AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ತ್ಯಾಜ್ಯ ದಹನ: 121 ರೈತರಿಗೆ 3 ಲಕ್ಷ ದಂಡ, 59 ರೈತರ ವಿರುದ್ಧ FIR, ಯಾವೂರಲ್ಲಿ?

ಚಂಡೀಗಢ: ಕೃಷಿ ತ್ಯಾಜ್ಯ ದಹನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 121 ರೈತರು ಬರೋಬ್ಬರಿ 3 ಲಕ್ಷ ರೂಪಾಯಿ ದಂಡ ತೆರಬೇಕಾದ ಪರಿಸ್ಥಿತಿ ಪಂಜಾಬ್​ನ ಮೊಹಾಲಿಯಲ್ಲಿ ಬೆಳಕಿಗೆ ಬಂದಿದೆ. ಬೆಳೆ ಕಟಾವಿನ ನಂತರ ಉಳಿದ ತ್ಯಾಜ್ಯವನ್ನು ಈ ರೈತರು ಸುಟ್ಟುಹಾಕಿದ್ದರು. ಇದರಿಂದ, ಪಂಜಾಬ್​ ಸೇರಿದಂತೆ ನೆರೆಯ ದೆಹಲಿಯಲ್ಲೂ ಸಹ ಬಹಳಷ್ಟು ವಾಯುಮಾಲಿನ್ಯ ಉಂಟಾಗಿದೆ. ಜಿಲ್ಲಾಡಳಿತ ಈ ಹಿಂದೆ, ರೈತರಿಗೆ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚದಂತೆ ಎಚ್ಚರಿಕೆ ಸಹ ನೀಡಿತ್ತು ಎಂದು ತಿಳಿದುಬಂದಿದೆ. ಆದರೂ, ರೈತರು ಕೃಷಿ ತ್ಯಾಜ್ಯ ದಹನಕ್ಕೆ ಮುಂದಾದ […]

ಕೃಷಿ ತ್ಯಾಜ್ಯ ದಹನ: 121 ರೈತರಿಗೆ 3 ಲಕ್ಷ ದಂಡ, 59 ರೈತರ ವಿರುದ್ಧ FIR, ಯಾವೂರಲ್ಲಿ?
KUSHAL V
|

Updated on: Nov 15, 2020 | 12:44 PM

Share

ಚಂಡೀಗಢ: ಕೃಷಿ ತ್ಯಾಜ್ಯ ದಹನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 121 ರೈತರು ಬರೋಬ್ಬರಿ 3 ಲಕ್ಷ ರೂಪಾಯಿ ದಂಡ ತೆರಬೇಕಾದ ಪರಿಸ್ಥಿತಿ ಪಂಜಾಬ್​ನ ಮೊಹಾಲಿಯಲ್ಲಿ ಬೆಳಕಿಗೆ ಬಂದಿದೆ. ಬೆಳೆ ಕಟಾವಿನ ನಂತರ ಉಳಿದ ತ್ಯಾಜ್ಯವನ್ನು ಈ ರೈತರು ಸುಟ್ಟುಹಾಕಿದ್ದರು. ಇದರಿಂದ, ಪಂಜಾಬ್​ ಸೇರಿದಂತೆ ನೆರೆಯ ದೆಹಲಿಯಲ್ಲೂ ಸಹ ಬಹಳಷ್ಟು ವಾಯುಮಾಲಿನ್ಯ ಉಂಟಾಗಿದೆ. ಜಿಲ್ಲಾಡಳಿತ ಈ ಹಿಂದೆ, ರೈತರಿಗೆ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚದಂತೆ ಎಚ್ಚರಿಕೆ ಸಹ ನೀಡಿತ್ತು ಎಂದು ತಿಳಿದುಬಂದಿದೆ. ಆದರೂ, ರೈತರು ಕೃಷಿ ತ್ಯಾಜ್ಯ ದಹನಕ್ಕೆ ಮುಂದಾದ ಹಿನ್ನೆಲೆಯಲ್ಲಿ ಅವರಿಗೆ ದಂಡ ವಿಧಿಸಲಾಗಿದೆ.

ವಾಯುಮಾಲಿನ್ಯಕ್ಕೆ ಉತ್ತೇಜನೆ ನೀಡಿರುವ ಆರೋಪದಡಿ 59 ರೈತರ ವಿರುದ್ಧ FIRದಾಖಲಿಸಲಾಗಿದೆ. ಬೆಳೆ ಕಟಾವಿನ ನಂತರ ತ್ಯಾಜ್ಯವನ್ನು ಸುಡುವ ಪರಿಪಾಠ ದೆಹಲಿಯ ಆಸುಪಾಸಿನ ಪ್ರದೇಶಗಳಲ್ಲಿ ರೂಢಿಯಲ್ಲಿದೆ. ಆದರೆ, ಸರ್ಕಾರದ ಯಾವುದೇ ಕ್ರಮಕ್ಕೂ ರೈತರು ಜಗ್ಗುತ್ತಿಲ್ಲ. ಬೆಂಕಿ ಹಾಕಿದ ರೈತರ ಭೂ ನಕಾಶೆಯ ಮೇಲೆ ಕೆಂಪು ಗುರುತು ಮಾಡಲಾಗುತ್ತಿದೆ. ಸರ್ವೆಯೊಂದರ ಪ್ರಕಾರ ಶೇ. 50ರಷ್ಟು ರೈತರು ಕಟಾವಿನ ನಂತರ ಕೃಷಿ ತ್ಯಾಜ್ಯ ಸುಡುವಿಕೆಯಲ್ಲಿ ತೊಡಗಿದ್ದಾರೆ. ಅಂತಹ ರೈತರಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ ಎಂದು ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು