AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಬಸ್​ ಡ್ರೈವರ್​ ಆದ ಮೂರು ಮಕ್ಕಳ ತಾಯಿ!

ಜಮ್ಮು-ಕಥುವಾ ಮಾರ್ಗದಲ್ಲಿ ಪೂಜಾ ಬಸ್​ ಚಾಲನೆ ಮಾಡಿದ್ದಾರೆ. ಸಾಕಷ್ಟು ಪ್ರಯಾಣಿಕರು ಬಸ್​ನಲ್ಲಿ ಕೂತಿದ್ದರು. ಇವರು ಬಸ್​ ಚಲಾವಣೆ ಮಾಡುತ್ತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಬಸ್​ ಡ್ರೈವರ್​ ಆದ ಮೂರು ಮಕ್ಕಳ ತಾಯಿ!
ಮೊದಲ ಮಹಿಳಾ ಬಸ್​ ಡ್ರೈವರ್
ರಾಜೇಶ್ ದುಗ್ಗುಮನೆ
|

Updated on:Dec 26, 2020 | 5:25 PM

Share

ಜಮ್ಮು: ಅವರ ಹೆಸರು ಪೂಜಾ ದೇವಿ. ಚಿಕ್ಕ ವಯಸ್ಸಿನಲ್ಲಿ ಸರಿಯಾದ ಶಿಕ್ಷಣ ಸಿಕ್ಕಿರಲಿಲ್ಲ. ಆದರೆ, ದೊಡ್ಡ ದೊಡ್ಡ ವಾಹನಗಳನ್ನು ಅನಾಯಾಸವಾಗಿ ಚಲಾಯಿಸುವ ಕಲೆ ಇವರಿಗೆ ಕರಗತವಾಗಿತ್ತು. ಈಗ ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಬಸ್​ ಚಾಲಕಿಯಾಗಿ ಪೂಜಾ ದೇವಿ ನೇಮಕಗೊಂಡಿದ್ದಾರೆ.

ಜಮ್ಮು-ಕಥುವಾ ಮಾರ್ಗದಲ್ಲಿ ಪೂಜಾ ಬಸ್​ ಚಾಲನೆ ಮಾಡಿದ್ದಾರೆ. ಸಾಕಷ್ಟು ಪ್ರಯಾಣಿಕರು ಬಸ್​ನಲ್ಲಿ ಕೂತಿದ್ದರು. ಇವರು ಬಸ್​ ಚಲಾವಣೆ ಮಾಡುತ್ತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇವರು ಮೂರು ಮಕ್ಕಳ ತಾಯಿ. ತಾಯಿ ಬಸ್​ ಓಡಿಸುವಾಗ ಓರ್ವ ಮಗ ಬಸ್​​ನಲ್ಲಿ ಇವರ ಜೊತೆ ಇದ್ದ.

ಪೂಜಾ ಬಡ ಕುಟುಂಬದಿಂದ ಬಂದವರು. ಹೀಗಾಗಿ ಶಿಕ್ಷಣ ಎಂಬುದು ಗಗನ ಕುಸುಮವಾಗಿತ್ತು. ಶಿಕ್ಷಣವಂತೂ ಸಿಕ್ಕಿಲ್ಲ. ಹೀಗಾಗಿ, ಬೇರೆ ಏನಾದರೂ ಮಾಡಬೇಕು ಎನ್ನುವ ಕನಸು ಇವರದ್ದಾಗಿತ್ತು. ಬಸ್​ ಡ್ರೈವ್​ ಮಾಡುವುದನ್ನು ಕಲಿತ ನಂತರ ಪೂಜಾ ಲೈಸೆನ್ಸ್​ ಕೂಡ ಪಡೆದುಕೊಂಡಿದ್ದರು.

ಈ ಬಗ್ಗೆ ಸಂತಸ ಹಂಚಿಕೊಂಡಿರುವ ಪೂಜಾ, ನಾನು ಅನೇಕ ವರ್ಷಗಳಿಂದ ಬಸ್​ ಚಾಲಕಿ ಆಗಬೇಕು ಎನ್ನುವ ಕನಸು ಕಂಡಿದ್ದೆ. ಆದರೆ, ಈಗ ಕನಸು ನನಸಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಗಂಡು-ಹೆಣ್ಣು ಭೇದ-ಭಾವ ಹೋಗಬೇಕು ಎನ್ನುವುದೇ ನನ್ನ ಉದ್ದೇಶ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಅವಂತಿಪುರದಲ್ಲಿ ನಾಲ್ವರು ಉಗ್ರರ ಸೆರೆ

Published On - 5:19 pm, Sat, 26 December 20

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ