AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Fire Attack: ನವಿ ಮುಂಬೈನ ಶೋರೂಂನಲ್ಲಿ ಭಾರಿ ಅಗ್ನಿದುರಂತ; ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು, ಕೋಟ್ಯಂತರ ರೂಪಾಯಿ ನಷ್ಟ

ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ನೆರುಲ್​, ವಶಿಯಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದರು. ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ತರಲಾಗಿತ್ತು.

Mumbai Fire Attack: ನವಿ ಮುಂಬೈನ ಶೋರೂಂನಲ್ಲಿ ಭಾರಿ ಅಗ್ನಿದುರಂತ; ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು, ಕೋಟ್ಯಂತರ ರೂಪಾಯಿ ನಷ್ಟ
ಅಗ್ನಿ ಅವಘಡದ ಚಿತ್ರ
TV9 Web
| Edited By: |

Updated on:Dec 08, 2021 | 1:29 PM

Share

ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿರುವ ಶೋರೂಮ್​​ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಆಗಿದ್ದು, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾಗಿವೆ. ಅವಘಡದಲ್ಲಿ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.  ಈ ಶೋರೂಂನಲ್ಲಿಯೇ ಕಾರುಗಳನ್ನು ಪಾರ್ಕ್​ ಮಾಡಲಾದ ಗೋಡೌನ್​ ಕೂಡ ಇತ್ತು. ಇಂದು ಮುಂಜಾನೆ 5.30ರಹೊತ್ತಿಗೆ ಬೆಂಕಿ ಬಿದ್ದಿದೆ ಎಂದು ಎಂಐಡಿಸಿ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಆರ್​.ಬಿ.ಪಾಟೀಲ್​ ತಿಳಿಸಿದ್ದಾರೆ.  

ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ನೆರುಲ್​, ವಶಿಯಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದರು. ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ತರಲಾಗಿತ್ತು. ಎಲ್ಲ ಸೇರಿ ಹೋರಾಟ ಮಾಡಿದರೂ ಬೆಂಕಿ ನಂದಿಸಲು 6ಗಂಟೆಗಳ ಕಾಲ ಬೇಕಾಯಿತು  ಎಂದು ವರದಿಯಾಗಿದೆ. ಶೋರೂಂ ಮತ್ತು ಗೋಡೌನ್​ಗೆ ಬೆಂಕಿ ಬೀಳಲು ನಿಜವಾದ ಕಾರಣ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ಪ್ರಾರಂಭ ಮಾಡಿದ್ದಾರೆ. ಮೊದಲು ಬೆಂಕಿ ಹೊತ್ತಿದ್ದು ಕಾರು ಶೋರೂಂಗೆ ಸೇರಿದ ಮಳಿಗೆಯಲ್ಲಿ ಪಾರ್ಕ್​ ಮಾಡಲಾಗಿದ್ದ ಡಿ-207 ಬಿಎಂಡಬ್ಲ್ಯೂ ಕಾರಿನಲ್ಲಿ. ಅದು ಒಮ್ಮೆಲೇ ಪಸರಿಸುತ್ತ ಹೋಗಿ ಸುಮಾರು 40 ಕಾರುಗಳು ಧಗಧಗನೆ ಹೊತ್ತಿ ಉರಿದಿವೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಇದನ್ನೂ ಓದಿ: ಒಮಿಕ್ರಾನ್ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ತೀವ್ರವಾಗಿಲ್ಲ, ಈಗಿರುವ ಕೊವಿಡ್ ಲಸಿಕೆಗಳು ಇದಕ್ಕೆ ಸಾಕು: ವಿಶ್ವ ಆರೋಗ್ಯ ಸಂಸ್ಥೆ

Published On - 1:01 pm, Wed, 8 December 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ