ಡೆಲ್ಟಾ ಪ್ಲಸ್ ಡೆಲ್ಟಾ ರೂಪಾಂತರಿಗೆ ತಮಿಳುನಾಡಿನಲ್ಲಿ ಒಬ್ಬರು ಬಲಿ, ಸುರಕ್ಷತೆ ಕ್ರಮ ಹೆಚ್ಚಿಸಲು ಕೇಂದ್ರದ ನಿರ್ದೇಶನ

ಶುಕ್ರವಾರದವರೆಗೆ ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿಯಿಂದ ಸೋಂಕಿತರಾಗಿರುವ 20 ಪ್ರಕರಣಗಳು ವರದಿಯಾಗಿವೆ ಮತ್ತು ತಮಿಳುನಾಡಿನಲ್ಲಿ 9 ಜನ ಸೋಂಕಿತರಾಗಿದ್ದಾರೆ.

ಡೆಲ್ಟಾ ಪ್ಲಸ್ ಡೆಲ್ಟಾ ರೂಪಾಂತರಿಗೆ ತಮಿಳುನಾಡಿನಲ್ಲಿ ಒಬ್ಬರು ಬಲಿ, ಸುರಕ್ಷತೆ ಕ್ರಮ ಹೆಚ್ಚಿಸಲು ಕೇಂದ್ರದ ನಿರ್ದೇಶನ
ಸಾಂದರ್ಭಿಕ ಚಿತ್ರ
Follow us
|

Updated on: Jun 26, 2021 | 4:29 PM

ಚೆನೈ: ಸಾರ್ಸ್-ಕೋವ್-2 (ಕೋವಿಡ್-19) ವೈರಸ್​ ರೂಪಾಂತರಿ ಡೆಲ್ಟಾ ಪ್ಲಸ್​ನಿಂದ ತಮಿಳುನಾಡಿನಲ್ಲಿ ಮೊದಲ ಸಾವು ಸಂಭವಿಸಿದ್ದು, ರಾಜ್ಯದ ಅರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಮದುರೈನಲ್ಲಿ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಶನಿವಾರ ಅದಕ್ಕೆ ಬಲಿಯಾಗಿದ್ದಾರೆ. ಎವೈ.1 ರೂಪಾಂತರಿಯ ಅಪಾಯಕಾರಿ ಆವೃತ್ತಿಯಾಗಿರುವ ಡೆಲ್ಟಾ ಪ್ಲಸ್ ಡೆಲ್ಟಾ ರೂಪಾಂತರಿಯ ಒಂದು ಪ್ರಬೇಧವಾಗಿದ್ದು, ತೀವ್ರಗತಿಯಲ್ಲಿ ಹರಡುವುದರ ಜೊತೆಗೆ ಬೇರೆ ಕೊರೋನಾವೈರಸ್​ಗಳಿಗಿಂತ ಹೆಚ್ಚು ಮಾರಣಾಂತಿಕವಾಗಿರುವುದರಿಂದ ದೇಶದಲ್ಲಿ ಹೊಸ ತಲ್ಲಣ ಸೃಷ್ಟಿಯಾಗುವುದಕ್ಕೆ ಕಾರಣವಾಗಿದೆ. ವೈದ್ಯಕೀಯ ಮೂಲಗಳ ಪ್ರಕಾರ ದೇಶದಲ್ಲಿ ಈಗ ನೀಡಲಾಗುತ್ತಿರುವ ಕೊವಿಡ್ -19 ಲಸಿಕೆಗಳು ಅದರ ವಿರುದ್ಧ ಹೆಚ್ಚು ಪ್ರಭಾವ ಬೀರುತ್ತಿಲ್ಲ. ಡೆಲ್ಟಾ ಪ್ಲಸ್ ರೂಪಾಂತರಿಯಿಂದ ಸೋಂಕಿತರಾಗಿರುವ ಮೂವರಲ್ಲಿ ಇಬ್ಬರು ಗುಣಮುಖರಾಗಿದ್ದಾರೆ ಎಂದು ತಮಿಳುನಾಡಿನ ಆರೋಗ್ಯ ಸಚಿವ ಎಮ್ ಸುಬ್ರಮಣಿಯನ್ ಅವರು ಹೇಳಿದ್ದಾರೆ. ಚೇತರಿಸಿಕೊಂಡವರಲ್ಲಿ ಒಬ್ಬರು ಚೆನೈ ನಗರದಲ್ಲಿ ನರ್ಸ್​ ಆಗಿ ಕೆಲಸ ಮಾಡುತ್ತಿರುವ ಮಹಿಳೆಯಾಗಿದ್ದರೆ ಮತ್ತೊಬ್ಬರು ಕಂಚೀಪುರಂ ನಿವಾಸಿಯಾಗಿದ್ದಾರೆ.

ಮದುರೈ ರೋಗಿ ಸಾವಿಗೀಡಾದ ನಂತರ ಅವರ ದೇಹದಿಂದ ಸ್ಯಾಂಪಲ್​ಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ ಡೆಲ್ಟಾ ಪ್ಲಸ್ ರೂಪಾಂತರಿ ಪತ್ತೆಯಾಗಿದೆ ಎಂದು ಸುಬ್ರಮಣಿಯನ್ ಹೇಳಿದರು.

ಸಮಾಧಾನಕರ ಸಂಗತಿಯೆಂದರೆ ಮೃತ ರೋಗಿಯ ಜೊತೆಗಿದ್ದವರಲ್ಲಿ ಯಾರಿಗೂ ಸೋಂಕು ತಾಕಿಲ್ಲ.

ಶುಕ್ರವಾರದವರೆಗೆ ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿಯಿಂದ ಸೋಂಕಿತರಾಗಿರುವ 20 ಪ್ರಕರಣಗಳು ವರದಿಯಾಗಿವೆ ಮತ್ತು ತಮಿಳುನಾಡಿನಲ್ಲಿ 9 ಜನ ಸೋಂಕಿತರಾಗಿದ್ದಾರೆ. ಡೆಲ್ಟಾ ಪ್ಲಸ್ ರೂಪಾಂತರಿಯ ಸುಮಾರು ಶೇಕಡಾ 30 ರಷ್ಟು ಪ್ರಕರಣಗಳು ದಕ್ಷಿಣ ಭಾರತ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮತ್ತು ಕೇರಳದಲ್ಲಿ ವರದಿಯಾಗಿವೆ.

ಅಪಾಯಕಾರಿ ಡೆಲ್ಟಾ ಪ್ಲಸ್ ರೂಪಾಂತರಿಯಿಂದ ಕಳವಳಕ್ಕೀಡಾಗಿರುವ ಕೇಂದ್ರ ಆರೋಗ್ಯ ಇಲಾಖೆಯು ಶುಕ್ರವಾರದಂದು ಏಳು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ; ಕೂಡಲೇ ಅದನ್ನು ನಿಯಂತ್ರಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದೆ. ತಮಿಳುನಾಡಿನ ಮದುರೈ, ಕಂಚೀಪುರಂ ಮತ್ತು ಚೆನೈಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿಯಿಂದ ಬಳಲುತ್ತಿರುವ ಪ್ರಕರಣಗಳು ಪತ್ತೆಯಾದ ನಂತರ ಸೋಂಕಿನ ವಿರುದ್ಧ ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಸೂಚಿಸಲಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ಸೋಂಕನ್ನು ನಿಯಂತ್ರಿಸಲು ಮತ್ತು ಕೋವಿಡ್​-19 ನಿಯಮಗಳಿಗೆ ಜನ ಬದ್ಧರಾಗಿರುವಂತೆ ಎಚ್ಚರಿಸಲು ಸೂಚಿಸಿದ್ದಾರೆ.

ಭಾರತದ ಸಾರ್ಸ್-ಕೊವ್-2 ಜಿನೋಮಿಕ್ ಕನ್ಸಾರ್ಟಿಯಾದಿಂದ ಲಭ್ಯವಾದ ದತ್ತಾಂಶದ ಆಧಾರದ ಮೇಲೆ ಆರೋಗ್ಯ ಇಲಾಖೆಯು ವೈರಸ್ ತಳಿಗಳ ಜೀನೋಮ್ ಅನುಕ್ರಮವನ್ನು ಅಧ್ಯಯನ ಮತ್ತು ಮಾನಿಟರ್ ಮಾಡಲು ಸ್ಥಾಪಿಸಿದ ವೇದಿಕೆಯು ಡೆಲ್ಟಾ ಪ್ಲಸ್ ರೂಪಾಂತರಿಗಳು ಮೂರು ಪ್ರಮುಖ ಗುಣಲಕ್ಷಣ- ಹೆಚ್ಚಿನ ಪ್ರಮಾಣದ ಹಬ್ಬುವಿಕೆ; ಶ್ವಾಸಕೋಶದ ಗ್ರಾಹಕಗಳೊಂದಿಗೆ ಬಲವಾದ ಬಾಂಧವ್ಯ; ಮತ್ತು ಮೊನೊಕ್ಲೋನಲ್ ಪ್ರತಿಕಾಯ ಪ್ರತಿಕ್ರಿಯೆಯಲ್ಲಿ ಸಂಭಾವ್ಯ ಕಡಿತ ಹೊಂದಿರುವುದನ್ನು ಪತ್ತೆ ಮಾಡಿದೆ.

ಇದನ್ನೂ ಓದಿ: Delta Plus Variant: ಮೈಸೂರಿನಲ್ಲಿ ಈವರೆಗೆ ನಾಲ್ವರು ಡೆಲ್ಟಾ ಸೋಂಕಿತರು ಪತ್ತೆ, ಸಾರ್ವಜನಿಕರು ಆತಂಕಪಡುವ ಅವಶ್ಯಕತೆಯಿಲ್ಲ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​