AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ನೋದ ಹೋಟೆಲ್​​ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 15 ಮಂದಿ ಸಿಲುಕಿರುವ ಶಂಕೆ

ಸ್ಥಳೀಯ ಮೂಲಗಳ ಪ್ರಕಾರ, ಸೋಮವಾರ ಬೆಳಗ್ಗೆ ಗೋಮತಿ ನದಿಯ ಬಳಿಯ ಐಷಾರಾಮಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಲಕ್ನೋದ ಹೋಟೆಲ್​​ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 15 ಮಂದಿ ಸಿಲುಕಿರುವ ಶಂಕೆ
ಲಕ್ನೋ ಅಗ್ನಿ ಅವಘಡ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 05, 2022 | 12:50 PM

Share

ಲಕ್ನೋದ (Lucknow) ಹಜರತ್‌ಗಂಜ್ ಪ್ರದೇಶದಲ್ಲಿರುವ ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಸಾವಿಗೀಡಾಗಿದ್ದರೆ. ಸ್ಥಳೀಯ ಮೂಲಗಳ ಪ್ರಕಾರ, ಸೋಮವಾರ ಬೆಳಗ್ಗೆ ಗೋಮತಿ ನದಿಯ ಬಳಿಯ ಐಷಾರಾಮಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು ಬೆಂಕಿಯನ್ನು ನಂದಿಸಲು ಪ್ರಯತ್ನಿಸಲು ಪ್ರಾರಂಭಿಸಿದರು. ಹೋಟೆಲ್ ಒಳಗೆ ಮತ್ತಷ್ಟು ಜನರು ಸಿಲುಕಿರುವ ಶಂಕೆ ಇದೆ. ಸುದ್ದಿ ಸಂಸ್ಥೆ ಎಎನ್‌ಐ ಬಿಡುಗಡೆ ಮಾಡಿರುವ ವಿಡಿಯೊದಲ್ಲಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ದೃಶ್ಯ ಸೆರೆಯಾಗಿದೆ. ಹೋಟೆಲ್‌ನ ಎಲ್ಲಾ ಕಡೆಯಿಂದ ಕಪ್ಪು ಹೊಗೆ ಹೊರಬರುವುದನ್ನು ಇದು ತೋರಿಸುತ್ತದೆ. ಹಲವಾರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದೆ. ಸುಸಜ್ಜಿತ ಐದು ಅಂತಸ್ತಿನ ಹೋಟೆಲ್‌ನ ನಾಲ್ಕು ಮಹಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಜನರನ್ನು ಹೋಟೆಲ್ ಕಿಟಕಿಗಳ ಮೂಲಕ ಹೊರ ತೆಗೆದಿದ್ದಾರೆ

ಡಾ.ಶ್ಯಾಮ ಪ್ರಸಾದ್ ಮುಖರ್ಜಿ (ಸಿವಿಲ್) ಆಸ್ಪತ್ರೆಗೆ ಇಲ್ಲಿಯವರೆಗೆ 9 ಜನರನ್ನು ದಾಖಲಿಸಲಾಗಿದೆ; 2 ಸತ್ತ. ಸಿವಿಲ್ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ.ಆರ್.ಪಿ.ಸಿಂಗ್ ಮಾತನಾಡಿ,  ಇಲ್ಲಿಯವರೆಗೆ 7 ಜನರನ್ನು ದಾಖಲಿಸಲಾಗಿದೆ. ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ತಲುಪಿದ್ದಾರೆ. ಲಕ್ನೋದ ಲೆವಾನಾ ಹೋಟೆಲ್‌ನಲ್ಲಿ ಸಂಭವಿಸಿದ ಬೆಂಕಿಯ ಬಗ್ಗೆ ಮಾತನಾಡಿದ ಅವರು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಇದರೊಂದಿಗೆ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದರು. ಮೂರು ಅಂತಸ್ತಿನ ಕಟ್ಟಡದಲ್ಲಿ ಇನ್ನೂ ಐದಾರು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಲಕ್ನೋ ಹೋಟೆಲ್ ನಗರದ ಹೃದಯಭಾಗದಲ್ಲಿದೆ. ಸಿಕಂದರ್ ಬಾಗ್, ಚತ್ತರ್ ಮಂಜಿಲ್ ಅರಮನೆ ಮತ್ತು ನವಾಬ್ ವಾಜಿದ್ ಅಲಿ ಶಾ ಝೂಲಾಜಿಕಲ್ ಗಾರ್ಡನ್ ಇಲ್ಲಿಂದ ಬಹಳ ಹತ್ತಿರದಲ್ಲಿದೆ.

Published On - 12:33 pm, Mon, 5 September 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್