AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann Ki Baat: ‘ಮೊದಲು ಎಲ್ಲರಿಗೂ ಲಸಿಕೆ ಕೊಡಿ..ನಂತರ ಮನ್​ ಕೀ ಬಾತ್​ನಲ್ಲಿ ಮಾತಾಡಿ’-ರಾಹುಲ್​ ಗಾಂಧಿ

ಮನ್​ ಕೀ ಬಾತ್​ ಪ್ರಧಾನಿ ಮೋದಿಯವರ ತಿಂಗಳ ರೇಡಿಯೋ ಕಾರ್ಯಕ್ರಮವಾಗಿದೆ. ಪ್ರತಿ ತಿಂಗಳ ಕೊನೇ ಭಾನುವಾರದಂದು ಈ ಕಾರ್ಯಕ್ರಮದ ಮೂಲಕ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಇಲ್ಲಿ ರಾಜಕೀಯ ಹೊರತು ಪಡಿಸಿ ಬೇರೆ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಾರೆ.

Mann Ki Baat: ‘ಮೊದಲು ಎಲ್ಲರಿಗೂ ಲಸಿಕೆ ಕೊಡಿ..ನಂತರ ಮನ್​ ಕೀ ಬಾತ್​ನಲ್ಲಿ ಮಾತಾಡಿ’-ರಾಹುಲ್​ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: |

Updated on: Jun 27, 2021 | 12:47 PM

Share

ಪ್ರತಿಬಾರಿಯೂ ಪ್ರಧಾನಿ ನರೇಂದ್ರ ಮೋದಿಯವರು ಮನ್​ ಕೀ ಬಾತ್​ ನಡೆಸಿದ ಕೂಡಲೇ ಕಾಂಗ್ರೆಸ್ ಸಂಸದ ರಾಹುಲ್​ ಗಾಂಧಿ ಅವರಿಗೆ ತಿರುಗೇಟು ನೀಡುತ್ತಾರೆ. ಪ್ರಧಾನಿ ಮೋದಿಯವರ ಮನ್​ ಕೀ ಬಾತ್​​ ಬಗ್ಗೆ ವ್ಯಂಗ್ಯವಾಡುತ್ತಾರೆ. ಹಾಗೇ ಇಂದಿನ ಮನ್​ ಕೀ ಬಾತ್​​ನ್ನೂ ಕೂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಮನ್​ ಕೀ ಬಾತ್​ ಮುಗಿಯುತ್ತಿದ್ದಂತೆ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ ರಾಹುಲ್​ ಗಾಂಧಿ, ಮೊದಲು ಈ ದೇಶದ ಪ್ರತಿಯೊಬ್ಬರಿಗೂ ಕೊವಿಡ್ 19 ಲಸಿಕೆ ತಲುಪುವಂತೆ ಮಾಡಿ. ಬಳಿಕ ನಿಮ್ಮ ಮನ್​ ಕೀ ಬಾತ್​ ನಡೆಸಿ ಎಂದು ಹೇಳಿದ್ದಾರೆ. ಹಾಗೇ, ಕೊವಿಡ್​ 19 ಲಸಿಕೆ ಬಗೆಗಿನ ಸತ್ಯಗಳು ಎಂಬ, ಗ್ರಾಪ್​​ ಚಾರ್ಟ್​ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲಿ ಕೊರೊನಾ ಲಸಿಕೆ ನೀಡಿದ ಡಾಟಾ ಉಲ್ಲೇಖವಾಗಿದೆ.

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದೇ ಮೊದಲಿನಿಂದಲೂ ಹೇಳುತ್ತಿರುವ ರಾಹುಲ್​ ಗಾಂಧಿ, ಇತ್ತೀಚೆಗಷ್ಟೇ ಕೇಂದ್ರ ಸರ್ಕಾರದ ಕೊವಿಡ್​-19 ಸಂದರ್ಭ ನಿರ್ವಹಣೆ ಬಗ್ಗೆ ಶ್ವೇತಪತ್ರವನ್ನೂ ಹೊರಡಿಸಿದ್ದರು. ಎರಡನೇ ಅಲೆಯಲ್ಲಿ ಸೋಂಕು ನಿಯಂತ್ರಣದ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳದೆ ಇದ್ದರೆ, ಮೂರನೇ ಅಲೆ ಇನ್ನಷ್ಟು ಭೀಕರವಾಗಿರಲಿದೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಮನ್​ ಕೀ ಬಾತ್​ ಪ್ರಧಾನಿ ಮೋದಿಯವರ ತಿಂಗಳ ರೇಡಿಯೋ ಕಾರ್ಯಕ್ರಮವಾಗಿದೆ. ಪ್ರತಿ ತಿಂಗಳ ಕೊನೇ ಭಾನುವಾರದಂದು ಈ ಕಾರ್ಯಕ್ರಮದ ಮೂಲಕ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಇಲ್ಲಿ ರಾಜಕೀಯ ಹೊರತು ಪಡಿಸಿ ಬೇರೆ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಾರೆ. ಸಾಧಕರನ್ನು ಗುರುತಿಸಿ ಶ್ಲಾಘಿಸುತ್ತಾರೆ. ಹಾಗೇ ಇಂದೂ ಸಹ ಮೋದಿಯವರು ದೇಶದ ಕೊರೊನಾ ಲಸಿಕೆ ಅಭಿಯಾನದ ಬಗ್ಗೆ ಮಾತನಾಡಿದ್ದಾರೆ. ಜೂ.21ರಂದು ಒಂದೇ ದಿನ 88 ಲಕ್ಷ ಜನರಿಗೆ ಲಸಿಕೆ ನೀಡಿ, ದಾಖಲೆ ಬರೆದಿದ್ದನ್ನು ಶ್ಲಾಘಿಸಿದರು. ನಂತರ ಇದೇ ವಿಚಾರ ಇಟ್ಟುಕೊಂಡು ರಾಹುಲ್​ ಗಾಂಧಿ ಟೀಕೆ ಮಾಡಿದರು.

ಇದನ್ನೂ ಓದಿ: ಉತ್ತರಪ್ರದೇಶ, ಉತ್ತರಾಖಂಡ ಚುನಾವಣೆಗಳಲ್ಲಿ ಮೈತ್ರಿ ಇಲ್ಲದೆ ಕಣಕ್ಕಿಳಿಯಲಿದೆ ಬಿಎಸ್​​ಪಿ: ಮಾಯಾವತಿ 

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ