AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Fire Attack: ನವಿ ಮುಂಬೈನ ಶೋರೂಂನಲ್ಲಿ ಭಾರಿ ಅಗ್ನಿದುರಂತ; ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು, ಕೋಟ್ಯಂತರ ರೂಪಾಯಿ ನಷ್ಟ

ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ನೆರುಲ್​, ವಶಿಯಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದರು. ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ತರಲಾಗಿತ್ತು.

Mumbai Fire Attack: ನವಿ ಮುಂಬೈನ ಶೋರೂಂನಲ್ಲಿ ಭಾರಿ ಅಗ್ನಿದುರಂತ; ಸುಟ್ಟು ಕರಕಲಾದ 40 ಬಿಎಂಡಬ್ಲ್ಯೂ ಕಾರುಗಳು, ಕೋಟ್ಯಂತರ ರೂಪಾಯಿ ನಷ್ಟ
ಅಗ್ನಿ ಅವಘಡದ ಚಿತ್ರ
TV9 Web
| Edited By: |

Updated on:Dec 08, 2021 | 1:29 PM

Share

ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿರುವ ಶೋರೂಮ್​​ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಆಗಿದ್ದು, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾಗಿವೆ. ಅವಘಡದಲ್ಲಿ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.  ಈ ಶೋರೂಂನಲ್ಲಿಯೇ ಕಾರುಗಳನ್ನು ಪಾರ್ಕ್​ ಮಾಡಲಾದ ಗೋಡೌನ್​ ಕೂಡ ಇತ್ತು. ಇಂದು ಮುಂಜಾನೆ 5.30ರಹೊತ್ತಿಗೆ ಬೆಂಕಿ ಬಿದ್ದಿದೆ ಎಂದು ಎಂಐಡಿಸಿ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಆರ್​.ಬಿ.ಪಾಟೀಲ್​ ತಿಳಿಸಿದ್ದಾರೆ.  

ಬೆಂಕಿಯ ತೀವ್ರತೆ ಅತಿಹೆಚ್ಚಾಗಿ ಇದ್ದುದರಿಂದ ಕೇವಲ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನ ಸಾಕಾಗಲಿಲ್ಲ. ನೆರುಲ್​, ವಶಿಯಿಂದಲೂ ಅಗ್ನಿಶಾಮಕ ದಳದ ಸಿಬ್ಬಂದಿ ಬಂದರು. ಒಟ್ಟು 10 ಫೈರ್​ ಫೈಟ್​ ಟ್ರಕ್​ಗಳನ್ನು ತರಲಾಗಿತ್ತು. ಎಲ್ಲ ಸೇರಿ ಹೋರಾಟ ಮಾಡಿದರೂ ಬೆಂಕಿ ನಂದಿಸಲು 6ಗಂಟೆಗಳ ಕಾಲ ಬೇಕಾಯಿತು  ಎಂದು ವರದಿಯಾಗಿದೆ. ಶೋರೂಂ ಮತ್ತು ಗೋಡೌನ್​ಗೆ ಬೆಂಕಿ ಬೀಳಲು ನಿಜವಾದ ಕಾರಣ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ಪ್ರಾರಂಭ ಮಾಡಿದ್ದಾರೆ. ಮೊದಲು ಬೆಂಕಿ ಹೊತ್ತಿದ್ದು ಕಾರು ಶೋರೂಂಗೆ ಸೇರಿದ ಮಳಿಗೆಯಲ್ಲಿ ಪಾರ್ಕ್​ ಮಾಡಲಾಗಿದ್ದ ಡಿ-207 ಬಿಎಂಡಬ್ಲ್ಯೂ ಕಾರಿನಲ್ಲಿ. ಅದು ಒಮ್ಮೆಲೇ ಪಸರಿಸುತ್ತ ಹೋಗಿ ಸುಮಾರು 40 ಕಾರುಗಳು ಧಗಧಗನೆ ಹೊತ್ತಿ ಉರಿದಿವೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಇದನ್ನೂ ಓದಿ: ಒಮಿಕ್ರಾನ್ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ತೀವ್ರವಾಗಿಲ್ಲ, ಈಗಿರುವ ಕೊವಿಡ್ ಲಸಿಕೆಗಳು ಇದಕ್ಕೆ ಸಾಕು: ವಿಶ್ವ ಆರೋಗ್ಯ ಸಂಸ್ಥೆ

Published On - 1:01 pm, Wed, 8 December 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್