AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 10 ಸಾವು, ಹಲವು ಮಂದಿಗೆ ಗಾಯ

ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಳೂರಿನಲ್ಲಿರುವ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು (ಅ.9) ಪಟಾಕಿ ಸ್ಫೋಟಗೊಂಡಿದ್ದು. ಈ ದುರ್ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕಾರ್ಮಿಕರು ಘಟಕದೊಳಗೆ ಕೆಲಸ ಮಾಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ.

ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 10 ಸಾವು, ಹಲವು ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 09, 2023 | 4:00 PM

Share

ಚೆನ್ನೈ, ಅ.10: ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಳೂರಿನಲ್ಲಿರುವ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು (ಅ.9) ಪಟಾಕಿ ಸ್ಫೋಟಗೊಂಡಿದ್ದು. ಈ ದುರ್ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕಾರ್ಮಿಕರು ಘಟಕದೊಳಗೆ ಕೆಲಸ ಮಾಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಸದ್ಯ ಇಬ್ಬರ ಮೃತದೇಹಗಳು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರಿಯಲೂರು ಮತ್ತು ನೆರೆಯ ಪೆರಂಬಲೂರು ಜಿಲ್ಲೆಗಳಿಂದ ಅಗ್ನಿಶಾಮಕ ದಳದ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈಗಾಗಲೇ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಗೋಡೌನ್‌ನಲ್ಲಿ ಪಟಾಕಿ ಇಳಿಸುವ ಸಂದರ್ಭದಲ್ಲಿ ಸಂಭವಿಸಿದ ದೊಡ್ಡ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡ ಎರಡು ದಿನಗಳ ನಂತರ ಈ ಅಪಘಾತ ಸಂಭವಿಸಿದೆ.

ಇದು ತಮಿಳುನಾಡಿನ ಪಟಾಕಿ ಘಟಕದಲ್ಲಿ ನಡೆದ ನಾಲ್ಕನೇ ಸ್ಫೋಟವಾಗಿದೆ. ಜುಲೈನಲ್ಲಿ ಕೃಷ್ಣಗಿರಿ ಜಿಲ್ಲೆಯ ಪಟಾಕಿ ಗೋದಾಮಿನಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದರು. ಸೆಪ್ಟೆಂಬರ್‌ನಲ್ಲಿ ನಾಗಪಟ್ಟಣಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದರು ಮತ್ತು ಮೂವರು ಗಾಯಗೊಂಡಿದ್ದರು.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ 14 ಸಾವು: ಐವರ ವಿರುದ್ಧ ಎಫ್​​ಐಆರ್ ದಾಖಲು

ಕಳೆದ ವಾರವಷ್ಟೇ ಮೈಲಾಡುತುರೈ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Mon, 9 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ