AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Arbitration Center: ದೇಶದ ಮೊದಲ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಉದ್ಘಾಟಿಸಿದ ಸಿಜೆಐ ರಮಣ; ತೆಲಂಗಾಣ ಸಿಎಂ ಭಾಗಿ

1926ರಲ್ಲಿ ವಿಶ್ವದ ಮೊದಲ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಸ್ಥಾಪಿತವಾಯಿತು. ಆದರೆ ಅಂತಾರಾಷ್ಟ್ರೀಯ ವ್ಯಾಜ್ಯಗಳ ಪರಿಹಾರಕ್ಕಾಗಿ ದುಬೈ, ಸಿಂಗಪೂರ್​ಗಳಿಗೆ ಹೋಗಬೇಕಾಗಿತ್ತು. ಇದೀಗ ಹೈದರಾಬಾದ್​ಗೂ ಬರಬಹುದಾಗಿದೆ ಎಂದು ಎನ್​.ವಿ.ರಮಣ ಹೇಳಿದರು.

International Arbitration Center: ದೇಶದ ಮೊದಲ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಉದ್ಘಾಟಿಸಿದ ಸಿಜೆಐ ರಮಣ; ತೆಲಂಗಾಣ ಸಿಎಂ ಭಾಗಿ
ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಉದ್ಘಾಟಿಸಿದ ಸಿಜೆಐ ಎನ್​.ವಿ.ರಮಣ ಮತ್ತು ಮುಖ್ಯಮಂತ್ರಿ ಕೆಸಿಆರ್​
TV9 Web
| Updated By: Lakshmi Hegde|

Updated on: Dec 18, 2021 | 3:42 PM

Share

ದೇಶದ ಮೊದಲ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ(International Arbitration Center)ವನ್ನು ಇಂದು ಹೈದರಾಬಾದ್​ನಲ್ಲಿ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮುರ್ತಿ ಎನ್​.ವಿ.ರಮಣ (CJI N V Ramana) ಉದ್ಘಾಟಿಸಿದರು. ಈ ವೇಳೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್​, ನ್ಯಾಯಮೂರ್ತಿ ಎಲ್​.ನಾಗೇಶ್ವರ್​ರಾವ್ ಕೂಡ ಇದ್ದರು. ಈ ಅಂತರಾಷ್ಟ್ರೀಯ ಪಂಚಾಯಿತಿ ಮತ್ತು ಮಧ್ಯಸ್ಥಿಕೆ ಕೇಂದ್ರವನ್ನು ನಾನಕ್ ರಾಮ್ ಗುಡಾದ ವಿ.ಕೆ.ಟವರ್ಸ್​​ನಲ್ಲಿ ನಿರ್ಮಿಸಲಾಗಿದೆ. ಸದ್ಯ ಅಲ್ಲಿ ಒಂದು ತಾತ್ಕಾಲಿಕ ಕಟ್ಟಡದಲ್ಲಿ ಈ ಕೇಂದ್ರ ಸ್ಥಾಪಿಸಲಾಗಿದ್ದು, ಶೀಘ್ರದಲ್ಲೇ ಶಾಶ್ವತ ಕಟ್ಟಡ ನಿರ್ಮಾಣವಾಗಲಿದೆ. ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ, ಈ ಮಧ್ಯಸ್ಥಿಕೆ ಕೇಂದ್ರಗಳು ಭಾರತೀಯ ನ್ಯಾಯಾಂಗ ವ್ಯವಸ್ಥೆಗೆ ಆಸರೆಯಾಗುತ್ತವೆ. ಅದೆಷ್ಟೋ ವಿವಾದಗಳೆಲ್ಲ ಕೋರ್ಟ್​ ಮೆಟ್ಟಿಲೇರುವುದು ತಪ್ಪುತ್ತದೆ ಎಂದು ಹೇಳಿದರು. 

ಭಾರತದಲ್ಲಿ ಇಂಥ ರಾಜಿ ಪಂಚಾಯಿತಿ ಕೇಂದ್ರಗಳಿಗೆ ಪುರಾತನಕಾಲದ ಇತಿಹಾಸವಿದೆ. ಈಗೀಗ ಇಂಥ ಕೇಂದ್ರಗಳನ್ನು ಜಗತ್ತಿನ ಹಲವು ದೇಶಗಳಲ್ಲಿ ಸ್ಥಾಪಿಸಲಾಗಿದ್ದು, ಅದೆಷ್ಟೋ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿವೆ ಎಂದು ಹೇಳಿದ ಸಿಜೆಐ ಎನ್​.ವಿ.ರಮಣ,  ನಾನು ಇಂಥ ಮಧ್ಯಸ್ಥಿಕೆ ಕೇಂದ್ರಗಳಿಗೆ ಬೆಂಬಲ ಘೋಷಿಸುತ್ತೇನೆ. ಅದೆಷ್ಟೋ ವಿಚಾರಗಳೆಲ್ಲ ನ್ಯಾಯಾಲಯದ ಮೆಟ್ಟಿಲು ಹತ್ತುವುದು ತಪ್ಪುತ್ತದೆ. ಹಾಗಾಗಿ ಸಾಮಾನ್ಯ ಜನರೂ ಕೂಡ ಇಂಥ ಮಧ್ಯಸ್ಥಿಕೆ ಕೇಂದ್ರಗಳಿಗೆ ಮೊದಲ ಆದ್ಯತೆ ನೋಡಿ, ಕೊನೇ ಆಯ್ಕೆಯಾಗಿ ಕೋರ್ಟ್​ಗಳನ್ನು ಆರಿಸಿಕೊಳ್ಳಬೇಕು ಎಂದು ಹೇಳಿದರು. ಹಾಗೇ, ಜನರು ವಿವಾದ ಪರ್ಯಾಯ ಪರಿಹಾರದಂಥ ಇಂಥ ವಿಧಾನಗಳಿಗೆ ತೆರೆದುಕೊಳ್ಳುವುದರಿಂದ ಇದರ ವ್ಯಾಪ್ತಿಯೂ ವಿಸ್ತಾರವಾಗುತ್ತ ಹೋಗುತ್ತದೆ.  ಈಗಾಗಲೇ ಮುಂಬೈ ಮತ್ತು ದೆಹಲಿಯಲ್ಲಿ ಮಧ್ಯಸ್ಥಿಕೆ ಕೇಂದ್ರಗಳು ಇವೆ. ಇದೀಗ ಹೈದರಾಬಾದ್​ನಲ್ಲಿ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆಯಾಗಿದ್ದರಿಂದ ವಿದೇಶಿ ಕಕ್ಷಿದಾರರಿಗೂ ತಮ್ಮ ವ್ಯಾಜ್ಯ, ವಿವಾದ ಪರಿಹರಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.

1926ರಲ್ಲಿ ವಿಶ್ವದ ಮೊದಲ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಸ್ಥಾಪಿತವಾಯಿತು. ಆದರೆ ಅಂತಾರಾಷ್ಟ್ರೀಯ ವ್ಯಾಜ್ಯಗಳ ಪರಿಹಾರಕ್ಕಾಗಿ ದುಬೈ, ಸಿಂಗಪೂರ್​ಗಳಿಗೆ ಹೋಗಬೇಕಾಗಿತ್ತು. ಇದೀಗ ಹೈದರಾಬಾದ್​ಗೂ ಬರಬಹುದಾಗಿದೆ. ಅಂತಾರಾಷ್ಟ್ರೀಯ ಮಧ್ಯಸ್ಥಿಕೆಗಾರರು ಇಲ್ಲಿಗೂ ಬರುತ್ತಾರೆ ಎಂದು ಹೇಳಿದ ಸಿಜೆಐ ಎನ್​.ವಿ.ರಮಣ, ಈ ಕೇಂದ್ರಕ್ಕೆ ಸಂಬಂಧಪಟ್ಟ ಜವಾಬ್ದಾರಿಯನ್ನು ತೆಗೆದುಕೊಳ್ಳುವಂತೆ ನ್ಯಾಯಮೂರ್ತಿ ನಾಗೇಶ್ವರ್​ ರಾವ್​ಗೆ ತಿಳಿಸಿದರು. ಇದೇ ವೇಳೆ ಪಿ.ವಿ.ನರಸಿಂಹ ರಾವ್​ ಅವರು, ಮಧ್ಯಸ್ಥಿಕೆ ಕೇಂದ್ರಗಳಿಗೆ ಎಷ್ಟು ಒತ್ತು ಕೊಡುತ್ತಿದ್ದರು ಎಂಬುದನ್ನು ತಿಳಿಸಿದ ಅವರು,  ಆರ್ಬಿಟ್ರೇಷನ್ ಕಾಯ್ದೆಗೆ ಒಂದು ರೂಪುರೇಷೆ ಸಿಕ್ಕಿದ್ದು ಪಿ.ವಿ.ನರಸಿಂಹ ರಾವ್​ ಆಡಳಿತದಲ್ಲಿಯೇ ಎಂದು ಹೇಳಿದರು.

ಇದನ್ನೂ ಓದಿ: IPL 2022: ಯಾವ ತಂಡದ ಪರ ಆಡುತ್ತೀರಿ? ಸುಳಿವು ನೀಡಿದ ಅಶ್ವಿನ್

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ