AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam-Meghalaya: ಅಸ್ಸಾಂ-ಮೇಘಾಲಯ ಗಡಿಯಲ್ಲಿ ಗುಂಡಿನ ದಾಳಿ, 6 ಮಂದಿ ಸಾವು, 7 ಜಿಲ್ಲೆಗಳಲ್ಲಿ ಇಂಟರ್ನೆಟ್ ಕಡಿತ

ಪಶ್ಚಿಮ ಜೈನ್ತಿಯಾ ಹಿಲ್ಸ್‌ನ ಮುಕ್ರೋಹ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅಸ್ಸಾಂ ಅರಣ್ಯ ಅಧಿಕಾರಿ ಸೇರಿದಂತೆ ಆರು ಜನರು ಸಾವನ್ನಪ್ಪಿದ ನಂತರ ಮೇಘಾಲಯವು ರಾಜ್ಯದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ.

Assam-Meghalaya: ಅಸ್ಸಾಂ-ಮೇಘಾಲಯ ಗಡಿಯಲ್ಲಿ ಗುಂಡಿನ ದಾಳಿ, 6 ಮಂದಿ ಸಾವು, 7 ಜಿಲ್ಲೆಗಳಲ್ಲಿ ಇಂಟರ್ನೆಟ್ ಕಡಿತ
Firing on Assam-Meghalaya border
TV9 Web
| Edited By: |

Updated on:Nov 22, 2022 | 4:21 PM

Share

ಶಿಲ್ಲಾಂಗ್ : ಪಶ್ಚಿಮ ಜೈನ್ತಿಯಾ ಹಿಲ್ಸ್‌ನ ಮುಕ್ರೋಹ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅಸ್ಸಾಂ ಅರಣ್ಯ ಅಧಿಕಾರಿ ಸೇರಿದಂತೆ ಆರು ಜನರು ಸಾವನ್ನಪ್ಪಿದ ನಂತರ ಮೇಘಾಲಯವು ರಾಜ್ಯದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ. ಇಂದು ಬೆಳಗ್ಗೆ 10:30 ರಿಂದ ಮೇಘಾಲಯದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್/ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೇಘಾಲಯ ಸರ್ಕಾರದ ಗೃಹ (ಪೊಲೀಸ್) ಇಲಾಖೆ ಹೊರಡಿಸಿದ ಅಧಿಸೂಚನೆ ತಿಳಿಸಿದೆ. ಘಟನೆಯಲ್ಲಿ ಮೇಘಾಲಯದ ಐವರು ಮತ್ತು ಒಬ್ಬ ಅಸ್ಸಾಂ ಫಾರೆಸ್ಟ್ ಗಾರ್ಡ್ ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಇಂದು ಖಚಿತಪಡಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಮೇಘಾಲಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು. ಮೇಘಾಲಯ ಸರ್ಕಾರವು ಇಂದು ಹೊರಡಿಸಿದ ಅಧಿಸೂಚನೆಯಲ್ಲಿ ಪೊಲೀಸ್ ಪ್ರಧಾನ ಕಚೇರಿ, ಮೇಘಾಲಯ, ಶಿಲ್ಲಾಂಗ್‌ನಿಂದ ವರದಿಗಳು ಬಂದಿವೆ, ಮುಕ್ರೋಹ್, ಪಶ್ಚಿಮ ಜೈನ್ತಿಯಾ ಹಿಲ್ಸ್, ಜೊವಾಯ್‌ನಲ್ಲಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗವುಂಟು ಮಾಡುವ ಸಾಧ್ಯತೆಯಿದೆ ಎಂದು ಅಗತ್ಯ ಕ್ರಮ ಕೈಗೊಳ್ಳುಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಅಹಿತರ ಘಟನೆಯಿಂದ ಪಶ್ಚಿಮ ಜೈನ್ತಿಯಾ ಹಿಲ್ಸ್, ಈಸ್ಟ್ ಜೈನ್ತಿಯಾ ಹಿಲ್ಸ್, ಈಸ್ಟ್ ಖಾಸಿ ಹಿಲ್ಸ್, ರಿ-ಭೋಯ್, ಈಸ್ಟರ್ನ್ ವೆಸ್ಟ್ ಖಾಸಿ ಹಿಲ್ಸ್, ವೆಸ್ಟ್ ಖಾಸಿ ಹಿಲ್ಸ್ ಮತ್ತು ನೈಋತ್ಯ ಖಾಸಿ ಹಿಲ್ಸ್‌ಗಳಲ್ಲಿ ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುತ್ತದೆ, ಇದು ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಬಹುದು ಎಂದು ತಿಳಿಸಿದೆ.

ಇದನ್ನು ಓದಿ : ಪಶ್ಚಿಮ ಕರ್ಬಿ ಆಂಗ್ಲಾಂಗ್‌ನಿಂದ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಹಿಂಪಡೆದ ಅಸ್ಸಾಂ ಸರ್ಕಾರ

ಮೇಘಾಲಯ ರಾಜ್ಯದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮಾಧ್ಯಮಗಳ (WhatsApp ಮತ್ತು Facebook Twitter, YouTube ಇತ್ಯಾದಿ ಸಾಮಾಜಿಕ ಮಾಧ್ಯಮ) ದುರ್ಬಳಕೆಯನ್ನು ತಡೆಗಟ್ಟುವ ಸಲುವಾಗಿ, CVD Diengdoh, ಗೃಹ (ಪೊಲೀಸ್) ಇಲಾಖೆಯ ಕಾರ್ಯದರ್ಶಿ, ಮೇಘಾಲಯದಲ್ಲಿ ಮೊಬೈಲ್ ಇಂಟರ್ನೆಟ್/ಡೇಟಾ ಸೇವೆಗಳನ್ನು ಸ್ಥಗಿತಗೊಳಿಸುವ ಅಧಿಸೂಚನೆಯನ್ನು ಪ್ರಕಟಿಸಿದೆ.

ಟೆಲಿಕಾಂ ಮತ್ತು ಸಾಮಾಜಿಕ ಮಾಧ್ಯಮ ಸೇವೆಗಳನ್ನು ಮೇಘಾಲಯದ ಜಿಲ್ಲೆಗಳಾದ ವೆಸ್ಟ್ ಜೈನ್ತಿಯಾ ಹಿಲ್ಸ್, ಈಸ್ಟ್ ಜೈನ್ತಿಯಾ ಹಿಲ್ಸ್, ಈಸ್ಟ್ ಖಾಸಿ ಹಿಲ್ಸ್, ರಿ-ಭೋಯ್, ಈಸ್ಟರ್ನ್ ವೆಸ್ಟ್ ಖಾಸಿ ಹಿಲ್ಸ್, ವೆಸ್ಟ್ ಖಾಸಿ ಹಿಲ್ಸ್ ಮತ್ತು ನೈಋತ್ಯ ಖಾಸಿ ಹಿಲ್ಸ್ ಜಿಲ್ಲೆಗಳಲ್ಲಿ ಕಡಿತಗೊಳಿಸಲಾಗಿದೆ. ಪ್ರಕಟಣೆಯನ್ನು ಉಲ್ಲಂಘಿಸುವವರಿಗೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 188 ರ ಅಡಿಯಲ್ಲಿ ಮತ್ತು ಭಾರತೀಯ ಟೆಲಿಗ್ರಾಫ್ ಆಕ್ಟ್, 1885 ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ದಂಡ ವಿಧಿಸಲಾಗುವುದು ಎಂದು ಅಧಿಸೂಚನೆಯು ಪುನರಾವರ್ತನೆಯಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Tue, 22 November 22

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು