AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಾದುದ್ದೀನ್ ಓವೈಸಿ ಇದ್ದ ಕಾರಿನ ಮೇಲೆ ಗುಂಡಿನ ದಾಳಿ; ಘಟನೆ ಸಂದರ್ಭ ವಿವರಿಸಿದ ಎಐಎಂಐಎಂ ಮುಖ್ಯಸ್ಥ

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ನಡೆದ ದಾಳಿಯನ್ನು ಉತ್ತರ ಪ್ರದೇಶ ಸಚಿವ ಮೋಹ್ಸಿನ್​ ರಾಝಾ ಖಂಡಿಸಿದ್ದಾರೆ. ಇದೊಂದು ತೀವ್ರ ಅಹಿತಕರ ಘಟನೆಯಾಗಿದೆ. ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದ್ದಾರೆ.

ಅಸಾದುದ್ದೀನ್ ಓವೈಸಿ ಇದ್ದ ಕಾರಿನ ಮೇಲೆ ಗುಂಡಿನ ದಾಳಿ; ಘಟನೆ ಸಂದರ್ಭ ವಿವರಿಸಿದ ಎಐಎಂಐಎಂ ಮುಖ್ಯಸ್ಥ
ಕಾರಿಗೆ ಗುಂಡೇಟು ಬಿದ್ದಿರುವುದು
TV9 Web
| Edited By: |

Updated on:Feb 03, 2022 | 6:43 PM

Share

ತಮ್ಮ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೂರು-ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (AIMIM chief Asaduddin Owaisi) ಆರೋಪಿಸಿದ್ದಾರೆ. ಉತ್ತರಪ್ರದೇಶದ ಮೀರತ್‌ನಲ್ಲಿರುವ ಕಿಥೌರ್​​ನಲ್ಲಿ ಚುನಾವಣೆ ಸಂಬಂಧ ಸಮಾರಂಭವೊಂದರಲ್ಲಿ ಪಾಲ್ಗೊಂಡು ವಾಪಸ್​ ದೆಹಲಿಗೆ ತೆರಳುತ್ತಿದ್ದಾಗ,  ದೆಹಲಿ-ಮೀರತ್ ಎಕ್ಸ್​​ಪ್ರೆಸ್ ವೇನಲ್ಲಿ, ಛಜರ್ಸಿ ಟೋಲ್ ಪ್ಲಾಜಾ ಬಳಿ ಘಟನೆ ನಡೆದಿದೆ ಎಂದು ಓವೈಸಿ ತಿಳಿಸಿದ್ದಾರೆ. 

ನಾನು ಕಿಥೌರ್​​ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಮುಗಿಸಿ ವಾಪಸ್ ಹೋಗುತ್ತಿದ್ದೆ. ಛಜರ್ಸಿ ಟೋಲ್​ ಪ್ಲಾಜಾ ಬಳಿ ಇಬ್ಬರು ಅಪರಿಚಿತರು ನನ್ನ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಿದರು. ಆದರೆ ಅವರು ಒಟ್ಟು 4 ಜನ ಇದ್ದರು. ಗಾಡಿಗೆ ಗುಂಡು ಬಿದ್ದಿದೆ. ಟೈಯರ್​ಗೂ ಗುಂಡು ತಗುಲಿದ ಪರಿಣಾಮ ಅದು ಪಂಕ್ಚರ್ ಆಯಿತು. ಬಳಿಕ ನಾನು ಇನ್ನೊಂದು ವಾಹನದಲ್ಲಿ ದೆಹಲಿಗೆ ಹೋದೆ ಎಂದು ಓವೈಸಿ ವಿವರಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. ಅಸಾದುದ್ದೀನ್ ಓವೈಸಿ ಕೂಡ ಫೋಟೋ ಶೇರ್ ಮಾಡಿಕೊಂಡು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಎರಡು ಗುಂಡುಗಳು ಅವರ ಕಾರಿಗೆ ತಗುಲಿ, ಅಲ್ಲಿ ತೂತು ಆಗಿದೆ. ಹಾಗೇ, ಇನ್ನೆರಡು ಗುಂಡುಗಳು ಟೈಯರ್​ಗೆ ತಗುಲಿದೆ ಎಂದು ಹೇಳಲಾಗಿದೆ.

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ನಡೆದ ದಾಳಿಯನ್ನು ಉತ್ತರ ಪ್ರದೇಶ ಸಚಿವ ಮೋಹ್ಸಿನ್​ ರಾಝಾ ಖಂಡಿಸಿದ್ದಾರೆ. ಇದೊಂದು ತೀವ್ರ ಅಹಿತಕರ ಘಟನೆಯಾಗಿದೆ. ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ. ಹಾಗೇ, ಬಿಜೆಪಿ ವಕ್ತಾರ ಅನಿಲಾ ಸಿಂಗ್ ಕೂಡ ಘಟನೆ ನಿಜಕ್ಕೂ ಶಾಕಿಂಗ್ ಆಗಿದೆ ಎಂದಿದ್ದಾರೆ. ಈ ದಾಳಿ ನಡೆಸಿದವರನ್ನು ಜೈಲಿಗೆ ಕಳಿಸದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಫೆ.10ರಿಂದ ಉತ್ತರಪ್ರದೇಶ ಚುನಾವಣೆ ನಿಮಿತ್ತ ಅವರು ಇಂದು ಮೀರತ್​ಗೆ ಪ್ರಚಾರಕ್ಕೆ ತೆರಳಿ, ಅಲ್ಲಿ ಸಾರ್ವಜನಿಕ ಸಭೆ ನಡೆಸಿದ್ದಾರೆ.

ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಹೊರಗೆ ‘ಪುಷ್ಪ’ ಘೋಷಣೆ; ಅಲ್ಲು ಅರ್ಜುನ್​ ನೋಡೋಕೆ ಅಭಿಮಾನಿಗಳ ದಂಡು

Published On - 6:34 pm, Thu, 3 February 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ