AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಾದುದ್ದೀನ್ ಓವೈಸಿ ಇದ್ದ ಕಾರಿನ ಮೇಲೆ ಗುಂಡಿನ ದಾಳಿ; ಘಟನೆ ಸಂದರ್ಭ ವಿವರಿಸಿದ ಎಐಎಂಐಎಂ ಮುಖ್ಯಸ್ಥ

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ನಡೆದ ದಾಳಿಯನ್ನು ಉತ್ತರ ಪ್ರದೇಶ ಸಚಿವ ಮೋಹ್ಸಿನ್​ ರಾಝಾ ಖಂಡಿಸಿದ್ದಾರೆ. ಇದೊಂದು ತೀವ್ರ ಅಹಿತಕರ ಘಟನೆಯಾಗಿದೆ. ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದ್ದಾರೆ.

ಅಸಾದುದ್ದೀನ್ ಓವೈಸಿ ಇದ್ದ ಕಾರಿನ ಮೇಲೆ ಗುಂಡಿನ ದಾಳಿ; ಘಟನೆ ಸಂದರ್ಭ ವಿವರಿಸಿದ ಎಐಎಂಐಎಂ ಮುಖ್ಯಸ್ಥ
ಕಾರಿಗೆ ಗುಂಡೇಟು ಬಿದ್ದಿರುವುದು
TV9 Web
| Updated By: Lakshmi Hegde|

Updated on:Feb 03, 2022 | 6:43 PM

Share

ತಮ್ಮ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೂರು-ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ಆರೋಪಿಸಿದ್ದಾರೆ. ಉತ್ತರಪ್ರದೇಶದ ಮೀರತ್‌ನಲ್ಲಿರುವ ಕಿಥೌರ್​​ನಲ್ಲಿ ಚುನಾವಣೆ ಸಂಬಂಧ ಸಮಾರಂಭವೊಂದರಲ್ಲಿ ಪಾಲ್ಗೊಂಡು ವಾಪಸ್​ ದೆಹಲಿಗೆ ತೆರಳುತ್ತಿದ್ದಾಗ,  ದೆಹಲಿ-ಮೀರತ್ ಎಕ್ಸ್​​ಪ್ರೆಸ್ ವೇನಲ್ಲಿ, ಛಜರ್ಸಿ ಟೋಲ್ ಪ್ಲಾಜಾ ಬಳಿ ಘಟನೆ ನಡೆದಿದೆ ಎಂದು ಓವೈಸಿ ತಿಳಿಸಿದ್ದಾರೆ. 

ನಾನು ಕಿಥೌರ್​​ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಮುಗಿಸಿ ವಾಪಸ್ ಹೋಗುತ್ತಿದ್ದೆ. ಛಜರ್ಸಿ ಟೋಲ್​ ಪ್ಲಾಜಾ ಬಳಿ ಇಬ್ಬರು ಅಪರಿಚಿತರು ನನ್ನ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಿದರು. ಆದರೆ ಅವರು ಒಟ್ಟು 4 ಜನ ಇದ್ದರು. ಗಾಡಿಗೆ ಗುಂಡು ಬಿದ್ದಿದೆ. ಟೈಯರ್​ಗೂ ಗುಂಡು ತಗುಲಿದ ಪರಿಣಾಮ ಅದು ಪಂಕ್ಚರ್ ಆಯಿತು. ಬಳಿಕ ನಾನು ಇನ್ನೊಂದು ವಾಹನದಲ್ಲಿ ದೆಹಲಿಗೆ ಹೋದೆ ಎಂದು ಓವೈಸಿ ವಿವರಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. ಅಸಾದುದ್ದೀನ್ ಓವೈಸಿ ಕೂಡ ಫೋಟೋ ಶೇರ್ ಮಾಡಿಕೊಂಡು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಎರಡು ಗುಂಡುಗಳು ಅವರ ಕಾರಿಗೆ ತಗುಲಿ, ಅಲ್ಲಿ ತೂತು ಆಗಿದೆ. ಹಾಗೇ, ಇನ್ನೆರಡು ಗುಂಡುಗಳು ಟೈಯರ್​ಗೆ ತಗುಲಿದೆ ಎಂದು ಹೇಳಲಾಗಿದೆ.

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ನಡೆದ ದಾಳಿಯನ್ನು ಉತ್ತರ ಪ್ರದೇಶ ಸಚಿವ ಮೋಹ್ಸಿನ್​ ರಾಝಾ ಖಂಡಿಸಿದ್ದಾರೆ. ಇದೊಂದು ತೀವ್ರ ಅಹಿತಕರ ಘಟನೆಯಾಗಿದೆ. ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ. ಹಾಗೇ, ಬಿಜೆಪಿ ವಕ್ತಾರ ಅನಿಲಾ ಸಿಂಗ್ ಕೂಡ ಘಟನೆ ನಿಜಕ್ಕೂ ಶಾಕಿಂಗ್ ಆಗಿದೆ ಎಂದಿದ್ದಾರೆ. ಈ ದಾಳಿ ನಡೆಸಿದವರನ್ನು ಜೈಲಿಗೆ ಕಳಿಸದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಫೆ.10ರಿಂದ ಉತ್ತರಪ್ರದೇಶ ಚುನಾವಣೆ ನಿಮಿತ್ತ ಅವರು ಇಂದು ಮೀರತ್​ಗೆ ಪ್ರಚಾರಕ್ಕೆ ತೆರಳಿ, ಅಲ್ಲಿ ಸಾರ್ವಜನಿಕ ಸಭೆ ನಡೆಸಿದ್ದಾರೆ.

ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಹೊರಗೆ ‘ಪುಷ್ಪ’ ಘೋಷಣೆ; ಅಲ್ಲು ಅರ್ಜುನ್​ ನೋಡೋಕೆ ಅಭಿಮಾನಿಗಳ ದಂಡು

Published On - 6:34 pm, Thu, 3 February 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ