರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,  ಸುರಕ್ಷತೆಯೇ ನಮ್ಮ ಆದ್ಯತೆ.  ಬೆಂಕಿಯನ್ನು ನಂದಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು ಎಂದು ಮಾಹಿತಿ ನೀಡಿದ್ದಾರೆ.

Video: ಟ್ರಕ್​​ನಲ್ಲಿ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಎಲೆಕ್ಟ್ರಿಕ್​ ಸ್ಕೂಟರ್​​ಗಳಿಗೆ ಬೆಂಕಿ; ಧಗಧಗನೆ ಹೊತ್ತಿ ಉರಿದ 20 ವಾಹನಗಳು !
ಟ್ರಕ್​ನಲ್ಲಿದ್ದ ಎಲೆಕ್ಟ್ರಿಕ್​ ಸ್ಕೂಟರ್​ಗಳಿಗೆ ಬೆಂಕಿ
Follow us
| Updated By: Lakshmi Hegde

Updated on:Apr 12, 2022 | 8:22 PM

ದೆಹಲಿ: ಮಹಾರಾಷ್ಟ್ರದ ನಾಸಿಕ್​​ನಲ್ಲಿ ಟ್ರಕ್​ನಲ್ಲಿ ಸಾಗಿಸಲಾಗುತ್ತಿದ್ದ 20 ಎಲೆಕ್ಟ್ರಿಕ್​ ಸ್ಕೂಟರ್​​ಗಳಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ.  ದೇಶದ ಮುಂಚೂಣಿ ವಿದ್ಯುಚ್ಛಕ್ತಿ ಚಾಲಿತ ವಾಹನ ತಯಾರಕ ಕಂಪನಿಯಾದ ಜಿತೇಂದ್ರಾ ಇವಿ ಕಂಪನಿಗೆ ಸೇರಿದ ಎಲೆಕ್ಟ್ರಿಕ್​ ಸ್ಕೂಟರ್​​ಗಳು ಇವಾಗಿದ್ದು, ನಾಸಿಕ್​ನಿಂದ ಬೆಂಗಳೂರಿಗೆ ತೆಗೆದುಕೊಂಡು ಬರಲಾಗುತ್ತಿತ್ತು. ಟ್ರಕ್​​ನಲ್ಲಿ ಸುಮಾರು 40 ಸ್ಕೂಟರ್​ಗಳಿದ್ದವು. ಅದರಲ್ಲಿ 20 ಸ್ಕೂಟಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಇನ್ನುಳಿದ ಬೈಕ್​ಗಳಿಗೂ ಹಾನಿಯಾಗಿದೆ ಎಂದು ಹೇಳಲಾಗಿದೆ. ಟ್ರಕ್​ ಮೇಲೆ ಇದ್ದಂತೆ ಬೈಕ್​ಗಳು ಹೊತ್ತಿ ಉರಿದ ಭಯಾನಕ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. 

ವಿದ್ಯುತ್​ಚಾಲಿತ ದ್ವಿಚಕ್ರವಾಹನಗಳಿಗೆ ಬೆಂಕಿ ಬಿದ್ದ ಐದನೇ ಘಟನೆ ಇದು. ಕಳೆದ ಮೂರು ವಾರಗಳಲ್ಲಿ ಇಷ್ಟು ಘಟನೆಗಳು ನಡೆದಿವೆ. ಮಾರ್ಚ್​ 26ರಂದು ಪುಣೆಯಲ್ಲಿ ಓಲಾ ಎಸ್​1 ಪ್ರೋ ಎಲೆಕ್ಟ್ರಿಕ್​ ಸ್ಕೂಟರ್​​ವೊಂದರಲ್ಲಿ ಬೆಂಕಿ ಹೊತ್ತಿ ಆ ಬೈಕ್ ಸಂಪೂರ್ಣ ಬೆಂಕಿಗೆ ಆಹುತಿಯಾಯಿತು. ಅದಾದ ಮೇಲೆ ತಮಿಳುನಾಡಿನ ವೆಲ್ಲೋರ್​​ನಲ್ಲಿ ಓಕಿನಾವಾ ಎಲೆಕ್ಟ್ರಿಕ್ ಸ್ಕೂಟರ್​​ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದಾದ ಮೇಲೆ ಮಾರ್ಚ್​ 28ರಂದು ತಮಿಳುನಾಡಿನ ಟ್ರಿಚಿಯಲ್ಲಿ ಇಂಥದ್ದೇ ಒಂದು ಘಟನೆ ನಡೆಯಿತು. ನಾಲ್ಕನೇ ಪ್ರಕರಣ ಮಾರ್ಚ್ 29ರಂದು ಚೆನ್ನೈನಲ್ಲಿ ನಡೆದಿತ್ತು.

ಎಲೆಕ್ಟ್ರಿಕ್ ಸ್ಕೂಟರ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಹಾಗೇ, ಬೆಂಕಿ ಕಾಣಿಸಿಕೊಳ್ಳಲು ಅದರಲ್ಲಿ ಬಳಕೆಯಾಗುವ ಬ್ಯಾಟರಿಗಳೇ ಕಾರಣವಾಗುತ್ತವೆ. ಉತ್ತಮ ಗುಣಮಟ್ಟದ ಬ್ಯಾಟರಿಗಳನ್ನು ಬಳಸಬೇಕು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು ಜಿತೇಂದ್ರಾ ಇವಿ ಕಂಪನಿಯ ವಕ್ತಾರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,  ಸುರಕ್ಷತೆಯೇ ನಮ್ಮ ಆದ್ಯತೆ.  ಬೆಂಕಿಯನ್ನು ನಂದಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಹಾಗೇ, ಬೆಂಕಿ ಬೀಳಲು ಕಾರಣವೇನು ಎಂಬ ಬಗ್ಗೆ ತನಿಖೆ ಶುರು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನ್ಯೂಯಾರ್ಕ್​​ನ ಸಬ್​ವೇ ಸ್ಟೇಶನ್​​ಗಳಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿ; 13 ಮಂದಿಗೆ ಗಾಯ, ಉಗ್ರಕೃತ್ಯವೆಂದ ನೆಟ್ಟಿಗರು

Published On - 8:22 pm, Tue, 12 April 22

ತಾಜಾ ಸುದ್ದಿ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ
ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!
ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ