AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟನಾ-ದೆಹಲಿ ಸ್ಪೇಸ್​​ಜೆಟ್​​ನಲ್ಲಿ ಬೆಂಕಿ, ಟೇಕ್​​ಆಫ್ ಆದ ತಕ್ಷಣವೇ ತುರ್ತು ಲ್ಯಾಂಡಿಂಗ್

ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. 180 ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನದಲ್ಲಿದ್ದರು. ಯಾವುದೇ ಗಾಯ, ಹಾನಿ ಬಗ್ಗೆ ವರದಿಯಾಗಿಲ್ಲ.

ಪಟನಾ-ದೆಹಲಿ ಸ್ಪೇಸ್​​ಜೆಟ್​​ನಲ್ಲಿ ಬೆಂಕಿ, ಟೇಕ್​​ಆಫ್ ಆದ ತಕ್ಷಣವೇ ತುರ್ತು ಲ್ಯಾಂಡಿಂಗ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 19, 2022 | 1:56 PM

Share

ದೆಹಲಿ: ಭಾನುವಾರ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಪಾಟ್ನಾ-ದೆಹಲಿ ಸ್ಪೈಸ್ ಜೆಟ್ (Patna-Delhi SpiceJet) ವಿಮಾನ ಟೇಕ್ ಆಫ್ ಆದ ತಕ್ಷಣ ಲ್ಯಾಂಡ್ (emergency landing) ಮಾಡಲಾಗಿದೆ. ಲ್ಯಾಂಡಿಂಗ್ ಸುರಕ್ಷಿತವವಾಗಿದೆ. ವರದಿಗಳ ಪ್ರಕಾರ, ವಿಮಾನವು ಪಟನಾದಿಂದ (Patna) ಟೇಕ್ ಆಫ್ ಆದ ಕೂಡಲೇ ವಿಮಾನದ ಎಂಜಿನ್‌ಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. 180 ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನದಲ್ಲಿದ್ದರು. ಯಾವುದೇ ಗಾಯ, ಹಾನಿ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನಾ ಸಂಸೆ ಪ್ರಿಯಾಂಕಾ ಚತುರ್ವೇದಿ, ಇದು ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಎಂದಿದ್ದಾರೆ. ಇದನ್ನು ಸಚಿವರೊಂದಿಗೆ, ವಿಮಾನಯಾನ ಕಾರ್ಯದರ್ಶಿಯೊಂದಿಗೆ ಪದೇ ಪದೇ ಪ್ರಸ್ತಾಪಿಸಲಾಗಿದೆ. ಅವರು ಯಾವಾಗ ಇದರ ಬಗ್ಗೆ ಗಮನಹರಿಸುತ್ತಾರೆ, ಸಂಭವಿಸುವ ದೊಡ್ಡ ಅನಾಹುತವನ್ನು ತಪ್ಪಿಸುತ್ತಾರೆ ಎಂದು ತಿಳಿದಿಲ್ಲ ಎಂದು ಚತುರ್ವೇದಿ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸ್ಪೇಸ್ ಜೆಟ್ ಭದ್ರತೆಗೆ ಸಂಬಂಧಿಸಿದ ಅನೇಕ ಘಟನೆಗಳು ನಡೆದಿವೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ಕಳೆದ ತಿಂಗಳು ತನ್ನ ಬೋಯಿಂಗ್ 737 ಮ್ಯಾಕ್ಸ್ ವಿಮಾನದ ಪೈಲಟ್‌ಗಳಿಗೆ ದೋಷಪೂರಿತ ಸಿಮ್ಯುಲೇಟರ್‌ನಲ್ಲಿ ತರಬೇತಿ ನೀಡಿದ್ದಕ್ಕಾಗಿ ಸ್ಪೈಸ್‌ಜೆಟ್‌ಗೆ ₹10 ಲಕ್ಷ ದಂಡವನ್ನು ವಿಧಿಸಿತ್ತು. ಏಪ್ರಿಲ್‌ನಲ್ಲಿ ಡಿಜಿಸಿಎ 90 ಸ್ಪೈಸ್‌ಜೆಟ್ ಪೈಲಟ್‌ಗಳು ಸರಿಯಾಗಿ ತರಬೇತಿ ಪಡೆದಿಲ್ಲ ಎಂದು ಕಂಡುಹಿಡಿದ ನಂತರ ಮ್ಯಾಕ್ಸ್ ವಿಮಾನವನ್ನು ನಿರ್ವಹಿಸುವುದನ್ನು ನಿರ್ಬಂಧಿಸಿತ್ತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sun, 19 June 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ