AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಲ್ಲೂ ಬ್ಲ್ಯಾಕ್​ ಫಂಗಸ್​; ಗುಜರಾತ್​​ನಲ್ಲಿ ಪತ್ತೆಯಾಯ್ತು ಮೊದಲ ಕೇಸ್​..ಬಾಲಕನ ಬಾಯಿಯಲ್ಲಿನ ಹುಣ್ಣು ಲಕ್ಷಣವಾಗಿತ್ತು !

ಬಾಲಕ ಏಪ್ರಿಲ್​ 14ರಂದು ಕೊವಿಡ್ ಸೋಂಕಿನಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸುಮಾರು 10 ದಿನ ಐಸಿಯುನಲ್ಲಿದ್ದು, ಆಕ್ಸಿಜನ್​, ರೆಮ್​ಡಿಸಿವಿರ್ ಮೂಲಕ ಆತನಿಗೆ ಚಿಕಿತ್ಸೆ ನೀಡಲಾಗಿದೆ.

ಮಕ್ಕಳಲ್ಲೂ ಬ್ಲ್ಯಾಕ್​ ಫಂಗಸ್​; ಗುಜರಾತ್​​ನಲ್ಲಿ ಪತ್ತೆಯಾಯ್ತು ಮೊದಲ ಕೇಸ್​..ಬಾಲಕನ ಬಾಯಿಯಲ್ಲಿನ ಹುಣ್ಣು ಲಕ್ಷಣವಾಗಿತ್ತು !
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 22, 2021 | 11:34 PM

Share

ಅಹ್ಮದಾಬಾದ್​: ದೇಶಾದ್ಯಂತ ಬ್ಲ್ಯಾಕ್ ಫಂಗಸ್​ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಗುಜರಾತ್​​ನಲ್ಲಿ 15ವರ್ಷದ ಬಾಲಕನೊಬ್ಬನಲ್ಲಿ ಈ ಕಪ್ಪು ಶಿಲೀಂದ್ರ ಕಾಣಿಸಿಕೊಂಡಿದೆ. ನನಗೆ ಗೊತ್ತಿರುವ ಮಟ್ಟಿಗೆ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್​ ಕಾಣಿಸಿಕೊಂಡ ಮೊದಲ ಪ್ರಕರಣ ಇದು ಎಂದು ಅಹ್ಮದಾಬಾದ್​ನ ಮಕ್ಕಳ ವೈದ್ಯ ಡಾ. ಅಭಿಷೇಕ್ ಬನ್ಸಾಲ್​ ತಿಳಿಸಿದ್ದಾರೆ.

ಈ ಬಾಲಕ ಏಪ್ರಿಲ್​ 14ರಂದು ಕೊವಿಡ್ ಸೋಂಕಿನಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸುಮಾರು 10 ದಿನ ಐಸಿಯುನಲ್ಲಿದ್ದು, ಆಕ್ಸಿಜನ್​, ರೆಮ್​ಡಿಸಿವಿರ್ ಮೂಲಕ ಆತನಿಗೆ ಚಿಕಿತ್ಸೆ ನೀಡಲಾಗಿದೆ. ಅದಾದ ಬಳಿಕ ಏಪ್ರಿಲ್​ 24ರಂದು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದ. ಆಸ್ಪತ್ರೆಯಿಂದ ಬಂದು ಹಲವು ದಿನಗಳವರೆಗೆ ಆರೋಗ್ಯವಾಗಿಯೇ ಇದ್ದ ಹುಡುಗನಲ್ಲಿ ಮತ್ತೆ ಹಲ್ಲುನೋವು, ಬಾಯಿಯಲ್ಲಿ ಹುಣ್ಣು ಕಾಣಿಸಿಕೊಂಡಿತು. ಮತ್ತೆ ಆಸ್ಪತ್ರೆಗೆ ದಾಖಲಾದ ಆತನನ್ನು ಪರೀಕ್ಷಿಸಿದಾಗ ಮ್ಯೂಕೋರ್ಮೈಕೋಸಿಸ್​ ಇರುವುದು ದೃಢಪಟ್ಟಿತು ಎಂದು ಡಾ. ಬನ್ಸಾಲ್​ ಮಾಹಿತಿ ನೀಡಿದ್ದಾರೆ.

ಈ ಬಾಲಕನ ಬಾಯಿಯ ಬಲಭಾಗದ ಅರ್ಧದಷ್ಟು ಪೆಲೇಟ್​​ ಮತ್ತು ಮೇಲಿನ ಹಲ್ಲನ್ನು ತೆಗೆದುಹಾಕಲಾಗಿದೆ. ಸೈನಸ್​​ನ್ನು ಸ್ವಚ್ಛಗೊಳಿಸಲಾಗಿದೆ. ಸದ್ಯ ಆತನ ಸ್ಥಿತಿ ಸ್ಥಿರವಾಗಿದೆ. ಇನ್ನು ಮೂರು-ನಾಲ್ಕು ದಿನಗಳಲ್ಲಿ ಡಿಸ್​ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕಣ್ಣೀರಿನ ಬಗ್ಗೆ ನ್ಯೂಯಾರ್ಕ್ ಟೈಮ್ಸ್​ನಲ್ಲಿ ಪ್ರಕಟವಾಗಿದೆ ಎನ್ನಲಾದ ಈ ಸುದ್ದಿಯ ಅಸಲಿ ವಿಷಯವೇನು?

Published On - 11:32 pm, Sat, 22 May 21

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ