AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ ಗಾಂಧಿನಗರದಲ್ಲಿ ಇಂದಿನಿಂದ ಮೊದಲ ಆಸ್ಟ್ರೇಲಿಯನ್- ಭಾರತ ಶಿಕ್ಷಣ ಮತ್ತು ಕೌಶಲ್ಯ ಸಮ್ಮೇಳನ

ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳಲ್ಲಿ ಶಿಕ್ಷಣ ಮತ್ತು ಕೌಶಲ್ಯಗಳ ಭವಿಷ್ಯವನ್ನು ರೂಪಿಸುವ ಗುರಿಯೊಂದಿಗೆ ಪರಸ್ಪರ ಒಪ್ಪಿಗೆಯ ಆದ್ಯತೆಗಳನ್ನು ಚರ್ಚಿಸಲು ಶಿಕ್ಷಣ ಮತ್ತು ಕೌಶಲ್ಯ ತಜ್ಞರಿಗೆ ಈ ಸಮ್ಮೇಳನವು ವೇದಿಕೆಯನ್ನು ಒದಗಿಸುತ್ತದೆ.

ಐಐಟಿ ಗಾಂಧಿನಗರದಲ್ಲಿ ಇಂದಿನಿಂದ ಮೊದಲ ಆಸ್ಟ್ರೇಲಿಯನ್- ಭಾರತ ಶಿಕ್ಷಣ ಮತ್ತು ಕೌಶಲ್ಯ ಸಮ್ಮೇಳನ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಸುಷ್ಮಾ ಚಕ್ರೆ
|

Updated on: Nov 06, 2023 | 12:02 PM

Share

ನವದೆಹಲಿ: ಆಸ್ಟ್ರೇಲಿಯಾ ಮತ್ತು ಭಾರತ ಶಿಕ್ಷಣ ಮತ್ತು ಕೌಶಲ್ಯ ಮಂಡಳಿ (ಎಐಇಎಸ್‌ಸಿ)ಯ ಮೊದಲ ಸಭೆ ಇಂದು ಐಐಟಿ ಗಾಂಧಿನಗರದಲ್ಲಿ ನಡೆಯಲಿದೆ. ಎಐಎಎಸ್​ಸಿ (AIESC) ಎರಡು ದೇಶಗಳ ನಡುವಿನ ಶಿಕ್ಷಣ, ತರಬೇತಿ ಮತ್ತು ಸಂಶೋಧನಾ ಪಾಲುದಾರಿಕೆಗಳ ಕಾರ್ಯತಂತ್ರವನ್ನು ರೂಪಿಸಲು 2011ರಲ್ಲಿ ಸ್ಥಾಪಿಸಲಾದ ದ್ವಿ-ರಾಷ್ಟ್ರೀಯ ಸಂಸ್ಥೆಯಾಗಿದೆ. ಎರಡೂ ದೇಶಗಳ ರಾಷ್ಟ್ರೀಯ ಆದ್ಯತೆಗಳಿಗೆ ಅನುಗುಣವಾಗಿ ಶಿಕ್ಷಣ ಮತ್ತು ಕೌಶಲ್ಯ ಪರಿಸರ ವ್ಯವಸ್ಥೆಯ ಕ್ಷೇತ್ರಗಳಲ್ಲಿ ಸಹಕಾರವನ್ನು ಉತ್ತೇಜಿಸಲು ಈ ವೇದಿಕೆ ಸಹಕಾರಿಯಾಗಿದೆ.

ಶಿಕ್ಷಣ ಮತ್ತು ಕೌಶಲ್ಯವನ್ನು ಒಂದೇ ಸಾಂಸ್ಥಿಕ ವೇದಿಕೆಯಡಿ ತರುತ್ತಿರುವುದು ಇದೇ ಮೊದಲು. ಈ ಭೇಟಿಯು ಶಿಕ್ಷಣ ಮತ್ತು ಪರಿಣತಿಯ ಕ್ಷೇತ್ರದಲ್ಲಿ ಪರಸ್ಪರ ಆಸಕ್ತಿಯ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರ, ಪಾಲುದಾರಿಕೆಯನ್ನು ಉತ್ತೇಜಿಸುವ ನಿರೀಕ್ಷೆಯಿದೆ. ಭಾರತ ಸರ್ಕಾರದ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವ ಧರ್ಮೇಂದ್ರ ಪ್ರಧಾನ್ ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ ಚುನಾವಣೆ: ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ

ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳಲ್ಲಿ ಶಿಕ್ಷಣ ಮತ್ತು ಕೌಶಲ್ಯಗಳ ಭವಿಷ್ಯವನ್ನು ರೂಪಿಸುವ ಗುರಿಯೊಂದಿಗೆ ಪರಸ್ಪರ ಒಪ್ಪಿಗೆಯ ಆದ್ಯತೆಗಳನ್ನು ಚರ್ಚಿಸಲು ಶಿಕ್ಷಣ ಮತ್ತು ಕೌಶಲ್ಯ ತಜ್ಞರಿಗೆ ಈ ಸಮ್ಮೇಳನವು ವೇದಿಕೆಯನ್ನು ಒದಗಿಸುತ್ತದೆ. ಇದರಲ್ಲಿನ ಚರ್ಚೆಗಳು ಭವಿಷ್ಯದ ಕಾರ್ಯಪಡೆಯನ್ನು ರೂಪಿಸುವುದು, ಶಿಕ್ಷಣದಲ್ಲಿ ಸಾಂಸ್ಥಿಕ ಪಾಲುದಾರಿಕೆಯನ್ನು ಬಲಪಡಿಸುವುದು ಮತ್ತು ಅಂತಾರಾಷ್ಟ್ರೀಕರಣದ ಮೂಲಕ ಸಂಶೋಧನೆಯ ಪ್ರಭಾವವನ್ನು ಹೆಚ್ಚಿಸುವುದು ಈ 3 ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿರುತ್ತವೆ.

ಇದನ್ನೂ ಓದಿ: Rajasthan: ಗುರುದ್ವಾರದ ಬಗ್ಗೆ ವಿವಾದಾತ್ಮಕ ಹೇಳಿಕೆ, ಬಿಜೆಪಿ ನಾಯಕ ಸಂದೀಪ್ ಪಕ್ಷದಿಂದ ಉಚ್ಚಾಟನೆ

ಈ ಸಭೆಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾದ ಹಿರಿಯ ಸರ್ಕಾರಿ ಅಧಿಕಾರಿಗಳು, ಉನ್ನತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ. 2 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಜೇಸನ್ ಕ್ಲೇರ್ ಸಂಸದರು ಒಟ್ಟಾಗಿ ವಿವಿಧ ಶಿಕ್ಷಣ ಮತ್ತು ವಿಜ್ಞಾನ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ಭಾರತದಲ್ಲಿನ ಆಸ್ಟ್ರೇಲಿಯನ್ ವಿಶ್ವವಿದ್ಯಾಲಯದ ಕ್ಯಾಂಪಸ್‌ಗಳ ಗಿಫ್ಟ್ ಸಿಟಿ ಸೈಟ್‌ಗಳಿಗೆ ಸಹ ಭೇಟಿ ನೀಡಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ