AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Fire Attack: ನವಿ ಮುಂಬೈನ ಶೋರೂಂನಲ್ಲಿ ಭಾರಿ ಅಗ್ನಿದುರಂತ; ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು, ಕೋಟ್ಯಂತರ ರೂಪಾಯಿ ನಷ್ಟ

ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ನೆರುಲ್​, ವಶಿಯಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದರು. ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ತರಲಾಗಿತ್ತು.

Mumbai Fire Attack: ನವಿ ಮುಂಬೈನ ಶೋರೂಂನಲ್ಲಿ ಭಾರಿ ಅಗ್ನಿದುರಂತ; ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು, ಕೋಟ್ಯಂತರ ರೂಪಾಯಿ ನಷ್ಟ
ಅಗ್ನಿ ಅವಘಡದ ಚಿತ್ರ
TV9 Web
| Edited By: |

Updated on:Dec 08, 2021 | 1:29 PM

Share

ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿರುವ ಶೋರೂಮ್​​ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಆಗಿದ್ದು, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾಗಿವೆ. ಅವಘಡದಲ್ಲಿ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.  ಈ ಶೋರೂಂನಲ್ಲಿಯೇ ಕಾರುಗಳನ್ನು ಪಾರ್ಕ್​ ಮಾಡಲಾದ ಗೋಡೌನ್​ ಕೂಡ ಇತ್ತು. ಇಂದು ಮುಂಜಾನೆ 5.30ರಹೊತ್ತಿಗೆ ಬೆಂಕಿ ಬಿದ್ದಿದೆ ಎಂದು ಎಂಐಡಿಸಿ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಆರ್​.ಬಿ.ಪಾಟೀಲ್​ ತಿಳಿಸಿದ್ದಾರೆ.  

ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ನೆರುಲ್​, ವಶಿಯಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದರು. ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ತರಲಾಗಿತ್ತು. ಎಲ್ಲ ಸೇರಿ ಹೋರಾಟ ಮಾಡಿದರೂ ಬೆಂಕಿ ನಂದಿಸಲು 6ಗಂಟೆಗಳ ಕಾಲ ಬೇಕಾಯಿತು  ಎಂದು ವರದಿಯಾಗಿದೆ. ಶೋರೂಂ ಮತ್ತು ಗೋಡೌನ್​ಗೆ ಬೆಂಕಿ ಬೀಳಲು ನಿಜವಾದ ಕಾರಣ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ಪ್ರಾರಂಭ ಮಾಡಿದ್ದಾರೆ. ಮೊದಲು ಬೆಂಕಿ ಹೊತ್ತಿದ್ದು ಕಾರು ಶೋರೂಂಗೆ ಸೇರಿದ ಮಳಿಗೆಯಲ್ಲಿ ಪಾರ್ಕ್​ ಮಾಡಲಾಗಿದ್ದ ಡಿ-207 ಬಿಎಂಡಬ್ಲ್ಯೂ ಕಾರಿನಲ್ಲಿ. ಅದು ಒಮ್ಮೆಲೇ ಪಸರಿಸುತ್ತ ಹೋಗಿ ಸುಮಾರು 40 ಕಾರುಗಳು ಧಗಧಗನೆ ಹೊತ್ತಿ ಉರಿದಿವೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಇದನ್ನೂ ಓದಿ: ಒಮಿಕ್ರಾನ್ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ತೀವ್ರವಾಗಿಲ್ಲ, ಈಗಿರುವ ಕೊವಿಡ್ ಲಸಿಕೆಗಳು ಇದಕ್ಕೆ ಸಾಕು: ವಿಶ್ವ ಆರೋಗ್ಯ ಸಂಸ್ಥೆ

Published On - 1:01 pm, Wed, 8 December 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ