AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟನಾ-ದೆಹಲಿ ಸ್ಪೇಸ್​​ಜೆಟ್​​ನಲ್ಲಿ ಬೆಂಕಿ, ಟೇಕ್​​ಆಫ್ ಆದ ತಕ್ಷಣವೇ ತುರ್ತು ಲ್ಯಾಂಡಿಂಗ್

ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. 180 ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನದಲ್ಲಿದ್ದರು. ಯಾವುದೇ ಗಾಯ, ಹಾನಿ ಬಗ್ಗೆ ವರದಿಯಾಗಿಲ್ಲ.

ಪಟನಾ-ದೆಹಲಿ ಸ್ಪೇಸ್​​ಜೆಟ್​​ನಲ್ಲಿ ಬೆಂಕಿ, ಟೇಕ್​​ಆಫ್ ಆದ ತಕ್ಷಣವೇ ತುರ್ತು ಲ್ಯಾಂಡಿಂಗ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 19, 2022 | 1:56 PM

ದೆಹಲಿ: ಭಾನುವಾರ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಪಾಟ್ನಾ-ದೆಹಲಿ ಸ್ಪೈಸ್ ಜೆಟ್ (Patna-Delhi SpiceJet) ವಿಮಾನ ಟೇಕ್ ಆಫ್ ಆದ ತಕ್ಷಣ ಲ್ಯಾಂಡ್ (emergency landing) ಮಾಡಲಾಗಿದೆ. ಲ್ಯಾಂಡಿಂಗ್ ಸುರಕ್ಷಿತವವಾಗಿದೆ. ವರದಿಗಳ ಪ್ರಕಾರ, ವಿಮಾನವು ಪಟನಾದಿಂದ (Patna) ಟೇಕ್ ಆಫ್ ಆದ ಕೂಡಲೇ ವಿಮಾನದ ಎಂಜಿನ್‌ಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. 180 ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನದಲ್ಲಿದ್ದರು. ಯಾವುದೇ ಗಾಯ, ಹಾನಿ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನಾ ಸಂಸೆ ಪ್ರಿಯಾಂಕಾ ಚತುರ್ವೇದಿ, ಇದು ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಎಂದಿದ್ದಾರೆ. ಇದನ್ನು ಸಚಿವರೊಂದಿಗೆ, ವಿಮಾನಯಾನ ಕಾರ್ಯದರ್ಶಿಯೊಂದಿಗೆ ಪದೇ ಪದೇ ಪ್ರಸ್ತಾಪಿಸಲಾಗಿದೆ. ಅವರು ಯಾವಾಗ ಇದರ ಬಗ್ಗೆ ಗಮನಹರಿಸುತ್ತಾರೆ, ಸಂಭವಿಸುವ ದೊಡ್ಡ ಅನಾಹುತವನ್ನು ತಪ್ಪಿಸುತ್ತಾರೆ ಎಂದು ತಿಳಿದಿಲ್ಲ ಎಂದು ಚತುರ್ವೇದಿ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸ್ಪೇಸ್ ಜೆಟ್ ಭದ್ರತೆಗೆ ಸಂಬಂಧಿಸಿದ ಅನೇಕ ಘಟನೆಗಳು ನಡೆದಿವೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ಕಳೆದ ತಿಂಗಳು ತನ್ನ ಬೋಯಿಂಗ್ 737 ಮ್ಯಾಕ್ಸ್ ವಿಮಾನದ ಪೈಲಟ್‌ಗಳಿಗೆ ದೋಷಪೂರಿತ ಸಿಮ್ಯುಲೇಟರ್‌ನಲ್ಲಿ ತರಬೇತಿ ನೀಡಿದ್ದಕ್ಕಾಗಿ ಸ್ಪೈಸ್‌ಜೆಟ್‌ಗೆ ₹10 ಲಕ್ಷ ದಂಡವನ್ನು ವಿಧಿಸಿತ್ತು. ಏಪ್ರಿಲ್‌ನಲ್ಲಿ ಡಿಜಿಸಿಎ 90 ಸ್ಪೈಸ್‌ಜೆಟ್ ಪೈಲಟ್‌ಗಳು ಸರಿಯಾಗಿ ತರಬೇತಿ ಪಡೆದಿಲ್ಲ ಎಂದು ಕಂಡುಹಿಡಿದ ನಂತರ ಮ್ಯಾಕ್ಸ್ ವಿಮಾನವನ್ನು ನಿರ್ವಹಿಸುವುದನ್ನು ನಿರ್ಬಂಧಿಸಿತ್ತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sun, 19 June 22

ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು