AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಾದುದ್ದೀನ್ ಓವೈಸಿ ಇದ್ದ ಕಾರಿನ ಮೇಲೆ ಗುಂಡಿನ ದಾಳಿ; ಘಟನೆ ಸಂದರ್ಭ ವಿವರಿಸಿದ ಎಐಎಂಐಎಂ ಮುಖ್ಯಸ್ಥ

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ನಡೆದ ದಾಳಿಯನ್ನು ಉತ್ತರ ಪ್ರದೇಶ ಸಚಿವ ಮೋಹ್ಸಿನ್​ ರಾಝಾ ಖಂಡಿಸಿದ್ದಾರೆ. ಇದೊಂದು ತೀವ್ರ ಅಹಿತಕರ ಘಟನೆಯಾಗಿದೆ. ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದ್ದಾರೆ.

ಅಸಾದುದ್ದೀನ್ ಓವೈಸಿ ಇದ್ದ ಕಾರಿನ ಮೇಲೆ ಗುಂಡಿನ ದಾಳಿ; ಘಟನೆ ಸಂದರ್ಭ ವಿವರಿಸಿದ ಎಐಎಂಐಎಂ ಮುಖ್ಯಸ್ಥ
ಕಾರಿಗೆ ಗುಂಡೇಟು ಬಿದ್ದಿರುವುದು
TV9 Web
| Edited By: |

Updated on:Feb 03, 2022 | 6:43 PM

Share

ತಮ್ಮ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೂರು-ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ಆರೋಪಿಸಿದ್ದಾರೆ. ಉತ್ತರಪ್ರದೇಶದ ಮೀರತ್‌ನಲ್ಲಿರುವ ಕಿಥೌರ್​​ನಲ್ಲಿ ಚುನಾವಣೆ ಸಂಬಂಧ ಸಮಾರಂಭವೊಂದರಲ್ಲಿ ಪಾಲ್ಗೊಂಡು ವಾಪಸ್​ ದೆಹಲಿಗೆ ತೆರಳುತ್ತಿದ್ದಾಗ,  ದೆಹಲಿ-ಮೀರತ್ ಎಕ್ಸ್​​ಪ್ರೆಸ್ ವೇನಲ್ಲಿ, ಛಜರ್ಸಿ ಟೋಲ್ ಪ್ಲಾಜಾ ಬಳಿ ಘಟನೆ ನಡೆದಿದೆ ಎಂದು ಓವೈಸಿ ತಿಳಿಸಿದ್ದಾರೆ. 

ನಾನು ಕಿಥೌರ್​​ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಮುಗಿಸಿ ವಾಪಸ್ ಹೋಗುತ್ತಿದ್ದೆ. ಛಜರ್ಸಿ ಟೋಲ್​ ಪ್ಲಾಜಾ ಬಳಿ ಇಬ್ಬರು ಅಪರಿಚಿತರು ನನ್ನ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಿದರು. ಆದರೆ ಅವರು ಒಟ್ಟು 4 ಜನ ಇದ್ದರು. ಗಾಡಿಗೆ ಗುಂಡು ಬಿದ್ದಿದೆ. ಟೈಯರ್​ಗೂ ಗುಂಡು ತಗುಲಿದ ಪರಿಣಾಮ ಅದು ಪಂಕ್ಚರ್ ಆಯಿತು. ಬಳಿಕ ನಾನು ಇನ್ನೊಂದು ವಾಹನದಲ್ಲಿ ದೆಹಲಿಗೆ ಹೋದೆ ಎಂದು ಓವೈಸಿ ವಿವರಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. ಅಸಾದುದ್ದೀನ್ ಓವೈಸಿ ಕೂಡ ಫೋಟೋ ಶೇರ್ ಮಾಡಿಕೊಂಡು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಎರಡು ಗುಂಡುಗಳು ಅವರ ಕಾರಿಗೆ ತಗುಲಿ, ಅಲ್ಲಿ ತೂತು ಆಗಿದೆ. ಹಾಗೇ, ಇನ್ನೆರಡು ಗುಂಡುಗಳು ಟೈಯರ್​ಗೆ ತಗುಲಿದೆ ಎಂದು ಹೇಳಲಾಗಿದೆ.

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ನಡೆದ ದಾಳಿಯನ್ನು ಉತ್ತರ ಪ್ರದೇಶ ಸಚಿವ ಮೋಹ್ಸಿನ್​ ರಾಝಾ ಖಂಡಿಸಿದ್ದಾರೆ. ಇದೊಂದು ತೀವ್ರ ಅಹಿತಕರ ಘಟನೆಯಾಗಿದೆ. ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ. ಹಾಗೇ, ಬಿಜೆಪಿ ವಕ್ತಾರ ಅನಿಲಾ ಸಿಂಗ್ ಕೂಡ ಘಟನೆ ನಿಜಕ್ಕೂ ಶಾಕಿಂಗ್ ಆಗಿದೆ ಎಂದಿದ್ದಾರೆ. ಈ ದಾಳಿ ನಡೆಸಿದವರನ್ನು ಜೈಲಿಗೆ ಕಳಿಸದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಫೆ.10ರಿಂದ ಉತ್ತರಪ್ರದೇಶ ಚುನಾವಣೆ ನಿಮಿತ್ತ ಅವರು ಇಂದು ಮೀರತ್​ಗೆ ಪ್ರಚಾರಕ್ಕೆ ತೆರಳಿ, ಅಲ್ಲಿ ಸಾರ್ವಜನಿಕ ಸಭೆ ನಡೆಸಿದ್ದಾರೆ.

ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಹೊರಗೆ ‘ಪುಷ್ಪ’ ಘೋಷಣೆ; ಅಲ್ಲು ಅರ್ಜುನ್​ ನೋಡೋಕೆ ಅಭಿಮಾನಿಗಳ ದಂಡು

Published On - 6:34 pm, Thu, 3 February 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ