AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Fire Attack: ನವಿ ಮುಂಬೈನ ಶೋರೂಂನಲ್ಲಿ ಭಾರಿ ಅಗ್ನಿದುರಂತ; ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು, ಕೋಟ್ಯಂತರ ರೂಪಾಯಿ ನಷ್ಟ

ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ನೆರುಲ್​, ವಶಿಯಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದರು. ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ತರಲಾಗಿತ್ತು.

Mumbai Fire Attack: ನವಿ ಮುಂಬೈನ ಶೋರೂಂನಲ್ಲಿ ಭಾರಿ ಅಗ್ನಿದುರಂತ; ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು, ಕೋಟ್ಯಂತರ ರೂಪಾಯಿ ನಷ್ಟ
ಅಗ್ನಿ ಅವಘಡದ ಚಿತ್ರ
TV9 Web
| Edited By: |

Updated on:Dec 08, 2021 | 1:29 PM

Share

ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿರುವ ಶೋರೂಮ್​​ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಆಗಿದ್ದು, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾಗಿವೆ. ಅವಘಡದಲ್ಲಿ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.  ಈ ಶೋರೂಂನಲ್ಲಿಯೇ ಕಾರುಗಳನ್ನು ಪಾರ್ಕ್​ ಮಾಡಲಾದ ಗೋಡೌನ್​ ಕೂಡ ಇತ್ತು. ಇಂದು ಮುಂಜಾನೆ 5.30ರಹೊತ್ತಿಗೆ ಬೆಂಕಿ ಬಿದ್ದಿದೆ ಎಂದು ಎಂಐಡಿಸಿ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಆರ್​.ಬಿ.ಪಾಟೀಲ್​ ತಿಳಿಸಿದ್ದಾರೆ.  

ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ನೆರುಲ್​, ವಶಿಯಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದರು. ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ತರಲಾಗಿತ್ತು. ಎಲ್ಲ ಸೇರಿ ಹೋರಾಟ ಮಾಡಿದರೂ ಬೆಂಕಿ ನಂದಿಸಲು 6ಗಂಟೆಗಳ ಕಾಲ ಬೇಕಾಯಿತು  ಎಂದು ವರದಿಯಾಗಿದೆ. ಶೋರೂಂ ಮತ್ತು ಗೋಡೌನ್​ಗೆ ಬೆಂಕಿ ಬೀಳಲು ನಿಜವಾದ ಕಾರಣ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ಪ್ರಾರಂಭ ಮಾಡಿದ್ದಾರೆ. ಮೊದಲು ಬೆಂಕಿ ಹೊತ್ತಿದ್ದು ಕಾರು ಶೋರೂಂಗೆ ಸೇರಿದ ಮಳಿಗೆಯಲ್ಲಿ ಪಾರ್ಕ್​ ಮಾಡಲಾಗಿದ್ದ ಡಿ-207 ಬಿಎಂಡಬ್ಲ್ಯೂ ಕಾರಿನಲ್ಲಿ. ಅದು ಒಮ್ಮೆಲೇ ಪಸರಿಸುತ್ತ ಹೋಗಿ ಸುಮಾರು 40 ಕಾರುಗಳು ಧಗಧಗನೆ ಹೊತ್ತಿ ಉರಿದಿವೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಇದನ್ನೂ ಓದಿ: ಒಮಿಕ್ರಾನ್ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ತೀವ್ರವಾಗಿಲ್ಲ, ಈಗಿರುವ ಕೊವಿಡ್ ಲಸಿಕೆಗಳು ಇದಕ್ಕೆ ಸಾಕು: ವಿಶ್ವ ಆರೋಗ್ಯ ಸಂಸ್ಥೆ

Published On - 1:01 pm, Wed, 8 December 21

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?