AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Fire Attack: ನವಿ ಮುಂಬೈನ ಶೋರೂಂನಲ್ಲಿ ಭಾರಿ ಅಗ್ನಿದುರಂತ; ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು, ಕೋಟ್ಯಂತರ ರೂಪಾಯಿ ನಷ್ಟ

ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ನೆರುಲ್​, ವಶಿಯಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದರು. ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ತರಲಾಗಿತ್ತು.

Mumbai Fire Attack: ನವಿ ಮುಂಬೈನ ಶೋರೂಂನಲ್ಲಿ ಭಾರಿ ಅಗ್ನಿದುರಂತ; ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು, ಕೋಟ್ಯಂತರ ರೂಪಾಯಿ ನಷ್ಟ
ಅಗ್ನಿ ಅವಘಡದ ಚಿತ್ರ
TV9 Web
| Edited By: |

Updated on:Dec 08, 2021 | 1:29 PM

Share

ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿರುವ ಶೋರೂಮ್​​ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಆಗಿದ್ದು, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾಗಿವೆ. ಅವಘಡದಲ್ಲಿ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.  ಈ ಶೋರೂಂನಲ್ಲಿಯೇ ಕಾರುಗಳನ್ನು ಪಾರ್ಕ್​ ಮಾಡಲಾದ ಗೋಡೌನ್​ ಕೂಡ ಇತ್ತು. ಇಂದು ಮುಂಜಾನೆ 5.30ರಹೊತ್ತಿಗೆ ಬೆಂಕಿ ಬಿದ್ದಿದೆ ಎಂದು ಎಂಐಡಿಸಿ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಆರ್​.ಬಿ.ಪಾಟೀಲ್​ ತಿಳಿಸಿದ್ದಾರೆ.  

ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ನೆರುಲ್​, ವಶಿಯಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದರು. ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ತರಲಾಗಿತ್ತು. ಎಲ್ಲ ಸೇರಿ ಹೋರಾಟ ಮಾಡಿದರೂ ಬೆಂಕಿ ನಂದಿಸಲು 6ಗಂಟೆಗಳ ಕಾಲ ಬೇಕಾಯಿತು  ಎಂದು ವರದಿಯಾಗಿದೆ. ಶೋರೂಂ ಮತ್ತು ಗೋಡೌನ್​ಗೆ ಬೆಂಕಿ ಬೀಳಲು ನಿಜವಾದ ಕಾರಣ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ಪ್ರಾರಂಭ ಮಾಡಿದ್ದಾರೆ. ಮೊದಲು ಬೆಂಕಿ ಹೊತ್ತಿದ್ದು ಕಾರು ಶೋರೂಂಗೆ ಸೇರಿದ ಮಳಿಗೆಯಲ್ಲಿ ಪಾರ್ಕ್​ ಮಾಡಲಾಗಿದ್ದ ಡಿ-207 ಬಿಎಂಡಬ್ಲ್ಯೂ ಕಾರಿನಲ್ಲಿ. ಅದು ಒಮ್ಮೆಲೇ ಪಸರಿಸುತ್ತ ಹೋಗಿ ಸುಮಾರು 40 ಕಾರುಗಳು ಧಗಧಗನೆ ಹೊತ್ತಿ ಉರಿದಿವೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಇದನ್ನೂ ಓದಿ: ಒಮಿಕ್ರಾನ್ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ತೀವ್ರವಾಗಿಲ್ಲ, ಈಗಿರುವ ಕೊವಿಡ್ ಲಸಿಕೆಗಳು ಇದಕ್ಕೆ ಸಾಕು: ವಿಶ್ವ ಆರೋಗ್ಯ ಸಂಸ್ಥೆ

Published On - 1:01 pm, Wed, 8 December 21

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ