AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದಿಷ್ಟ ಧರ್ಮದ ವಿರುದ್ಧ ಅಸಾದುದ್ದೀನ್ ಓವೈಸಿ ಹೇಳಿಕೆಯಿಂದ ನೋವಾಗಿದೆ: ಗುಂಡಿನ ದಾಳಿ ಪ್ರಕರಣದ ಆರೋಪಿ

Asaduddin Owaisi ಪೊಲೀಸರ ಪ್ರಕಾರ ಓವೈಸಿ ಮತ್ತು ಅವರ ಸಹೋದರ ಮತ್ತು ಶಾಸಕ ಅಕ್ಬರುದ್ದೀನ್ ಓವೈಸಿ ಮಾಡಿದ ಹೇಳಿಕೆಗಳಿಂದ ತಾವು ಅಸಮಾಧಾನಗೊಂಡಿದ್ದೇವೆ ಎಂದು ಇಬ್ಬರು ವಿಚಾರಣೆಯ ಸಮಯದಲ್ಲಿ ಹೇಳಿದ್ದಾರೆ.

ನಿರ್ದಿಷ್ಟ ಧರ್ಮದ ವಿರುದ್ಧ ಅಸಾದುದ್ದೀನ್ ಓವೈಸಿ ಹೇಳಿಕೆಯಿಂದ ನೋವಾಗಿದೆ: ಗುಂಡಿನ ದಾಳಿ ಪ್ರಕರಣದ ಆರೋಪಿ
ಅಸಾದುದ್ದೀನ್ ಓವೈಸಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Feb 04, 2022 | 5:18 PM

Share

ದೆಹಲಿ: ಉತ್ತರ ಪ್ರದೇಶದ (Uttar Pradesh) ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ಗುರುವಾರ ದೆಹಲಿಗೆ ವಾಪಸಾಗುತ್ತಿದ್ದ ವೇಳೆ ಸಂಸದ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಅವರ ಬೆಂಗಾವಲು ಪಡೆ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ ಒವೈಸಿಯ ಬೆಂಗಾವಲು ಪಡೆ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿಯೊಬ್ಬ “ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಟೀಕೆಗಳಿಂದ” ತಮಗೆ ನೋವಾಗಿದೆ ಎಂದು ವಿಚಾರಣೆಯ ಸಮಯದಲ್ಲಿ ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ಓವೈಸಿ ಕಳೆದ ರಾತ್ರಿ ತಮ್ಮ ಬಿಳಿ ಎಸ್ ಯುವಿನನಲ್ಲಿ ಎರಡು ಬುಲೆಟ್ ರಂಧ್ರಗಳನ್ನು ತೋರಿಸುವ ದೃಶ್ಯಗಳನ್ನು ಟ್ವೀಟ್ ಮಾಡಿದ್ದಾರೆ. ಮೂರನೇ ಬುಲೆಟ್ ಟೈರ್‌ಗೆ ತಗುಲಿದೆ ಎನ್ನಲಾಗಿದೆ. ನನಗೆ ಯಾವುದೇ ಹಾನಿಯಾಗಿಲ್ಲ ಎಂದು ಹೇಳಿದ ಸಂಸದರು ಮತ್ತು ಇನ್ನೊಂದು ಕಾರಿನಲ್ಲಿ ಅಲ್ಲಿಂದ ಹೊರಟು ಹೋಗಿದ್ದರು.  ಆರೋಪಿಗಳಲ್ಲಿ ಒಬ್ಬನಾದ ಸಚಿನ್ ನೋಯ್ಡಾ ನಿವಾಸಿಯಾಗಿದ್ದು, ಈತನ ವಿರುದ್ಧ ಈ ಹಿಂದೆ ಕೊಲೆ ಯತ್ನ ಪ್ರಕರಣವಿದೆ. ತಾನು ಕಾನೂನು ಪದವಿ ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದು, ಪೊಲೀಸರು ಅದನ್ನು ಪರಿಶೀಲಿಸುತ್ತಿದ್ದಾರೆ. ತನ್ನ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ, ಸಚಿನ್ ತಾನು ಹಿಂದೂ ಬಲಪಂಥೀಯ ಸಂಘಟನೆಯ ಸದಸ್ಯ ಎಂದು ಹೇಳಿದ್ದಾನೆ. ಈ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಇನ್ನೊಬ್ಬ ಆರೋಪಿ ಸಹಾರನ್‌ಪುರದ ರೈತ ಶುಭಂ, ಯಾವುದೇ ಅಪರಾಧ ದಾಖಲೆ ಹೊಂದಿಲ್ಲ. ಪೊಲೀಸರ ಪ್ರಕಾರ ಓವೈಸಿ ಮತ್ತು ಅವರ ಸಹೋದರ ಮತ್ತು ಶಾಸಕ ಅಕ್ಬರುದ್ದೀನ್ ಓವೈಸಿ ಮಾಡಿದ ಹೇಳಿಕೆಗಳಿಂದ ತಾವು ಅಸಮಾಧಾನಗೊಂಡಿದ್ದೇವೆ ಎಂದು ಇಬ್ಬರು ವಿಚಾರಣೆಯ ಸಮಯದಲ್ಲಿ ಹೇಳಿದ್ದಾರೆ. “ನಿರ್ದಿಷ್ಟ ಧರ್ಮದ ವಿರುದ್ಧ (ಅಸಾದುದ್ದೀನ್ ಓವೈಸಿ) ಹೇಳಿಕೆಯಿಂದ ತಮಗೆ ನೋವಾಗಿದೆ ಎಂದು ಆರೋಪಿಗಳು ಹೇಳಿದ್ದಾರೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು” ಎಂದು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

ಇವರಿಂದ ಇತ್ತೀಚೆಗೆ ಖರೀದಿಸಿದ್ದ ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೀಗ ಬಂದೂಕು ಖರೀದಿಸಿದವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯನ್ನು ಈಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗಳಿಬ್ಬರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಉತ್ತರಪ್ರದೇಶದ ಹಾಪುರ್ ಎಸ್‌ಪಿ ದೀಪಕ್ ಭುಕರ್ ಹೇಳಿದ್ದಾರೆ.

ಕಳೆದ ರಾತ್ರಿಯ ದಾಳಿ ನಂತರ ಸರ್ಕಾರವು ಓವೈಸಿ ಅವರಿಗೆ ಇಂದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯಿಂದ Z ವರ್ಗದ ಭದ್ರತೆಯನ್ನು ಒದಗಿಸಲಾಗಿದೆ.

ಇದನ್ನೂ ಓದಿ: UP Election 2022: ಗೋರಖ್‌ಪುರದಿಂದ ನಾಮಪತ್ರ ಸಲ್ಲಿಸಿದ ಯೋಗಿ ಆದಿತ್ಯನಾಥ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ