AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 10 ಸಾವು, ಹಲವು ಮಂದಿಗೆ ಗಾಯ

ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಳೂರಿನಲ್ಲಿರುವ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು (ಅ.9) ಪಟಾಕಿ ಸ್ಫೋಟಗೊಂಡಿದ್ದು. ಈ ದುರ್ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕಾರ್ಮಿಕರು ಘಟಕದೊಳಗೆ ಕೆಲಸ ಮಾಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ.

ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 10 ಸಾವು, ಹಲವು ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 09, 2023 | 4:00 PM

Share

ಚೆನ್ನೈ, ಅ.10: ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಳೂರಿನಲ್ಲಿರುವ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು (ಅ.9) ಪಟಾಕಿ ಸ್ಫೋಟಗೊಂಡಿದ್ದು. ಈ ದುರ್ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕಾರ್ಮಿಕರು ಘಟಕದೊಳಗೆ ಕೆಲಸ ಮಾಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಸದ್ಯ ಇಬ್ಬರ ಮೃತದೇಹಗಳು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರಿಯಲೂರು ಮತ್ತು ನೆರೆಯ ಪೆರಂಬಲೂರು ಜಿಲ್ಲೆಗಳಿಂದ ಅಗ್ನಿಶಾಮಕ ದಳದ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈಗಾಗಲೇ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಗೋಡೌನ್‌ನಲ್ಲಿ ಪಟಾಕಿ ಇಳಿಸುವ ಸಂದರ್ಭದಲ್ಲಿ ಸಂಭವಿಸಿದ ದೊಡ್ಡ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡ ಎರಡು ದಿನಗಳ ನಂತರ ಈ ಅಪಘಾತ ಸಂಭವಿಸಿದೆ.

ಇದು ತಮಿಳುನಾಡಿನ ಪಟಾಕಿ ಘಟಕದಲ್ಲಿ ನಡೆದ ನಾಲ್ಕನೇ ಸ್ಫೋಟವಾಗಿದೆ. ಜುಲೈನಲ್ಲಿ ಕೃಷ್ಣಗಿರಿ ಜಿಲ್ಲೆಯ ಪಟಾಕಿ ಗೋದಾಮಿನಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದರು. ಸೆಪ್ಟೆಂಬರ್‌ನಲ್ಲಿ ನಾಗಪಟ್ಟಣಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದರು ಮತ್ತು ಮೂವರು ಗಾಯಗೊಂಡಿದ್ದರು.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ 14 ಸಾವು: ಐವರ ವಿರುದ್ಧ ಎಫ್​​ಐಆರ್ ದಾಖಲು

ಕಳೆದ ವಾರವಷ್ಟೇ ಮೈಲಾಡುತುರೈ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Mon, 9 October 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More