AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಲ್ಲೂ ಬ್ಲ್ಯಾಕ್​ ಫಂಗಸ್​; ಗುಜರಾತ್​​ನಲ್ಲಿ ಪತ್ತೆಯಾಯ್ತು ಮೊದಲ ಕೇಸ್​..ಬಾಲಕನ ಬಾಯಿಯಲ್ಲಿನ ಹುಣ್ಣು ಲಕ್ಷಣವಾಗಿತ್ತು !

ಬಾಲಕ ಏಪ್ರಿಲ್​ 14ರಂದು ಕೊವಿಡ್ ಸೋಂಕಿನಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸುಮಾರು 10 ದಿನ ಐಸಿಯುನಲ್ಲಿದ್ದು, ಆಕ್ಸಿಜನ್​, ರೆಮ್​ಡಿಸಿವಿರ್ ಮೂಲಕ ಆತನಿಗೆ ಚಿಕಿತ್ಸೆ ನೀಡಲಾಗಿದೆ.

ಮಕ್ಕಳಲ್ಲೂ ಬ್ಲ್ಯಾಕ್​ ಫಂಗಸ್​; ಗುಜರಾತ್​​ನಲ್ಲಿ ಪತ್ತೆಯಾಯ್ತು ಮೊದಲ ಕೇಸ್​..ಬಾಲಕನ ಬಾಯಿಯಲ್ಲಿನ ಹುಣ್ಣು ಲಕ್ಷಣವಾಗಿತ್ತು !
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 22, 2021 | 11:34 PM

Share

ಅಹ್ಮದಾಬಾದ್​: ದೇಶಾದ್ಯಂತ ಬ್ಲ್ಯಾಕ್ ಫಂಗಸ್​ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಗುಜರಾತ್​​ನಲ್ಲಿ 15ವರ್ಷದ ಬಾಲಕನೊಬ್ಬನಲ್ಲಿ ಈ ಕಪ್ಪು ಶಿಲೀಂದ್ರ ಕಾಣಿಸಿಕೊಂಡಿದೆ. ನನಗೆ ಗೊತ್ತಿರುವ ಮಟ್ಟಿಗೆ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್​ ಕಾಣಿಸಿಕೊಂಡ ಮೊದಲ ಪ್ರಕರಣ ಇದು ಎಂದು ಅಹ್ಮದಾಬಾದ್​ನ ಮಕ್ಕಳ ವೈದ್ಯ ಡಾ. ಅಭಿಷೇಕ್ ಬನ್ಸಾಲ್​ ತಿಳಿಸಿದ್ದಾರೆ.

ಈ ಬಾಲಕ ಏಪ್ರಿಲ್​ 14ರಂದು ಕೊವಿಡ್ ಸೋಂಕಿನಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸುಮಾರು 10 ದಿನ ಐಸಿಯುನಲ್ಲಿದ್ದು, ಆಕ್ಸಿಜನ್​, ರೆಮ್​ಡಿಸಿವಿರ್ ಮೂಲಕ ಆತನಿಗೆ ಚಿಕಿತ್ಸೆ ನೀಡಲಾಗಿದೆ. ಅದಾದ ಬಳಿಕ ಏಪ್ರಿಲ್​ 24ರಂದು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದ. ಆಸ್ಪತ್ರೆಯಿಂದ ಬಂದು ಹಲವು ದಿನಗಳವರೆಗೆ ಆರೋಗ್ಯವಾಗಿಯೇ ಇದ್ದ ಹುಡುಗನಲ್ಲಿ ಮತ್ತೆ ಹಲ್ಲುನೋವು, ಬಾಯಿಯಲ್ಲಿ ಹುಣ್ಣು ಕಾಣಿಸಿಕೊಂಡಿತು. ಮತ್ತೆ ಆಸ್ಪತ್ರೆಗೆ ದಾಖಲಾದ ಆತನನ್ನು ಪರೀಕ್ಷಿಸಿದಾಗ ಮ್ಯೂಕೋರ್ಮೈಕೋಸಿಸ್​ ಇರುವುದು ದೃಢಪಟ್ಟಿತು ಎಂದು ಡಾ. ಬನ್ಸಾಲ್​ ಮಾಹಿತಿ ನೀಡಿದ್ದಾರೆ.

ಈ ಬಾಲಕನ ಬಾಯಿಯ ಬಲಭಾಗದ ಅರ್ಧದಷ್ಟು ಪೆಲೇಟ್​​ ಮತ್ತು ಮೇಲಿನ ಹಲ್ಲನ್ನು ತೆಗೆದುಹಾಕಲಾಗಿದೆ. ಸೈನಸ್​​ನ್ನು ಸ್ವಚ್ಛಗೊಳಿಸಲಾಗಿದೆ. ಸದ್ಯ ಆತನ ಸ್ಥಿತಿ ಸ್ಥಿರವಾಗಿದೆ. ಇನ್ನು ಮೂರು-ನಾಲ್ಕು ದಿನಗಳಲ್ಲಿ ಡಿಸ್​ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕಣ್ಣೀರಿನ ಬಗ್ಗೆ ನ್ಯೂಯಾರ್ಕ್ ಟೈಮ್ಸ್​ನಲ್ಲಿ ಪ್ರಕಟವಾಗಿದೆ ಎನ್ನಲಾದ ಈ ಸುದ್ದಿಯ ಅಸಲಿ ವಿಷಯವೇನು?

Published On - 11:32 pm, Sat, 22 May 21

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?