AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಾದುದ್ದೀನ್ ಓವೈಸಿ ಇದ್ದ ಕಾರಿನ ಮೇಲೆ ಗುಂಡಿನ ದಾಳಿ; ಘಟನೆ ಸಂದರ್ಭ ವಿವರಿಸಿದ ಎಐಎಂಐಎಂ ಮುಖ್ಯಸ್ಥ

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ನಡೆದ ದಾಳಿಯನ್ನು ಉತ್ತರ ಪ್ರದೇಶ ಸಚಿವ ಮೋಹ್ಸಿನ್​ ರಾಝಾ ಖಂಡಿಸಿದ್ದಾರೆ. ಇದೊಂದು ತೀವ್ರ ಅಹಿತಕರ ಘಟನೆಯಾಗಿದೆ. ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದ್ದಾರೆ.

ಅಸಾದುದ್ದೀನ್ ಓವೈಸಿ ಇದ್ದ ಕಾರಿನ ಮೇಲೆ ಗುಂಡಿನ ದಾಳಿ; ಘಟನೆ ಸಂದರ್ಭ ವಿವರಿಸಿದ ಎಐಎಂಐಎಂ ಮುಖ್ಯಸ್ಥ
ಕಾರಿಗೆ ಗುಂಡೇಟು ಬಿದ್ದಿರುವುದು
TV9 Web
| Edited By: |

Updated on:Feb 03, 2022 | 6:43 PM

Share

ತಮ್ಮ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೂರು-ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ಆರೋಪಿಸಿದ್ದಾರೆ. ಉತ್ತರಪ್ರದೇಶದ ಮೀರತ್‌ನಲ್ಲಿರುವ ಕಿಥೌರ್​​ನಲ್ಲಿ ಚುನಾವಣೆ ಸಂಬಂಧ ಸಮಾರಂಭವೊಂದರಲ್ಲಿ ಪಾಲ್ಗೊಂಡು ವಾಪಸ್​ ದೆಹಲಿಗೆ ತೆರಳುತ್ತಿದ್ದಾಗ,  ದೆಹಲಿ-ಮೀರತ್ ಎಕ್ಸ್​​ಪ್ರೆಸ್ ವೇನಲ್ಲಿ, ಛಜರ್ಸಿ ಟೋಲ್ ಪ್ಲಾಜಾ ಬಳಿ ಘಟನೆ ನಡೆದಿದೆ ಎಂದು ಓವೈಸಿ ತಿಳಿಸಿದ್ದಾರೆ. 

ನಾನು ಕಿಥೌರ್​​ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಮುಗಿಸಿ ವಾಪಸ್ ಹೋಗುತ್ತಿದ್ದೆ. ಛಜರ್ಸಿ ಟೋಲ್​ ಪ್ಲಾಜಾ ಬಳಿ ಇಬ್ಬರು ಅಪರಿಚಿತರು ನನ್ನ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಿದರು. ಆದರೆ ಅವರು ಒಟ್ಟು 4 ಜನ ಇದ್ದರು. ಗಾಡಿಗೆ ಗುಂಡು ಬಿದ್ದಿದೆ. ಟೈಯರ್​ಗೂ ಗುಂಡು ತಗುಲಿದ ಪರಿಣಾಮ ಅದು ಪಂಕ್ಚರ್ ಆಯಿತು. ಬಳಿಕ ನಾನು ಇನ್ನೊಂದು ವಾಹನದಲ್ಲಿ ದೆಹಲಿಗೆ ಹೋದೆ ಎಂದು ಓವೈಸಿ ವಿವರಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. ಅಸಾದುದ್ದೀನ್ ಓವೈಸಿ ಕೂಡ ಫೋಟೋ ಶೇರ್ ಮಾಡಿಕೊಂಡು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಎರಡು ಗುಂಡುಗಳು ಅವರ ಕಾರಿಗೆ ತಗುಲಿ, ಅಲ್ಲಿ ತೂತು ಆಗಿದೆ. ಹಾಗೇ, ಇನ್ನೆರಡು ಗುಂಡುಗಳು ಟೈಯರ್​ಗೆ ತಗುಲಿದೆ ಎಂದು ಹೇಳಲಾಗಿದೆ.

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ನಡೆದ ದಾಳಿಯನ್ನು ಉತ್ತರ ಪ್ರದೇಶ ಸಚಿವ ಮೋಹ್ಸಿನ್​ ರಾಝಾ ಖಂಡಿಸಿದ್ದಾರೆ. ಇದೊಂದು ತೀವ್ರ ಅಹಿತಕರ ಘಟನೆಯಾಗಿದೆ. ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ. ಹಾಗೇ, ಬಿಜೆಪಿ ವಕ್ತಾರ ಅನಿಲಾ ಸಿಂಗ್ ಕೂಡ ಘಟನೆ ನಿಜಕ್ಕೂ ಶಾಕಿಂಗ್ ಆಗಿದೆ ಎಂದಿದ್ದಾರೆ. ಈ ದಾಳಿ ನಡೆಸಿದವರನ್ನು ಜೈಲಿಗೆ ಕಳಿಸದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಫೆ.10ರಿಂದ ಉತ್ತರಪ್ರದೇಶ ಚುನಾವಣೆ ನಿಮಿತ್ತ ಅವರು ಇಂದು ಮೀರತ್​ಗೆ ಪ್ರಚಾರಕ್ಕೆ ತೆರಳಿ, ಅಲ್ಲಿ ಸಾರ್ವಜನಿಕ ಸಭೆ ನಡೆಸಿದ್ದಾರೆ.

ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಹೊರಗೆ ‘ಪುಷ್ಪ’ ಘೋಷಣೆ; ಅಲ್ಲು ಅರ್ಜುನ್​ ನೋಡೋಕೆ ಅಭಿಮಾನಿಗಳ ದಂಡು

Published On - 6:34 pm, Thu, 3 February 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?