AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Vaccine: ಭಾರತದಲ್ಲಿ ನಿನ್ನೆ ದಾಖಲೆ ಪ್ರಮಾಣದ ಕೊರೊನಾ ಲಸಿಕೆ ವಿತರಣೆ; ಬಿಜೆಪಿ ಆಡಳಿತವಿರುವ ರಾಜ್ಯಗಳದ್ದೇ ಮೇಲುಗೈ

Corona Vaccination: ಮಧ್ಯಪ್ರದೇಶದಲ್ಲಿ 15,42,632 ಡೋಸ್, ಕರ್ನಾಟಕದಲ್ಲಿ 10,67,734 ಡೋಸ್ ಹಾಗೂ ಉತ್ತರಪ್ರದೇಶದಲ್ಲಿ 6,74,546 ಡೋಸ್ ಲಸಿಕೆ ನಿನ್ನೆ ವಿತರಿಸಲ್ಪಟ್ಟಿದೆ. ಇದೇ ಸಂದರ್ಭದಲ್ಲಿ ಪಂಜಾಬ್, ಜಾರ್ಖಂಡ್, ಚತ್ತೀಸ್​ಗಡ, ದೆಹಲಿಯಲ್ಲಿ ನಿನ್ನೆ ವಿತರಿಸಲ್ಪಟ್ಟ ಕೊರೊನಾ ಲಸಿಕೆಯ ಪ್ರಮಾಣ 1 ಲಕ್ಷ ಡೋಸ್​ ಕೂಡಾ ದಾಟಿಲ್ಲ ಎನ್ನುವುದು ಗಮನಾರ್ಹ.

Covid Vaccine: ಭಾರತದಲ್ಲಿ ನಿನ್ನೆ ದಾಖಲೆ ಪ್ರಮಾಣದ ಕೊರೊನಾ ಲಸಿಕೆ ವಿತರಣೆ; ಬಿಜೆಪಿ ಆಡಳಿತವಿರುವ ರಾಜ್ಯಗಳದ್ದೇ ಮೇಲುಗೈ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 22, 2021 | 7:38 AM

Share

ದೆಹಲಿ: ಭಾರತದಲ್ಲಿ ನಿನ್ನೆಯಿಂದ (ಜೂನ್​ 21) ಕೊರೊನಾ ಲಸಿಕೆ ವಿತರಣೆ ಮತ್ತಷ್ಟು ಚುರುಕುಗೊಂಡಿದೆ. ನಿನ್ನೆಯೊಂದೇ ದಿನ ದೇಶದಲ್ಲಿ 84.07ಡೋಸ್​ ಕೊರೊನಾ ಲಸಿಕೆ ವಿತರಿಸಲಾಗಿದ್ದು, ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದ ಯುವ ಸಮುದಾಯಕ್ಕೂ ರಕ್ಷಣೆ ನೀಡಬೇಕೆಂಬ ದೃಷ್ಟಿಯಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳುವುದಾಗಿ ಹೇಳಿರುವ ಭಾರತ ಸರ್ಕಾರ ಈ ವಿಚಾರದಲ್ಲಿ ದಾಪುಗಾಲಿಡಲಾರಂಭಿಸಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕೊರೊನಾ ಲಸಿಕೆ ವಿತರಣೆ ಆರಂಭವಾದ ನಂತರ ಅಂದರೆ 2021ರ ಜನವರಿ 16ರಿಂದ ಇಲ್ಲಿಯ ತನಕ ದಿನವೊಂದರಲ್ಲಿ ನೀಡಲಾದ ಲಸಿಕೆಯ ಪ್ರಮಾಣ ನಿನ್ನೆ ಗರಿಷ್ಠ ಮಟ್ಟವನ್ನು ತಲುಪಿದೆ.

ಗಮನಾರ್ಹ ವಿಚಾರವೆಂದರೆ ಲಸಿಕೆಗೆ ಪ್ರಾಮುಖ್ಯತೆ ನೀಡುತ್ತಿರುವ ಈ ಹಂತದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರವೂ ಇಳಿಕೆಯಾಗುತ್ತಿದ್ದು, ಬರೋಬ್ಬರಿ 88 ದಿನಗಳ ನಂತರ ನಿನ್ನೆ ದೇಶದಲ್ಲಿ ಕನಿಷ್ಠ ಪ್ರಕರಣಗಳು ಹೊಸದಾಗಿ ದಾಖಲಾಗಿವೆ. ನಿನ್ನೆ ಒಟ್ಟು 53,256 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಈವರೆಗೆ ದಾಖಲಾದ ಒಟ್ಟಾರೆ ಪ್ರಕರಣಗಳ ಸಂಖ್ಯೆ 2,99,35,221. ಅಲ್ಲದೇ, ಸುಮಾರು 65 ದಿನಗಳ ನಂತರ ಸೋಂಕಿತರ ಮರಣ ಪ್ರಮಾಣವೂ ಕಡಿಮೆಯಾಗಿದ್ದು ನಿನ್ನೆ 1,422 ಕೊರೊನಾ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಆ ಮೂಲಕ ಇದುವರೆಗೆ ಕೊರೊನಾದಿಂದ ಪ್ರಾಣ ತ್ಯಜಿಸಿದವರ ಸಂಖ್ಯೆ 3,88,135ಕ್ಕೆ ತಲುಪಿದೆ.

ಪ್ರಸ್ತುತ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ಎಂದು ಅಭಿಯಾನ ಆರಂಭಿಸಿರುವ ಭಾರತ ಸರ್ಕಾರ, ಸಂಭವನೀಯ ಮೂರನೇ ಅಲೆಯನ್ನು ಲಸಿಕೆಯ ಮೂಲಕವೇ ಕಟ್ಟಿಹಾಕಲು ಮಹತ್ವದ ಹೆಜ್ಜೆ ಇರಿಸಿದೆ. ಈ ಅಭಿಯಾನದ ಮುಖ್ಯ ಫಲಾನುಭವಿಗಳು ಬಡವರು, ಮಧ್ಯಮ ವರ್ಗದವರು ಹಾಗೂ ಯುವ ಸಮುದಾಯ ಆಗಿರಲಿದ್ದು ಕೊರೊನಾ ವೈರಾಣುವನ್ನು ಮಣಿಸಲು ನಾವೆಲ್ಲರೂ ಲಸಿಕೆ ಪಡೆಯುತ್ತೇವೆ ಎಂಬ ಪ್ರತಿಜ್ಞೆ ಮಾಡಬೇಕು ಎಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ನಿನ್ನೆಯ ದಾಖಲೆ ಪ್ರಮಾಣದ ಕೊರೊನಾ ಲಸಿಕೆ ವಿತರಣೆಗೆ ಮೆಚ್ಚುಗೆ ಸೂಚಿಸಿರುವ ಪ್ರಧಾನ ಮಂತ್ರಿ, ಕೊರೊನಾ ವಿರುದ್ಧದ ಹೋರಾಟದಲ್ಲಿ ಲಸಿಕೆ ಪರಿಣಾಮಕಾರಿ ಅಸ್ತ್ರವಾಗಿದೆ. ಲಸಿಕೆ ಪಡೆದ ಎಲ್ಲರಿಗೂ ಅಭಿನಂದನೆಗಳು. ಜತೆಗೆ, ಸಾರ್ವಜನಿಕರಿಗೆ ಅಧಿಕ ಪ್ರಮಾಣದಲ್ಲಿ ಲಸಿಕೆ ತಲುಪಿಸಲು ಶ್ರಮಿಸುತ್ತಿರುವ ಮುಂಚೂಣಿ ಸಾಲಿನಲ್ಲಿನ ಕಾರ್ಯಕರ್ತರೆಲ್ಲರಿಗೂ ವಂದನೆಗಳು ಎಂದು ಟ್ವೀಟ್ ಮಾಡುವ ಮೂಲಕ ಶ್ಲಾಘಿಸಿದ್ದಾರೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಾಖಲೆ ಪ್ರಮಾಣದಲ್ಲಿ ಲಸಿಕೆ ವಿತರಣೆ ಆಗಿದೆ. ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಗುಜರಾತ್​ ಹಾಗೂ ಹರಿಯಾಣ ರಾಜ್ಯಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಆಯೋಜಿಸುವ ಮೂಲಕ ಹೆಚ್ಚು ಪ್ರಮಾಣದ ಲಸಿಕೆ ನೀಡಲಾಗಿದೆ. ಮಧ್ಯಪ್ರದೇಶದಲ್ಲಿ 15,42,632 ಡೋಸ್, ಕರ್ನಾಟಕದಲ್ಲಿ 10,67,734 ಡೋಸ್ ಹಾಗೂ ಉತ್ತರಪ್ರದೇಶದಲ್ಲಿ 6,74,546 ಡೋಸ್ ಲಸಿಕೆ ನಿನ್ನೆ ವಿತರಿಸಲ್ಪಟ್ಟಿದೆ. ಇದೇ ಸಂದರ್ಭದಲ್ಲಿ ಪಂಜಾಬ್, ಜಾರ್ಖಂಡ್, ಚತ್ತೀಸ್​ಗಡ, ದೆಹಲಿಯಲ್ಲಿ ನಿನ್ನೆ ವಿತರಿಸಲ್ಪಟ್ಟ ಕೊರೊನಾ ಲಸಿಕೆಯ ಪ್ರಮಾಣ 1 ಲಕ್ಷ ಡೋಸ್​ ಕೂಡಾ ದಾಟಿಲ್ಲ ಎನ್ನುವುದು ಗಮನಾರ್ಹ.

ಇದನ್ನೂ ಓದಿ: Explainer: ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಎಂದರೇನು? ರೂಪಾಂತರಿ ವೈರಾಣು ಎಷ್ಟು ಅಪಾಯಕಾರಿ, ಇದರಿಂದ ರಕ್ಷಣೆ ಹೇಗೆ? 

Coronavirus Third Wave: ಸೆಪ್ಟೆಂಬರ್​-ಅಕ್ಟೋಬರ್​ ವೇಳೆಗೆ ಕೊರೊನಾ ಮೂರನೇ ಅಲೆ ಉತ್ತುಂಗಕ್ಕೆ ತಲುಪಲಿದೆ – ಐಐಟಿ ಅಧ್ಯಯನ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!