AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ತ್ಯಾಜ್ಯ ದಹನ: 121 ರೈತರಿಗೆ 3 ಲಕ್ಷ ದಂಡ, 59 ರೈತರ ವಿರುದ್ಧ FIR, ಯಾವೂರಲ್ಲಿ?

ಚಂಡೀಗಢ: ಕೃಷಿ ತ್ಯಾಜ್ಯ ದಹನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 121 ರೈತರು ಬರೋಬ್ಬರಿ 3 ಲಕ್ಷ ರೂಪಾಯಿ ದಂಡ ತೆರಬೇಕಾದ ಪರಿಸ್ಥಿತಿ ಪಂಜಾಬ್​ನ ಮೊಹಾಲಿಯಲ್ಲಿ ಬೆಳಕಿಗೆ ಬಂದಿದೆ. ಬೆಳೆ ಕಟಾವಿನ ನಂತರ ಉಳಿದ ತ್ಯಾಜ್ಯವನ್ನು ಈ ರೈತರು ಸುಟ್ಟುಹಾಕಿದ್ದರು. ಇದರಿಂದ, ಪಂಜಾಬ್​ ಸೇರಿದಂತೆ ನೆರೆಯ ದೆಹಲಿಯಲ್ಲೂ ಸಹ ಬಹಳಷ್ಟು ವಾಯುಮಾಲಿನ್ಯ ಉಂಟಾಗಿದೆ. ಜಿಲ್ಲಾಡಳಿತ ಈ ಹಿಂದೆ, ರೈತರಿಗೆ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚದಂತೆ ಎಚ್ಚರಿಕೆ ಸಹ ನೀಡಿತ್ತು ಎಂದು ತಿಳಿದುಬಂದಿದೆ. ಆದರೂ, ರೈತರು ಕೃಷಿ ತ್ಯಾಜ್ಯ ದಹನಕ್ಕೆ ಮುಂದಾದ […]

ಕೃಷಿ ತ್ಯಾಜ್ಯ ದಹನ: 121 ರೈತರಿಗೆ 3 ಲಕ್ಷ ದಂಡ, 59 ರೈತರ ವಿರುದ್ಧ FIR, ಯಾವೂರಲ್ಲಿ?
KUSHAL V
|

Updated on: Nov 15, 2020 | 12:44 PM

Share

ಚಂಡೀಗಢ: ಕೃಷಿ ತ್ಯಾಜ್ಯ ದಹನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 121 ರೈತರು ಬರೋಬ್ಬರಿ 3 ಲಕ್ಷ ರೂಪಾಯಿ ದಂಡ ತೆರಬೇಕಾದ ಪರಿಸ್ಥಿತಿ ಪಂಜಾಬ್​ನ ಮೊಹಾಲಿಯಲ್ಲಿ ಬೆಳಕಿಗೆ ಬಂದಿದೆ. ಬೆಳೆ ಕಟಾವಿನ ನಂತರ ಉಳಿದ ತ್ಯಾಜ್ಯವನ್ನು ಈ ರೈತರು ಸುಟ್ಟುಹಾಕಿದ್ದರು. ಇದರಿಂದ, ಪಂಜಾಬ್​ ಸೇರಿದಂತೆ ನೆರೆಯ ದೆಹಲಿಯಲ್ಲೂ ಸಹ ಬಹಳಷ್ಟು ವಾಯುಮಾಲಿನ್ಯ ಉಂಟಾಗಿದೆ. ಜಿಲ್ಲಾಡಳಿತ ಈ ಹಿಂದೆ, ರೈತರಿಗೆ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚದಂತೆ ಎಚ್ಚರಿಕೆ ಸಹ ನೀಡಿತ್ತು ಎಂದು ತಿಳಿದುಬಂದಿದೆ. ಆದರೂ, ರೈತರು ಕೃಷಿ ತ್ಯಾಜ್ಯ ದಹನಕ್ಕೆ ಮುಂದಾದ ಹಿನ್ನೆಲೆಯಲ್ಲಿ ಅವರಿಗೆ ದಂಡ ವಿಧಿಸಲಾಗಿದೆ.

ವಾಯುಮಾಲಿನ್ಯಕ್ಕೆ ಉತ್ತೇಜನೆ ನೀಡಿರುವ ಆರೋಪದಡಿ 59 ರೈತರ ವಿರುದ್ಧ FIRದಾಖಲಿಸಲಾಗಿದೆ. ಬೆಳೆ ಕಟಾವಿನ ನಂತರ ತ್ಯಾಜ್ಯವನ್ನು ಸುಡುವ ಪರಿಪಾಠ ದೆಹಲಿಯ ಆಸುಪಾಸಿನ ಪ್ರದೇಶಗಳಲ್ಲಿ ರೂಢಿಯಲ್ಲಿದೆ. ಆದರೆ, ಸರ್ಕಾರದ ಯಾವುದೇ ಕ್ರಮಕ್ಕೂ ರೈತರು ಜಗ್ಗುತ್ತಿಲ್ಲ. ಬೆಂಕಿ ಹಾಕಿದ ರೈತರ ಭೂ ನಕಾಶೆಯ ಮೇಲೆ ಕೆಂಪು ಗುರುತು ಮಾಡಲಾಗುತ್ತಿದೆ. ಸರ್ವೆಯೊಂದರ ಪ್ರಕಾರ ಶೇ. 50ರಷ್ಟು ರೈತರು ಕಟಾವಿನ ನಂತರ ಕೃಷಿ ತ್ಯಾಜ್ಯ ಸುಡುವಿಕೆಯಲ್ಲಿ ತೊಡಗಿದ್ದಾರೆ. ಅಂತಹ ರೈತರಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ ಎಂದು ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?