AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಬಸ್​ ಡ್ರೈವರ್​ ಆದ ಮೂರು ಮಕ್ಕಳ ತಾಯಿ!

ಜಮ್ಮು-ಕಥುವಾ ಮಾರ್ಗದಲ್ಲಿ ಪೂಜಾ ಬಸ್​ ಚಾಲನೆ ಮಾಡಿದ್ದಾರೆ. ಸಾಕಷ್ಟು ಪ್ರಯಾಣಿಕರು ಬಸ್​ನಲ್ಲಿ ಕೂತಿದ್ದರು. ಇವರು ಬಸ್​ ಚಲಾವಣೆ ಮಾಡುತ್ತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಬಸ್​ ಡ್ರೈವರ್​ ಆದ ಮೂರು ಮಕ್ಕಳ ತಾಯಿ!
ಮೊದಲ ಮಹಿಳಾ ಬಸ್​ ಡ್ರೈವರ್
ರಾಜೇಶ್ ದುಗ್ಗುಮನೆ
|

Updated on:Dec 26, 2020 | 5:25 PM

Share

ಜಮ್ಮು: ಅವರ ಹೆಸರು ಪೂಜಾ ದೇವಿ. ಚಿಕ್ಕ ವಯಸ್ಸಿನಲ್ಲಿ ಸರಿಯಾದ ಶಿಕ್ಷಣ ಸಿಕ್ಕಿರಲಿಲ್ಲ. ಆದರೆ, ದೊಡ್ಡ ದೊಡ್ಡ ವಾಹನಗಳನ್ನು ಅನಾಯಾಸವಾಗಿ ಚಲಾಯಿಸುವ ಕಲೆ ಇವರಿಗೆ ಕರಗತವಾಗಿತ್ತು. ಈಗ ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಬಸ್​ ಚಾಲಕಿಯಾಗಿ ಪೂಜಾ ದೇವಿ ನೇಮಕಗೊಂಡಿದ್ದಾರೆ.

ಜಮ್ಮು-ಕಥುವಾ ಮಾರ್ಗದಲ್ಲಿ ಪೂಜಾ ಬಸ್​ ಚಾಲನೆ ಮಾಡಿದ್ದಾರೆ. ಸಾಕಷ್ಟು ಪ್ರಯಾಣಿಕರು ಬಸ್​ನಲ್ಲಿ ಕೂತಿದ್ದರು. ಇವರು ಬಸ್​ ಚಲಾವಣೆ ಮಾಡುತ್ತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇವರು ಮೂರು ಮಕ್ಕಳ ತಾಯಿ. ತಾಯಿ ಬಸ್​ ಓಡಿಸುವಾಗ ಓರ್ವ ಮಗ ಬಸ್​​ನಲ್ಲಿ ಇವರ ಜೊತೆ ಇದ್ದ.

ಪೂಜಾ ಬಡ ಕುಟುಂಬದಿಂದ ಬಂದವರು. ಹೀಗಾಗಿ ಶಿಕ್ಷಣ ಎಂಬುದು ಗಗನ ಕುಸುಮವಾಗಿತ್ತು. ಶಿಕ್ಷಣವಂತೂ ಸಿಕ್ಕಿಲ್ಲ. ಹೀಗಾಗಿ, ಬೇರೆ ಏನಾದರೂ ಮಾಡಬೇಕು ಎನ್ನುವ ಕನಸು ಇವರದ್ದಾಗಿತ್ತು. ಬಸ್​ ಡ್ರೈವ್​ ಮಾಡುವುದನ್ನು ಕಲಿತ ನಂತರ ಪೂಜಾ ಲೈಸೆನ್ಸ್​ ಕೂಡ ಪಡೆದುಕೊಂಡಿದ್ದರು.

ಈ ಬಗ್ಗೆ ಸಂತಸ ಹಂಚಿಕೊಂಡಿರುವ ಪೂಜಾ, ನಾನು ಅನೇಕ ವರ್ಷಗಳಿಂದ ಬಸ್​ ಚಾಲಕಿ ಆಗಬೇಕು ಎನ್ನುವ ಕನಸು ಕಂಡಿದ್ದೆ. ಆದರೆ, ಈಗ ಕನಸು ನನಸಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಗಂಡು-ಹೆಣ್ಣು ಭೇದ-ಭಾವ ಹೋಗಬೇಕು ಎನ್ನುವುದೇ ನನ್ನ ಉದ್ದೇಶ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಅವಂತಿಪುರದಲ್ಲಿ ನಾಲ್ವರು ಉಗ್ರರ ಸೆರೆ

Published On - 5:19 pm, Sat, 26 December 20

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್