Telangana: ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಬಳಿ ಅಗ್ನಿ ಅವಘಡ, 3 ಅಂಗಡಿ ಮುಂಗಟ್ಟುಗಳಿಗೆ ಬೆಂಕಿ

ತೆಲಂಗಾಣದ ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಬಳಿ ಇರುವ ಪಾಲಿಕಾ ಬಜಾರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಅಂಗಡಿ ಮುಂಗಟ್ಟುಗಳು ಬೆಂಕಿಗಾಹುತಿಯಾಗಿವೆ.

Telangana: ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಬಳಿ ಅಗ್ನಿ ಅವಘಡ, 3 ಅಂಗಡಿ ಮುಂಗಟ್ಟುಗಳಿಗೆ ಬೆಂಕಿ
ಅಗ್ನಿ ಅವಘಡImage Credit source: ABP Live
Follow us
|

Updated on: Jul 09, 2023 | 9:50 AM

ತೆಲಂಗಾಣದ ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಬಳಿ ಇರುವ ಪಾಲಿಕಾ ಬಜಾರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಅಂಗಡಿ ಮುಂಗಟ್ಟುಗಳು ಬೆಂಕಿಗಾಹುತಿಯಾಗಿವೆ. ಬಜಾರ್‌ನ ಬಟ್ಟೆ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಗಣನೀಯವಾಗಿ ಹರಡಿದೆ ಎಂದು ವರದಿಯಾಗಿದೆ.

ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದರು. ಆದಾಗ್ಯೂ, ಅಂಗಡಿಯೊಳಗೆ ಅವಶೇಷಗಳ ಉಪಸ್ಥಿತಿಯಿಂದಾಗಿ ಬೆಂಕಿ ವೇಗವಾಗಿ ಹರಡುತ್ತಿದೆ ಎಂದು ವರದಿಯಾಗಿದೆ, ಇದರಿಂದಾಗಿ ಬೆಂಕಿ ನಂದಿಸುವ ಪ್ರಯತ್ನಗಳು ಸವಾಲಾಗಿವೆ.

ಮತ್ತಷ್ಟು ಓದಿ:ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ

ಬೆಂಕಿಯ ತೀವ್ರತೆಯ ಪರಿಣಾಮವಾಗಿ ಆ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದೆ, ಇದು ಸಾಕಷ್ಟು ಎತ್ತರಕ್ಕೆ ಏರಿದೆ. ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೆ ಅಪಾಯಕಾರಿಯಾಗಿ ಸಮೀಪಿಸಲಾರಂಭಿಸಿದೆ.

ದಟ್ಟವಾದ ಹೊಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುಂಬಿದೆ. ಈ ಪರಿಸ್ಥಿತಿ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ