AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Plus Variant ಭಾರತದಲ್ಲಿ ‘ಡೆಲ್ಟಾ ಪ್ಲಸ್’ ದಾಳಿಗೆ ಮೊದಲ ಬಲಿ..

ರೂಪಾಂತರಿ ವೈರಸ್ ಡೆಲ್ಟಾ ಪ್ಲಸ್ ದಾಳಿಗೆ ಭಾರತದಲ್ಲಿ ಮೊದಲ ಬಲಿಯಾಗಿದೆ. ಜಿನೋಮ್ ಟೆಸ್ಟ್ ವರದಿ ಬರುವುದಕ್ಕೂ ಮುನ್ನವೇ ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ಸೋಂಕಿಗೆ ಮಹಿಳೆ ಮೃತಪಟ್ಟಿದ್ದಾರೆ.

Delta Plus Variant ಭಾರತದಲ್ಲಿ ‘ಡೆಲ್ಟಾ ಪ್ಲಸ್’ ದಾಳಿಗೆ ಮೊದಲ ಬಲಿ..
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 24, 2021 | 12:55 PM

Share

ದೆಹಲಿ: ರೂಪಾಂತರಿ ವೈರಸ್ ಡೆಲ್ಟಾ ಪ್ಲಸ್ ದಾಳಿಗೆ ಭಾರತದಲ್ಲಿ ಮೊದಲ ಬಲಿಯಾಗಿದೆ. ಜಿನೋಮ್ ಟೆಸ್ಟ್ ವರದಿ ಬರುವುದಕ್ಕೂ ಮುನ್ನವೇ ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ಸೋಂಕಿಗೆ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಜೂನ್ 23ರಂದು ಬುಧವಾರ ವರದಿಯಾಗಿದೆ. ಉಜ್ಜೈನಿಯಲ್ಲಿ ಸಂಗ್ರಹಿಸಿರುವ ಸ್ಯಾಂಪಲ್ನಲ್ಲಿ ಕೊರೊನಾ ಸೋಂಕಿತೆಗೆ ಡೆಲ್ಟಾ ಪ್ಲಸ್ ಪ್ರಭೇದ ತಗುಲಿರುವುದು ಬಹಿರಂಗವಾಗಿದೆ.

ಭಾರತದಲ್ಲಿ ಎಷ್ಟು ಕೇಸ್ ಬಂದಿವೆ? ಭಾರತದಲ್ಲಿ ಇದುವರೆಗೂ 40 ಡೆಲ್ಟಾ ಪ್ಲಸ್ ಪ್ರಭೇದದ ಕೇಸ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 21, ಮಧ್ಯಪ್ರದೇಶದಲ್ಲಿ 5, ಕೇರಳದಲ್ಲಿ 3, ಆಂಧ್ರ, ಜಮ್ಮು ಕಾಶ್ಮೀರದಲ್ಲಿ ತಲಾ 1 ಕೇಸ್ ಪತ್ತೆಯಾಗಿವೆ. ಹಾಗೂ ತಮಿಳುನಾಡು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ಪತ್ತೆಯಾಗಿವೆ.

ಡೆಲ್ಟಾ ಪ್ಲಸ್ ನಿಜಕ್ಕೂ ಎಷ್ಟು ಆತಂಕಕಾರಿ? ಗುಣಲಕ್ಷಣಗಳೇನು? ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ಅನ್ನು ಕೇಂದ್ರ ಸರ್ಕಾರ ಕಳವಳಕಾರಿ ಪ್ರಭೇದ ಎಂದು ಹೇಳಿದೆ. ಕಳವಳಕಾರಿ ಪ್ರಭೇದದ ವೈರಸ್ ಮೇಲೆ ತೀವ್ರ ನಿಗಾ ವಹಿಸಲಾಗುತ್ತೆ. ಡೆಲ್ಟಾ ಪ್ಲಸ್ ಪ್ರಭೇದ ವೇಗವಾಗಿ ಹರಡುತ್ತೆ ಎಂದು ಕೇಂದ್ರ ಹೇಳಿದೆ. ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ಶ್ವಾಸಕೋಶಕ್ಕೆ ಹಾನಿ ಮಾಡಬಲ್ಲದು. ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ವಿರುದ್ಧ ಮಾನೋಕ್ಲೋನಲ್ ಆ್ಯಂಟಿಬಾಡಿ ಕಾಕ್ ಟೈಲ್ ಪರಿಣಾಮಕಾರಿ ಅಲ್ಲ. ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ದೇಹದಲ್ಲಿರುವ ವೈರಸ್ ವಿರುದ್ಧದ ಪ್ರತಿಕಾಯಗಳು, ಲಸಿಕೆಯಿಂದ ತಪ್ಪಿಸಿಕೊಳ್ಳಬಹುದು ಎಂದು ತಿಳಿಸಿದೆ.

ಇದನ್ನೂ ಓದಿ: Delta Plus Variant ಹಿಂದಿನ ರೂಪಾಂತರಿಗೆ ಹೋಲಿಸಿದರೆ ಡೆಲ್ಟಾ ಪ್ಲಸ್ ವೈರಸ್ ಹೆಚ್ಚು ಸಾಂಕ್ರಾಮಿಕ: ಡಾ.ರಣದೀಪ್ ಗುಲೇರಿಯಾ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ