AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಬಸ್​ ಡ್ರೈವರ್​ ಆದ ಮೂರು ಮಕ್ಕಳ ತಾಯಿ!

ಜಮ್ಮು-ಕಥುವಾ ಮಾರ್ಗದಲ್ಲಿ ಪೂಜಾ ಬಸ್​ ಚಾಲನೆ ಮಾಡಿದ್ದಾರೆ. ಸಾಕಷ್ಟು ಪ್ರಯಾಣಿಕರು ಬಸ್​ನಲ್ಲಿ ಕೂತಿದ್ದರು. ಇವರು ಬಸ್​ ಚಲಾವಣೆ ಮಾಡುತ್ತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಬಸ್​ ಡ್ರೈವರ್​ ಆದ ಮೂರು ಮಕ್ಕಳ ತಾಯಿ!
ಮೊದಲ ಮಹಿಳಾ ಬಸ್​ ಡ್ರೈವರ್
ರಾಜೇಶ್ ದುಗ್ಗುಮನೆ
|

Updated on:Dec 26, 2020 | 5:25 PM

Share

ಜಮ್ಮು: ಅವರ ಹೆಸರು ಪೂಜಾ ದೇವಿ. ಚಿಕ್ಕ ವಯಸ್ಸಿನಲ್ಲಿ ಸರಿಯಾದ ಶಿಕ್ಷಣ ಸಿಕ್ಕಿರಲಿಲ್ಲ. ಆದರೆ, ದೊಡ್ಡ ದೊಡ್ಡ ವಾಹನಗಳನ್ನು ಅನಾಯಾಸವಾಗಿ ಚಲಾಯಿಸುವ ಕಲೆ ಇವರಿಗೆ ಕರಗತವಾಗಿತ್ತು. ಈಗ ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಬಸ್​ ಚಾಲಕಿಯಾಗಿ ಪೂಜಾ ದೇವಿ ನೇಮಕಗೊಂಡಿದ್ದಾರೆ.

ಜಮ್ಮು-ಕಥುವಾ ಮಾರ್ಗದಲ್ಲಿ ಪೂಜಾ ಬಸ್​ ಚಾಲನೆ ಮಾಡಿದ್ದಾರೆ. ಸಾಕಷ್ಟು ಪ್ರಯಾಣಿಕರು ಬಸ್​ನಲ್ಲಿ ಕೂತಿದ್ದರು. ಇವರು ಬಸ್​ ಚಲಾವಣೆ ಮಾಡುತ್ತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇವರು ಮೂರು ಮಕ್ಕಳ ತಾಯಿ. ತಾಯಿ ಬಸ್​ ಓಡಿಸುವಾಗ ಓರ್ವ ಮಗ ಬಸ್​​ನಲ್ಲಿ ಇವರ ಜೊತೆ ಇದ್ದ.

ಪೂಜಾ ಬಡ ಕುಟುಂಬದಿಂದ ಬಂದವರು. ಹೀಗಾಗಿ ಶಿಕ್ಷಣ ಎಂಬುದು ಗಗನ ಕುಸುಮವಾಗಿತ್ತು. ಶಿಕ್ಷಣವಂತೂ ಸಿಕ್ಕಿಲ್ಲ. ಹೀಗಾಗಿ, ಬೇರೆ ಏನಾದರೂ ಮಾಡಬೇಕು ಎನ್ನುವ ಕನಸು ಇವರದ್ದಾಗಿತ್ತು. ಬಸ್​ ಡ್ರೈವ್​ ಮಾಡುವುದನ್ನು ಕಲಿತ ನಂತರ ಪೂಜಾ ಲೈಸೆನ್ಸ್​ ಕೂಡ ಪಡೆದುಕೊಂಡಿದ್ದರು.

ಈ ಬಗ್ಗೆ ಸಂತಸ ಹಂಚಿಕೊಂಡಿರುವ ಪೂಜಾ, ನಾನು ಅನೇಕ ವರ್ಷಗಳಿಂದ ಬಸ್​ ಚಾಲಕಿ ಆಗಬೇಕು ಎನ್ನುವ ಕನಸು ಕಂಡಿದ್ದೆ. ಆದರೆ, ಈಗ ಕನಸು ನನಸಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಗಂಡು-ಹೆಣ್ಣು ಭೇದ-ಭಾವ ಹೋಗಬೇಕು ಎನ್ನುವುದೇ ನನ್ನ ಉದ್ದೇಶ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಅವಂತಿಪುರದಲ್ಲಿ ನಾಲ್ವರು ಉಗ್ರರ ಸೆರೆ

Published On - 5:19 pm, Sat, 26 December 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ